Homeಮುಖಪುಟದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

ದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

- Advertisement -
- Advertisement -

ಬಿಜೆಪಿಯ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ದೇವಾಲಯದ ರಾಜಕೀಯವನ್ನು  ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆಯ ಜನರು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ನಡೆದ ವರ್ತಕರ ಸಮಾವೇಶದಲ್ಲಿ ಮಾತನಾಡಿದ ಪವಾರ್, ಐದು ವರ್ಷಗಳ ಹಿಂದೆ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೆ, ಈ ಬಾರಿ ಅವರ ಸಂಖ್ಯೆ 240ಕ್ಕೆ ಇಳಿದಿದೆ, ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯಿದೆ. ಚುನಾವಣಾ ಫಲಿತಾಂಶವು ಬಿಜೆಪಿಗೆ 60 ಸ್ಥಾನಗಳು ಕಡಿಮೆಯಾಗಿರುವುದನ್ನು ಸೂಚಿಸುತ್ತದೆ. ಬಿಜೆಪಿಗೆ ಉತ್ತರಪ್ರದೇಶದ ಜನರು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಅಲ್ಲಿನ ಜನರು ವಿಭಿನ್ನ ರೀತಿಯ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ ಎಂದು ಹೇಳಿದ್ದಾರೆ.

ರಾಮಮಂದಿರ ಚುನಾವಣಾ ಅಜೆಂಡಾ ಆಗಿರುತ್ತದೆ ಮತ್ತು ಆಡಳಿತ ಪಕ್ಷವು ಮತಗಳನ್ನು ಪಡೆಯುತ್ತದೆ ಎಂದು ಅವರು ನಿರೀಕ್ಷಿಸಿದ್ದರು, ಆದರೆ ನಮ್ಮ ದೇಶದ ಜನರು ಸಾಕಷ್ಟು ಬುದ್ಧಿವಂತರಾಗಿದ್ದಾರೆ. ದೇವಸ್ಥಾನದ ಹೆಸರಿನಲ್ಲಿ ಮತ ಕೇಳಲಾಗುತ್ತಿದೆ ಎಂದು ಅವರು ಅರಿತುಕೊಂಡಾಗ ಅವರು ವಿಭಿನ್ನ ನಿಲುವು ತೆಗೆದುಕೊಳ್ಳಲು ನಿರ್ಧರಿಸಿದರು ಮತ್ತು ಬಿಜೆಪಿ ಸೋಲನ್ನು ಎದುರಿಸಬೇಕಾಯಿತು ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಅಯೋಧ್ಯೆ ದೇವಾಲಯವಿರುವ ಫೈಜಾಬಾದ್ ಸಂಸದೀಯ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಹಾಲಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು 54,567 ಮತಗಳ ಅಂತರದಿಂದ ಸೋಲಿಸಿದ್ದರು. ದೇವಸ್ಥಾನವನ್ನು ಚುನಾವಣಾ ಅಜೆಂಡಾವಾಗಿ ಬಳಸಿಕೊಳ್ಳುವ ಬಗ್ಗೆ ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸುತ್ತಿರುವಾಗ ಜನರು ವಿಭಿನ್ನ ನಿಲುವು ತಳೆದಿದ್ದಾರೆ. ಅಯೋಧ್ಯೆಯ ಜನರು ದೇವಸ್ಥಾನದ ಹೆಸರಿನಲ್ಲಿ ಮಾಡುತ್ತಿರುವ ರಾಜಕೀಯವನ್ನು ಹೇಗೆ ಸರಿಪಡಿಸಬಹುದು ಎಂಬುದನ್ನು ತೋರಿಸಿದ್ದಾರೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವವು ಅಖಂಡವಾಗಿದೆ. ಅದು ರಾಜಕೀಯದಿಂದಲ್ಲ, ಜನರ ಸಾಮೂಹಿಕ ಆತ್ಮಸಾಕ್ಷಿಯಿಂದ, ಕಳೆದ 10 ವರ್ಷಗಳಿಂದ, ಅಧಿಕಾರದಲ್ಲಿರುವವರು ತೀವ್ರ ನಿಲುವುಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಜನರು ಅವರನ್ನು ಮತ್ತೆ ಹಿಂದಕ್ಕೆ ಕಳುಹಿಸಿದ್ದಾರೆ. ನರೇಂದ್ರ ಮೋದಿ ಅವರು ಸರ್ಕಾರವನ್ನು ರಚಿಸಿದ್ದರೂ, ಸ್ವಂತವಾಗಿ ಅಲ್ಲ, ಚಂದ್ರಬಾಬು ನಾಯ್ಡು (ಟಿಡಿಪಿ) ಮತ್ತು ನಿತೀಶ್ ಕುಮಾರ್ (ಜೆಡಿಯು) ಅವರ ಸಹಕಾರದಿಂದ ಎಂದು ಹೇಳಿದ್ದಾರೆ.

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿಗೆ ದೇಶವನ್ನು ಮುನ್ನಡೆಸುವ ಜನಾದೇಶವಿದೆಯೇ ಎಂದು ಶರದ್‌ ಪವಾರ್‌ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...