Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು...

FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಘೋಷಣೆಯಾಗಿ ಹೊಸ ಸರ್ಕಾರ ರಚನೆಯಾದ ಬಳಿಕ, ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಂ ಮಹಿಳೆಯರು ಬ್ಯಾಂಕ್, ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿರುವ ವಿಡಿಯೋಗಳನ್ನ ಹಂಚಿಕೊಂಡು, ” ಇವರು ಕಾಂಗ್ರೆಸ್‌ನ ಕಟಾ ಕಟಾ ಹಣಕ್ಕಾಗಿ ಕಾಯುತ್ತಿದ್ದಾರೆ” ಎಂದು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

Baba Banaras(@RealBababanaras) ಎಂಬ ಎಕ್ಸ್‌ ಬಳಕೆದಾರ ಬುರ್ಕಾಧಾರಿ ಮಹಿಳೆಯರು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ಕುಳಿತಿದ್ದ ವಿಡಿಯೋವೊಂದನ್ನು ಇತ್ತೀಚೆಗೆ ಹಂಚಿಕೊಂಡು, “ಅಕ್ಬರ್, ಬಾಬರ್ ಮತ್ತು ಔರಂಗಝೇಬ್‌ನ ಕುಟುಂಬ ಸದಸ್ಯರು ರಾಹುಲ್ ಗಾಂಧಿಯವರ “ಕಟಾಕಟ್‌ ಯೋಜನೆ” ಅಡಿಯಲ್ಲಿ ತಿಂಗಳಿಗೆ ಸಿಗುವ 8,500 ರೂಪಾಯಿ ಪಡೆಯಲು ಸರದಿ ಸಾಲಿನಲ್ಲಿ ಕಾಯುತ್ತಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ ಚೆಕ್ : ಎಕ್ಸ್‌ ಬಳಕೆದಾರ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು 2020ರಲ್ಲಿ ಕೇಂದ್ರ ಸರ್ಕಾರದ ಜನ್‌ಧನ್ ಯೋಜನೆಯ ಮಹಿಳಾ ಫಲಾನುಭವಿಗಳು ಉತ್ತರ ಪ್ರದೇಶದ ಮುಝಾಫರ್ ನಗರದ ಬ್ಯಾಂಕ್‌ ಒಂದರ ಹೊರಗೆ ಸಾಲುಗಟ್ಟಿ ನಿಂತಿದ್ದ ದೃಶ್ಯ ಎಂದು ಗೊತ್ತಾಗಿದೆ.

ಆಗಾಗ ಕೋಮು ವೈಷಮ್ಯದ ಸುದ್ದಿಗಳನ್ನು ಹಂಚಿಕೊಳ್ಳುವ ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವ್ಹಾಂಕೆ 2021ರಲ್ಲಿ ಇದೇ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡು “ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿ, ಉಚಿತ ಪಡಿತರ ಸಾಲು ನೋಡಿ ಕಣ್ಣು ತೆರೆಯಿರಿ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು. ಈ ಮೂಲಕ ಪರೋಕ್ಷವಾಗಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ದ್ವೇಷ ಹರಡುವ ಪ್ರಯತ್ನ ಮಾಡಿದ್ದರು.

ಸುರೇಶ್ ಚವ್ಹಾಂಕೆ ಹಂಚಿಕೊಂಡಿದ್ದ ವಿಡಿಯೋಗೆ ಕಮೆಂಟ್ ಮಾಡಿದ್ದ ಖ್ಯಾತ ಫ್ಯಾಕ್ಟ್‌ ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್” “ಕಳೆದ ವರ್ಷ ಮುಝಾಫರ್‌ ನಗರದ ಬ್ಯಾಂಕ್‌ನ ಹೊರಗೆ ಮಹಿಳೆಯರು ತಮ್ಮ ಜನ್ ಧನ್ ಖಾತೆಯಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಭಯದಿಂದ ಸರತಿ ಸಾಲಿನಲ್ಲಿ ನಿಂತಿದ್ದ ವಿಡಿಯೋವನ್ನು, ಮುಸ್ಲಿಂ ಮಹಿಳೆಯರು ಉಚಿತ ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ” ಎಂದು ತಿಳಿಸಿದ್ದರು.

ಏಪ್ರಿಲ್ 20, 2020ರಲ್ಲಿ ನ್ಯೂಸ್‌ 18 ಇಂಡಿಯಾ ಈ ಕುರಿತು ವಿಡಿಯೋ ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಜನ್ ಧನ್ ಯೋಜನೆಯ ಫಲಾನುಭವಿಗಳು ತಮ್ಮ ಖಾತೆಯಲ್ಲಿ ಠೇವಣಿ ಇಟ್ಟಿರುವ 500 ರೂ. ಅನ್ನು ಹಿಂತೆಗೆದುಕೊಳ್ಳದಿದ್ದರೆ ಬ್ಯಾಂಕ್‌ಗೆ ವಾಪಸ್ ಹೋಗಲಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಮಹಿಳಾ ಖಾತೆದಾರರು ತಮ್ಮ ಖಾತೆಯಿಂದ ಹಣ ವಾಪಸ್ ಪಡೆದುಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಬ್ಯಾಂಕ್ ಅಧಿಕಾರಿಗಳು ಖಾತೆಯಿಂದ ಹಣ ವಾಪಸ್ ಹೋಗುವುದಿಲ್ಲ. ಖಾತೆಯಲ್ಲೇ ಉಳಿಯಲಿದೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿತ್ತು.

ಕೋವಿಡ್ -19ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ಸಹಾಯವಾಗಲೆಂದು ಜನ್ ಧನ್ ಖಾತೆದಾರರಿಗೆ ಮೂರು ತಿಂಗಳಿಗೊಮ್ಮೆ 500 ರೂ. ಸಹಾಯಧನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಮಹಿಳೆಯರ ಖಾತೆಗೆ 500 ರೂ. ಜಮಾ ಮಾಡಲಾಗಿತ್ತು. ಹೀಗೆ ಜಮೆಯಾದ ಹಣ ಡ್ರಾ ಮಾಡದಿದ್ದರೆ ವಾಪಸ್ ಹೋಗಲಿದೆ ಎಂಬ ವದಂತಿ ಹರಡಿದ್ದರಿಂದ ಮಹಿಳಾ ಖಾತೆದಾರರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದರು. ಆದರ ವಿಡಿಯೋ ಈಗ ಹಂಚಿಕೊಳ್ಳಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ನಾವು ಮೇಲೆ ಉಲ್ಲೇಖಿಸಿದಂತೆ ಎಕ್ಸ್ ಬಳಕೆದಾರ ಹಂಚಿಕೊಂಡಿರುವ ವಿಡಿಯೋ, ರಾಹುಲ್ ಗಾಂಧಿ ಹೇಳಿರುವ ಕಾಂಗ್ರೆಸ್‌ನ ಭರವಸೆಯಾದ ಮಹಾಲಕ್ಷಿ ಯೋಜನೆಯ ಹಣ ಪಡೆಯಲು ಮಹಿಳೆಯರು ಕಾಯುತ್ತಿರುವುದಲ್ಲ. ಬದಲಿಗೆ 2020ರಲ್ಲಿ ಜನ್ ಧನ್ ಖಾತೆಯ ಹಣ ಡ್ರಾ ಮಾಡಲು ಕಾದಿರುವ ವಿಡಿಯೋ ಆಗಿದೆ.

ಇದನ್ನೂ ಓದಿ : FACT CHECK : ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...