Homeಮುಖಪುಟರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ 'ಬ್ರಿಕ್ಸ್‌' ಸದಸ್ಯ ರಾಷ್ಟ್ರಗಳು

ರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳು

- Advertisement -
- Advertisement -

ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ ಬ್ರಿಕ್ಸ್ ದಕ್ಷಿಣ ಪ್ಯಾಲೆಸ್ತೀನ್‌ ರಫಾದಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿದೆ ಮತ್ತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಗಳ ನಿರ್ಲ್ಷಕ್ಷ್ಯದ ಬಗ್ಗೆ ಕಳವಳನ್ನು ವ್ಯಕ್ತಪಡಿಸಿದೆ.

ಬ್ರಿಕ್ಸ್ ಗುಂಪಿನ ದೇಶಗಳ ವಿದೇಶಾಂಗ ಸಚಿವರುಗಳು ಸೋಮವಾರ ರಷ್ಯಾದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಭಾರತದ ಕಾರ್ಯದರ್ಶಿ ದಮ್ಮು ರವಿ ಭಾಗಿಯಾಗಿದ್ದರು.

ಭಾರತವು ಬ್ರೆಜಿಲ್, ರಷ್ಯಾ ಮತ್ತು ಚೀನಾ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬ್ರಿಕ್ಸ್‌ನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿದೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಬ್ಲಾಕ್ ತನ್ನ ಸದಸ್ಯತ್ವವನ್ನು ದ್ವಿಗುಣಗೊಳಿಸಿದ ನಂತರ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಮತ್ತು ಇಥಿಯೋಪಿಯಾ ಸೇರಿಕೊಂಡಿದ್ದವು. ಸೋಮವಾರ ನಡೆದ ವಿಸ್ತೃತ ಶೃಂಗಸಭೆಯ ಮೊದಲ ಪ್ರಮುಖ ಸಭೆಯಲ್ಲಿ ಹೊಸದಾಗಿ ಸೆರ್ಪಡೆಗೊಂಡಿದ್ದ ದೇಶಗಳ ಪ್ರತಿನಧಿಗಳು ಕೂಡ ಭಾಗವಹಿಸಿದ್ದರು.

ಗಾಝಾದ ಮೇಲೆ ಇಸ್ರೇಲ್‌ ಹತ್ಯಾಕಾಂಡವನ್ನು ಭಾರತ ಈ ಮೊದಲಿನಿಂದಲೇ ಖಂಡಿಸುತ್ತಾ ಬಂದಿದೆ. ರಷ್ಯಾದಲ್ಲಿ ನಡೆದ ಸಭೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದೆ.

ರಾಫಾದಲ್ಲಿ ಇಸ್ರೇಲ್‌ ಮಿಲಿಟರಿ ದಾಳಿ ಮತ್ತು ನಾಗರಿಕರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅದರ ಪರಿಣಾಮಗಳನ್ನು ಬ್ರಿಕ್ಸ್‌ ಸದಸ್ಯರಾಷ್ಟ್ರಗಳು ಬಲವಾಗಿ ಖಂಡಿಸಿದೆ.

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಗಾಝಾದ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ಬಳಿಕ ಕಳೆದ ಒಂಬತ್ತು ತಿಂಗಳಲ್ಲಿ 36,000ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ರಫಾದಲ್ಲಿ ತೆರಳಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು. ರಫಾವನ್ನು ಯುದ್ಧ ಸಂತ್ರಸ್ತ ನಿರಾಶ್ರಿತರ ಕೊನೆಯ ತಾಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದೆ. ರಫಾದಲ್ಲಿ ಇಸ್ರೇಲ್ ಆಕ್ರಮಣವು ನಾಗರಿಕರ ಸಾವುನೋವುಗಳನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂದು ವಿಶ್ವವೇ ಕಳವಳ ವ್ಯಕ್ತಪಡಿಸಿದೆ.

ಇಸ್ರೇಲ್‌, ಅಂತರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್, ಯುಎನ್ ನಿರ್ಣಯಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಗಂಭೀರ ಕಳವಳವನ್ನು ಬಿಕ್ಸ್‌ ಸದಸ್ಯ ರಾಷ್ಟ್ರಗಳು ವ್ಯಕ್ತಪಡಿಸಿದೆ.

ಇಸ್ರೇಲಿ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಕ್ಸ್‌ ದೇಶಗಳು ಜಂಟಿ ಹೇಳಿಕೆಯಲ್ಲಿ ತಕ್ಷಣದ ಕದನ ವಿರಾಮ ಮತ್ತು ಯಾವುದೇ ಅಡೆ ತಡೆಯಿಲ್ಲದೆ ಪ್ಯಾಲೆಸ್ತೀನ್‌ಗೆ ನೆರವು ತಲುಪಿಸುವ ಯುಎನ್ ನಿರ್ಣಯಗಳನ್ನು ಜಾರಿಗೆ ತರಲು ಕರೆ ನೀಡಿದೆ. ಎಲ್ಲಾ ಒತ್ತೆಯಾಳುಗಳು ಮತ್ತು ನಾಗರಿಕರನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಲು ಅವರು ಹಮಾಸ್‌ ಮತ್ತು ಇಸ್ರೇಲ್‌ಗೆ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಕರೆನೀಡಿದೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...