Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...