Homeಅಂತರಾಷ್ಟ್ರೀಯIMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

IMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

ದಕ್ಷಿಣ ಅಮೇರಿಕಾ ಖಂಡದ ವಾಯವ್ಯ ಕರಾವಳಿಯಲ್ಲಿರುವ ಪುಟ್ಟ ರಾಷ್ಟ್ರ ಈಕ್ವಡೋರ್‌ನ ಮೂಲನಿವಾಸಿ ಜನರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಜೊತೆ ಸೇರಿ ನಡೆಸಿದ ಎರಡು ವಾರಗಳ ಉಗ್ರ ಪ್ರತಿಭಟನೆಯ ಬಳಿಕ ಸರಕಾರವನ್ನು ಮಣಿಸಿ, ಐಎಂಎಫ್ ಹೇರಿದ್ದ ಆರ್ಥಿಕ 'ಸುಧಾರಣೆ'ಗಳನ್ನು ತಿರಸ್ಕರಿಸುವಂತೆ ಮಾಡಿದ್ದಾರೆ.

- Advertisement -
- Advertisement -

ಮೂಲ: ಸ್ವಾತಿ ಶುಕ್ಲಾ

ಅನುವಾದ: ನಿಖಿಲ್ ಕೋಲ್ಪೆ

ಈಕ್ವಡೋರ್ ರಾಜಧಾನಿ ಕ್ವಿಟೋ ಕಳೆದ ಎರಡು ವಾರಗಳಿಂದ ರಣರಂಗವಾಗಿಬಿಟ್ಟಿತ್ತು. ಕಾರಣವೆಂದರೆ, ಇಂಧನ ಸಬ್ಸಿಡಿಯ ಹಿಂತೆಗೆತವನ್ನು ಮೂಲ ನಿವಾಸಿ ಜನರು ಖಂಡತುಂಡವಾಗಿ ಪ್ರತಿಭಟಿಸಿದ್ದರು. ಇಂಧನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿರುವುದಾಗಿ ಅಧ್ಯಕ್ಷ ಲೆನಿನ್ ಮೊರೆನೊ ಘೋಷಿಸಿದ ಬೆನ್ನಲ್ಲೇ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಇದೀಗ ಪ್ರತಿಭಟನಕಾರರಿಗೆ ಮಣಿದಿರುವ ಸರಕಾರ, ಐಎಂಎಫ್ ಹೇರಿದ್ದ ಪ್ಯಾಕೇಜನ್ನು ಹಿಂತೆಗೆದುಕೊಂಡಿದೆ.

ಮೊರೆನೊ ಸರಕಾರವು ಪ್ರಸ್ತಾಪಿಸಿದ್ದ ಹಲವಾರು ನವ ‘ಉದಾರವಾದಿ’ ಕ್ರಮಗಳಲ್ಲಿ ತೈಲ ಸಬ್ಸಿಡಿ ಹಿಂತೆಗೆತವೂ ಒಂದಾಗಿತ್ತು. ಮೂಲನಿವಾಸಿ ಗುಂಪುಗಳು ದೇಶದ ಅತ್ಯಂತ ದೊಡ್ಡ ಕಾರ್ಮಿಕ ಸಂಘಟನೆಗಳು ಹಾಗೂ ವಿದ್ಯಾರ್ಥಿ ಚಳವಳಿಗಳ ಜೊತೆ ಸೇರಿ ರಾಷ್ಟ್ರೀಯ ಮುಷ್ಕರವನ್ನು ಆಯೋಜಿಸಿದ್ದು, ಮಿಲಿಟರಿ ಮತ್ತು ಪೊಲೀಸ್ ಪಡೆಗಳು ಅತ್ಯಂತ ದಮನಕಾರಿಯಗಿ ಪ್ರತಿಭಟನೆಯನ್ನು ಬಗ್ಗುಬಡಿಯಲು ಯತ್ನಿಸಿದ್ದವು.

ಮೊದಲಾಗಿ ಇಂಧನ ಸಬ್ಸಿಡಿ ಹಿಂತೆಗೆತದ ವಿರುದ್ಧ ಆರಂಭವಾದ ಪ್ರತಿಭಟನೆಗಳು ಮೂಲನಿವಾಸಿ ಗುಂಪುಗಳ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಮತ್ತು ಅದರ ಧಣಿಗಳು ಹೇರಿರುವ ‘ನವ ಉದಾರವಾದಿ’ ಮಾದರಿಯ ವಿರುದ್ಧದ ಪ್ರತಿಭಟನೆಯಾಗಿ ಪರಿವರ್ತನೆಗೊಂಡು ಉಗ್ರರೂಪ ತಳೆಯಿತು.

ಲೆನಿನ್ ಮೊರೆನೊ

ಮಾರ್ಚ್ 2019ರಲ್ಲಿ ಐಎಂಎಫ್ ಹಲವು ಶರತ್ತುಗಳೊಂದಿಗೆ ಈಕ್ವಡೋರ್‌ಗೆ 4.2 ಬಿಲಿಯನ್ (420 ಕೋಟಿ) ಡಾಲರ್‌ಗಳ ಸಾಲ ನೀಡಿತ್ತು. ಇಂತಹ ಶರತ್ತುಗಳಲ್ಲಿ ಹಲವು ಅಂತರರಾಷ್ಟ್ರೀಯ ಹಗರಣಗಳನ್ನು ಬಯಲು ಮಾಡಿದ ವೀಕೀಲೀಕ್ಸ್ ಸಂಪಾದಕ ಜೂಲಿಯನ್ ಅಸ್ಸಾಂಜೆಯನ್ನು ಯುಎಸ್‌ಎಗೆ ಬಿಟ್ಟುಕೊಡಬೇಕು ಎಂಬುದೂ ಒಂದಾಗಿತ್ತು.

“ನಾವು ಈಕ್ವಡೋರ್‌ಗೆ ನೆರವಾಗಲು ಇಲ್ಲಿದ್ದೇವೆ. ನಮ್ಮ ಉದ್ದೇಶ ಎಂದರೆ, ಆರ್ಥಿಕತೆಯನ್ನು ಆಧುನಿಕರಣಗೊಳಿಸಲು ಈಕ್ವಡೋರಿಗೆ ನೆರವಾಗಿ, ಸುದೃಢ, ಸುಸ್ಥಿರ ಮತ್ತು ನ್ಯಾಯಸಮ್ಮತ ಅಭಿವೃದ್ಧಿಗೆ ದಾರಿಮಾಡಿಕೊಡುವುದು” ಎಂದು ಐಎಂಎಫ್ ಆಡಳಿತ ಮಂಡಳಿ ತನ್ನ ಎಂದಿನ ಬಂಡವಾಳಶಾಹಿ ಶೈಲಿಯಲ್ಲಿ ಬುರುಡೆ ಬಿಟ್ಟಿತ್ತು. ಇದರ ಬೆನ್ನಲ್ಲೇ ಹಲವಾರು “ಸಂಯಮದ” “ಸುಧಾರಣಾ” ಕ್ರಮಗಳನ್ನು ಹೇರಲಾಗಿತ್ತು.

ಐಎಂಎಫ್ ಜೊತೆ ಕಳೆದ ವರ್ಷ ನಡೆಸಿದ ಒಪ್ಪಂದಕ್ಕೆ ಅನುಗುಣವಾಗಿ ಮೊರೆನೊ ಸರಕಾರ ಸೆಪ್ಟೆಂಬರ್ 30ರಂದು ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿಯನ್ನು ಹಿಂತೆಗೆದುಕೊಂಡಿತ್ತು. ಇದರಿಂದ ಸಹಜವಾಗಿ ಇವೆರಡರ ಬೆಲೆಗಳು ಗಗನಕ್ಕೇರಿದ್ದವು.

ಇಂಧನ ಸಬ್ಸಿಡಿ ಹಿಂತೆಗೆತದ ಅರ್ಥವೆಂದರೆ, ಬಡವರು ಮತ್ತು ದುಡಿಯುವ ವರ್ಗದವರು ಇಂಧನಕ್ಕೆ ಹೆಚ್ಚು ಬೆಲೆ ತೆರಬೇಕಾದರೆ, ಖಾಸಗಿ ಇಂಧನ ಸಂಸ್ಥೆಗಳು ಹೆಚ್ಚು ಲಾಭವನ್ನು ದೋಚಬಹುದು.

“ಸರಕಾರ ಮಾಡಿರುವುದು ಏನೆಂದರೆ, ದೊಡ್ಡ ಬ್ಯಾಂಕುಗಳು, ಬಂಡವಾಳಶಾಹಿಗಳಿಗೆ ಬಹುಮಾನ ನೀಡಿ, ಬಡ ಈಕ್ವಡೋರಿಯನ್ನರಿಗೆ ಶಿಕ್ಷೆ ನೀಡಿರುವುದು” ಎಂದು ಕಾರ್ಮಿಕರ ಸಂಘಟನೆಗಳ ಒಕ್ಕೂಟವಾಗಿರುವ ವರ್ಕರ್ಸ್ ಯುನೈಟೆಡ್ ಫ್ರಂಟ್‌ನ ಮುಖ್ಯಸ್ಥ ಮೆಸಿಯಾಸ್ ಟಟಮುಯೆಸ್ ಹೇಳಿದ್ದಾರೆ.

ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಏಕೆಂದರೆ, ಇಂಧನ ಬೆಲೆ ಏರಿಕೆಯಿಂದ ಆಹಾರ ಮತ್ತು ಸಾರಿಗೆ ದರಗಳು ಗಗನಕ್ಕೇರಿದ್ದು, ಮೂಲ ನಿವಾಸಿ ಜನರು ಎಲ್ಲರಿಗಿಂತಲೂ ಹೆಚ್ಚು ಬಾಧಿತರಾಗಿದ್ದಾರೆ ಎಂದು ಪ್ರತಿಭಟನೆಯ ನಾಯಕರು ಹೇಳುತ್ತಾರೆ.

ಪ್ರತಿಭಟನಕಾರರು ಅಧ್ಯಕ್ಷೀಯ ಅರಮನೆಯ ಸುತ್ತಲಿನ ತಡೆಗಳನ್ನು ಭೇದಿಸಿ ಮುನ್ನುಗ್ಗುವ ವಿಫಲ ಪ್ರಯತ್ನ ನಡೆಸಿದ ಬಳಿಕ ಹೆದರಿದ ಮೊರೆನೊ, ತನ್ನ ಸರಕಾರವನ್ನು, ಆಡಳಿತವನ್ನು ಅಕ್ಟೋಬರ್ 7ರಂದು ಬಂದರು ನಗರ ಗ್ವಾಯಾಗುಲಿಗೆ ಸ್ಥಳಾಂತರಿಸಬೇಕಾಗಿ ಬಂದಿತ್ತು.

ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಮೇ, 2017ರಂದು ಅಧಿಕಾರ ತೊರೆದ ಮೇಲೆ ಮೊರೆನೊ ಸರಕಾರ ದೇಶವನ್ನು ಬಲಪಂಥದತ್ತ ಒಯ್ಯುತ್ತಿದೆ. ಈಗ ಮೊರೆನೊ, ಉದ್ಯಮಿಗಳು ಮತ್ತು ಸೇನೆಯ ಬೆಂಬಲ ಹೊಂದಿದ್ದರೂ, ಅವರ ಜನಪ್ರಿಯತೆ 2017ರಲ್ಲಿದ್ದ 70 ಶೇಕಡಾದಿಂದ 30 ಶೇಕಡಾಕ್ಕೆ ಕುಸಿದಿದೆ. ಮೊರೆನೊ ಅಧಿಕಾರಕ್ಕೆ ಬಂದ ಮೇಲೆ ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಸರಕಾರ ತಂದಿದ್ದ ಹಲವು ಪ್ರಗತಿಪರ ಕ್ರಮಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.

ಪ್ರತಿಭಟನೆಯು ಎರಡನೇ ವಾರ ಪ್ರವೇಶಿಸುತ್ತಿದ್ದಂತೆ, ಮೂಲ ನಿವಾಸಿ ಪ್ರತಿಭಟನಕಾರರು ತಾವು ವಶಕ್ಕೆ ತೆಗೆದುಕೊಂಡ ಕೆಲವು ಪೊಲೀಸರನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡುವ ಮೂಲಕ ಮೊರೆನೊ ಸರಕಾರಕ್ಕೆ ತಾವು ಅಂಜುವುದಿಲ್ಲ ಎಂಬ ದಿಟ್ಟ ಸಂದೇಶ ನೀಡಿದ್ದರು.

ಮೂಲನಿವಾಸಿಗಳ ಪ್ರತಿಭಟನೆಗಳು 1997ರಲ್ಲಿ ಅಬ್ದಲಾ ಬುಕಾರಮ್, 2000ದಲ್ಲಿ ಜಮಿಲ್ ಮಹುವದ್ ಮತ್ತು 2005ರಲ್ಲಿ ಲೂಸಿಯೋ ಗುಟಿಯೆರೆಝ್ ಸಹಿತ ಹಲವಾರು ಅಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ.

ಇದೀಗ ಪ್ರತಿಭಟನೆಗೆ ಮಣಿದಿರುವ ಮೊರೆನೊ ಸರಕಾರವು ಮೂಲನಿವಾಸಿಗಳೊಂದಿಗೆ ಬುಧವಾರ ಒಪ್ಪಂದಕ್ಕೆ ಬಂದಿದ್ದು, ಐಎಂಎಫ್ ಹೇರಿಕೆಯ ‘ಸುಧಾರಣಾ ಕ್ರಮ’ಗಳನ್ನು ಹಿಂತೆದುಕೊಳ್ಳಲು ಒಪ್ಪಿದೆ. ಇದರೊಂದಿಗೆ ಆರ್ಥಿಕತೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿ, ಏಳು ಜನರ ಸಾವಿಗೆ ಕಾರಣವಾದ ಹೆಚ್ಚುಕಡಿಮೆ ಎರಡು ವಾರ ಕಾಲದ ಪ್ರತಿಭಟನೆ ಕೊನೆಗೊಳ್ಳಲಿದೆ.

ಒಪ್ಪಂದದ ಪ್ರಕಾರ, ತೈಲ ಬೆಲೆ ತೀವ್ರ ಏರಿಕೆಗೆ ಕಾರಣವಾದ ಡಿಕ್ರಿ 883 ಎಂದು ಕರೆಯಲ್ಪಡುವ ಐಎಂಎಫ್ ಪ್ರೇರಿತ ಪ್ಯಾಕೇಜನ್ನು ಮೊರೆನೊ ಸರಕಾರ ಹಿಂತೆಗೆದುಕೊಳ್ಳಲಿದೆ. ಇದಕ್ಕೆ ಬದಲಾಗಿ, ಪ್ರತಿಭಟನೆ ಮತ್ತು ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳುವಂತೆ ಮೂಲ ನಿವಾಸಿ ಗುಂಪುಗಳ ನಾಯಕರು ತಮ್ಮ ಬೆಂಬಲಿಗರಿಗೆ ಕರೆ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...