Homeಮುಖಪುಟಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

ಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

- Advertisement -
- Advertisement -

ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆ ನಂತರ, ಶಿಂಧೆ ಬಣದ ನೂತನ ಸಂಸದ ಶ್ರೀರಂಗ್ ಬಾರ್ನೆ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಂಧೆ ಬಣದ ಸಂಸದ ಶ್ರೀರಂಗ್ ಬಾರ್ನೆ ಅವರು ಬಿಜೆಪಿಯ ಪಕ್ಷಪಾತದ ಆರೋಪ ಮಾಡಿದ್ದು, ಹೊಸದಾಗಿ ರಚನೆಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟದಿಂದ ಪಕ್ಷವನ್ನು ಹೊರಗಿಟ್ಟಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ರಾಷ್ಟ್ರಪತಿ ಭವನದಲ್ಲಿ ಮೋದಿ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ.

ಗಮನಾರ್ಹವೆಂದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವೂ ಸಹ ಕ್ಯಾಬಿನೆಟ್ ಸ್ಥಾನಕ್ಕಾಗಿ ಒತ್ತಾಯಿಸಿದೆ ಮತ್ತು ರಾಜ್ಯ ಸಚಿವ ಸ್ಥಾನದ ಪ್ರಸ್ತಾಪವನ್ನು ತಿರಸ್ಕರಿಸಿದೆ.

‘ಶಿವಸೇನೆಗೆ ಕ್ಯಾಬಿನೆಟ್ ಸಚಿವ ಸ್ಥಾನ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು’

ಶಿವಸೇನೆಯ (ಯುಬಿಟಿ) ಸಂಜೋಗ್ ವಾಘೆರೆ ಪಾಟೀಲ್ ಅವರನ್ನು ಸೋಲಿಸುವ ಮೂಲಕ ಮಾವಲ್ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಬಾರ್ನೆ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷಕ್ಕೆ ಕೇವಲ ರಾಜ್ಯ ದರ್ಜೆ ಸಚಿವ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಅವರಂತಹ ನಾಯಕರು ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದ ಪಕ್ಷಗಳನ್ನು ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಬಾರ್ನೆ. ಸತಾರದ ಬಿಜೆಪಿ ಸಂಸದ ಉದಯನರಾಜೆ ಭೋಸಲೆ ಅವರು ಸಂಪುಟ ಸ್ಥಾನಕ್ಕೆ ಅರ್ಹರು ಎಂದು ಅವರು ಒತ್ತಿ ಹೇಳಿದರು.

“ಶಿವಸೇನೆಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ, ಕೇವಲ ಒಂದು ಸ್ಥಾನವನ್ನು ಗೆದ್ದ ಪಕ್ಷಗಳು ಕೂಡ ಕ್ಯಾಬಿನೆಟ್ ಸ್ಥಾನವನ್ನು ಪಡೆದಿವೆ. ಉದಾಹರಣೆಗೆ, ಇಬ್ಬರು ಸಂಸದರು ಆಯ್ಕೆಯಾದ ಜೆಡಿ (ಎಸ್) ನ ಎಚ್‌ಡಿ ಕುಮಾರಸ್ವಾಮಿ, ಬಿಹಾರದಿಂದ ಒಂದು ಸ್ಥಾನವನ್ನು ಗೆದ್ದ ಜಿತನ್ ರಾಮ್ ಮಾಂಝಿ ಅವರಿಗೂ ಕ್ಯಾಬಿನೆಟ್ ಸ್ಥಾನವನ್ನೂ ನೀಡಲಾಯಿತು” ಎಂದು ಬಾರ್ನೆ ಸುದ್ದಿಗಾರರಿಗೆ ತಿಳಿಸಿದರು.

ಹೊಸ ಮೋದಿ ಸರ್ಕಾರದಲ್ಲಿ ಶಿಂಧೆ ಸೇನೆಯ ಪ್ರತಾಪ್ರಾವ್ ಜಾಧವ್ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದಲ್ಲಿ ಸ್ಪರ್ಧಿಸಿದ್ದ 15 ಸ್ಥಾನಗಳಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿ 28 ರಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ನಾವು ಬಿಜೆಪಿಯ ಹಳೆಯ ಮಿತ್ರ ಪಕ್ಷವಾಗಿರುವ ಶಿವಸೇನೆಗೆ ಕನಿಷ್ಠ ಒಂದು ಕ್ಯಾಬಿನೆಟ್ ಮತ್ತು ಒಂದು ಎಂಒಎಸ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಶ್ರೀರಂಗ್ ಬಾರ್ನೆ ಅವರು ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವನ್ನು ಆರೋಪಿಸಿದ್ದಾರೆ. ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವಿದೆ; ಜೆಡಿಯು ಮತ್ತು ಟಿಡಿಪಿ ನಂತರ ಶಿವಸೇನೆ ಬಿಜೆಪಿಯ ಮೂರನೇ ಅತಿದೊಡ್ಡ ಮಿತ್ರ ಪಕ್ಷವಾಗಿದೆ ಎಂದು ಪ್ರತಿಪಾದಿಸಿದರು.

“ಐದು ಸ್ಥಾನಗಳನ್ನು ಗೆದ್ದ ಚಿರಾಗ್ ಪಾಸ್ವಾನ್ ಅವರಿಗೂ ಕ್ಯಾಬಿನೆಟ್ ಸ್ಥಾನ ನೀಡಲಾಯಿತು. ಆದರೆ, ಶಿವಸೇನೆಗೆ ಕೇವಲ ಒಂದು ಎಂಒಎಸ್ ಸ್ಥಾನ ಸಿಕ್ಕಿತು. ಶಿವಸೇನೆ ವಿರುದ್ಧ ಪಕ್ಷಪಾತವಿದೆ ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ. ಮುಂದಿನ ಮೂರು ತಿಂಗಳಲ್ಲಿ ನಾವು ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಸೇನೆಗೆ ನ್ಯಾಯಯುತವಾದ ಸ್ಥಾನಮಾನ ಸಿಗಬೇಕು ಎಂದು ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದರು.

“ರಾಜ್ಯದಲ್ಲಿ ಏಕನಾಥ್ ಶಿಂಧೆ ಅವರ ದಿಟ್ಟ ಹೆಜ್ಜೆ ಮಹಾರಾಷ್ಟ್ರದಲ್ಲಿ ಅಧಿಕಾರ ಪರಿವರ್ತನೆಗೆ ಕಾರಣವಾಯಿತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನಾವು ಬಿಜೆಪಿಯಿಂದ ಸಮರ್ಥನೀಯ ನಿಲುವನ್ನು ನಿರೀಕ್ಷಿಸುತ್ತೇವೆ” ಎಂದು ಬಾರ್ನೆ ಆಗ್ರಹಿಸಿದರು.

ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಬೇರ್ಪಟ್ಟರು ಮತ್ತು ಜೂನ್ 2022 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಸೇರಿಕೊಂಡರು. ಅವರಿಗೆ ನಿಷ್ಠರಾಗಿರುವ ಗಮನಾರ್ಹ ಸಂಖ್ಯೆಯ ಶಾಸಕರನ್ನು ಕರೆತಂದರು. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಸರ್ಕಾರದಲ್ಲಿ ಮಹಾರಾಷ್ಟ್ರದ ಆರು ಸಂಸದರು

ಮಹಾರಾಷ್ಟ್ರದ ಆರು ಸಂಸದರು ಭಾನುವಾರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡರು, ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಆರ್‌ಪಿಐ (ಎ) ತಲಾ ಒಂದನ್ನು ಪಡೆದುಕೊಂಡಿದೆ.

ಹೊಸ ಸರ್ಕಾರದಲ್ಲಿ ಬಿಜೆಪಿ ಸಂಸದರಾದ ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್ ಕ್ಯಾಬಿನೆಟ್ ಸಚಿವರಾಗಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡರು. ಮಹಾರಾಷ್ಟ್ರದ ಬಿಜೆಪಿಯ ಏಕೈಕ ಮಹಿಳಾ ಸಂಸದೆ ರಕ್ಷಾ ಖಡ್ಸೆ ಮತ್ತು ಮೊದಲ ಬಾರಿಗೆ ಸಂಸದ ಮುರಳೀಧರ್ ಮೊಹೋಲ್ ಅವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಮಿತ್ರಪಕ್ಷಗಳ ಪೈಕಿ, ಆರ್‌ಪಿಐ (ಎ) ಮುಖ್ಯಸ್ಥ ರಾಮದಾಸ್ ಅಠಾವಳೆ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ಎಂಒಎಸ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. ಆದರೆ, ಪ್ರತಾಪ್ರರಾವ್ ಜಾಧವ್ ಅವರನ್ನು ಸ್ವತಂತ್ರ ಉಸ್ತುವಾರಿಯೊಂದಿಗೆ ಎಂಒಎಸ್ ಆಗಿ ಕರೆತರಲಾಯಿತು.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ, ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರ ಅನುಭವವನ್ನು ಉಲ್ಲೇಖಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಎಂಒಎಸ್‌ ಪ್ರಸ್ತಾಪವನ್ನು ನಿರಾಕರಿಸಿತು.

ಇದನ್ನೂ ಓದಿ; ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...