Homeಮುಖಪುಟಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ

- Advertisement -
- Advertisement -

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ, ಚರ್ಚೆಗಳು ಮತ್ತು ಪ್ರಶ್ನೆಗಳು ಅವರ ಸುತ್ತ ಕೇಂದ್ರೀಕೃತವಾಗಿರದೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇಬ್ಬರು ಪಾಲುದಾರರ ಸುತ್ತ ಸುತ್ತುತ್ತಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರು ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬಂದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೂ, ಆಂಧ್ರ ಪ್ರದೇಶ ಮತ್ತು ಬಿಹಾರದ ಈ ಇಬ್ಬರು ನಾಯಕರ ಬೆಂಬಲದಿಂದ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೇರಿದ್ದಾರೆ. ಈ ನಡುವೆ ಇಬ್ಬರೂ ಕೂಡ ತಮ್ಮ ಪಕ್ಷಕ್ಕೆ ಸ್ವೀಕರ್ ಹುದ್ದೆ ನೀಡುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಎನ್‌ಡಿಎ ಸರ್ಕಾರಕ್ಕೆ ಬೆನ್ನೆಲುಬಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಸಚಿವ ಸ್ಥಾನಕ್ಕಿಂತ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿದ್ದಾರೆ? ಎಂದು ನಿಮಗನಿಸಬಹುದು. ಈ ಪ್ರಶ್ನೆಗೆ 1985ರಲ್ಲಿ 52ನೇ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಸೂಚಿಸಲಾದ ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಉತ್ತರವಿದೆ.

ಸ್ವಯಂ ಪ್ರೇರಣೆಯಿಂದ ತಮ್ಮ ರಾಜಕೀಯ ಪಕ್ಷದ ಸದಸ್ಯತ್ವವನ್ನು ತೊರೆಯುವ ಅಥವಾ ಪಕ್ಷದ ಸೂಚನೆಗಳಿಗೆ ವಿರುದ್ಧವಾಗಿ ಮತ ಚಲಾಯಿಸುವ ಶಾಸಕರು, ಸಂಸದರು ಅನರ್ಹತೆಗೆ ಅರ್ಹರಾಗುತ್ತಾರೆ. ಆದರೆ, ಪಕ್ಷದ ಮೂರನೇ ಎರಡರಷ್ಟು ಚುನಾಯಿತ ಸಂಸದರು ಅಥವಾ ಶಾಸಕರು ಇನ್ನೊಂದು ಪಕ್ಷಕ್ಕೆ ಹೋದರೆ 10ನೇ ಶೆಡ್ಯೂಲ್ ಅವರನ್ನು ಅನರ್ಹತೆಯಿಂದ ರಕ್ಷಿಸುತ್ತದೆ. ಇಂತಹ ಸನ್ನಿವೇಶದಲ್ಲಿ ಚುನಾಯಿತರನ್ನು ಅನರ್ಹಗೊಳಿಸಬೇಕೇ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ, ಮಹಾರಾಷ್ಟ್ರದಲ್ಲಿ ಜನವರಿ 2024ರಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ‘ನೈಜ’ ಶಿವಸೇನೆ ಪಕ್ಷದ ಸ್ಥಾನಮಾನ ನೀಡಿರುವುದು. ಶಿಂಧೆ ನೇತೃತ್ವದ ಶಾಸಕರ ಬಣವು ಜೂನ್ 2022ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತಿರುಗಿಬಿದ್ದಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಫೆಬ್ರವರಿ 2023ರಲ್ಲಿ, ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್‌ನ ನಾಗರಿಕ ಮತ್ತು ಶಾಸಕಾಂಗ ಸಂಶೋಧನಾ ತೊಡಗುವಿಕೆಗಳ ಮುಖ್ಯಸ್ಥ ಚಕ್ಷು ರಾಯ್, “ಪ್ರಾಥಮಿಕವಾಗಿ ಭಾರತದಲ್ಲಿ ಸ್ಪೀಕರ್‌ ಸ್ಥಾನ ವಿರೋಧಾಭಾಸವಾಗಿದೆ. ಇದು ನಮ್ಮ ಶಾಸನ ರಚನೆ ಸಂಸ್ಥೆಯಾದ ಲೋಕಸಭೆಯ ಹೃದಯ ಭಾಗದಲ್ಲಿರುವ ಅತ್ಯಂತ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾಗಿದೆ. ಸ್ಪೀಕರ್‌ಗಳು ಪಕ್ಷೇತರರಾಗಿರಬೇಕು. ಸ್ಪೀಕರ್‌ ಹುದ್ದೆಯಲ್ಲಿರುವಾಗ ಪಕ್ಷದ ಸದಸ್ಯತ್ವ ತೊರೆದು ಸಾಂವಿಧಾನಿಕ ಜವಬ್ದಾರಿ ನಿರ್ವಹಿಸುತ್ತಾರೆ. ಹುದ್ದೆಯಿಂದ ಕೆಳಗಿಳಿದ ಬಳಿಕ ಅವರ ರಾಜಕೀಯ ವೃತ್ತಿ ಜೀವನದ ನಿರಂತರತೆಗಾಗಿ ಮತ್ತೆ ತಮ್ಮ ಪಕ್ಷಕ್ಕೆ ಮರಳುತ್ತಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ” ಎಂದು ಹೇಳಿದ್ದಾರೆ.

ಲೋಕಸಭೆಯ ಸ್ಪೀಕರ್‌ ಅವರ ಪಕ್ಷಾತೀತತೆಯ ಕೊರತೆಯು ವಿವಾದದ ವಿಷಯವಾಗಿದೆ. ಜಿಎಂಸಿ ಬಾಲಯೋಗಿ (12ನೇ ಮತ್ತು 13ನೇ ಲೋಕಸಭೆ ಸ್ಪೀಕರ್) ಹಲವಾರು ಸಂಸದೀಯ ಸಮಿತಿಗಳ ಅಧ್ಯಕ್ಷರಾಗಿದ್ದರು ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಸ್ಪೀಕರ್ ಹುದ್ದೆಯ ಪಕ್ಷಾತೀತ ಸ್ವರೂಪದ ಹೊರತಾಗಿಯೂ, ಬಾಲಯೋಗಿ ಅವರು ಟಿಡಿಪಿ ನಾಯಕರಾಗಿದ್ದರು, ತಮ್ಮ ಪಕ್ಷದ ಹಿತಾಸಕ್ತಿಗಳನ್ನು ರಕ್ಷಿಸಲು ಉತ್ಸುಕರಾಗಿದ್ದರು.

ಸುಮಾರು 10 ವರ್ಷಗಳ ಹಿಂದೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ನಿತೀಶ್ ಅವರ ಜೆಡಿಯು ಜೊತೆಗಿನ ಮಹಾಘಟಬಂಧನ್ (ಮಹಾ ಮೈತ್ರಿ) ಬದ್ಧತೆಯ ಬಗ್ಗೆ ನೀಡಿದ್ದ ಹೇಳಿಕೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈಗ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿರಬಹುದು ಎಂಬುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಸುತ್ತದೆ.

“ನಾವು ನಿಜವಾಗಿಯೂ ಹೆಚ್ಚಿನ ಅಧಿಕಾರಕ್ಕಾಗಿ ಸರ್ಕಾರವನ್ನು ಬೀಳಿಸಲು ಬಯಸಿದ್ದರೆ ಸ್ಪೀಕರ್ ಹುದ್ದೆ ಕೇಳುತ್ತಿದ್ದೆವು” ಎಂದು ಯಾದವ್ ಹೇಳಿದ್ದರು. ಅಂದರೆ, ಇಲ್ಲಿ ಸರ್ಕಾರ ಬೀಳಿಸುವ ಮತ್ತು ರಚಿಸುವ ಅಧಿಕಾರ ಸ್ಪೀಕರ್‌ ಕೈಯ್ಯಲ್ಲಿರುತ್ತದೆ. ಆದ್ದರಿಂದ ಆ ಹುದ್ದೆ ಅಷ್ಟೊಂದು ಮಹತ್ವದ್ದು ಎಂದು ನಮಗೆ ಅರ್ಥವಾಗುತ್ತದೆ.

ಇದನ್ನೂ ಓದಿ : ಮೋದಿ ಸರ್ಕಾರದ 72 ಸಚಿವರಲ್ಲಿ 7 ಮಹಿಳೆಯರಿಗೆ ಅವಕಾಶ; ಇಬ್ಬರಿಗೆ ಮಾತ್ರ ಕ್ಯಾಬಿನೆಟ್ ದರ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...