Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...