Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು...

FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಘೋಷಣೆಯಾಗಿ ಹೊಸ ಸರ್ಕಾರ ರಚನೆಯಾದ ಬಳಿಕ, ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಂ ಮಹಿಳೆಯರು ಬ್ಯಾಂಕ್, ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿರುವ ವಿಡಿಯೋಗಳನ್ನ ಹಂಚಿಕೊಂಡು, ” ಇವರು ಕಾಂಗ್ರೆಸ್‌ನ ಕಟಾ ಕಟಾ ಹಣಕ್ಕಾಗಿ ಕಾಯುತ್ತಿದ್ದಾರೆ” ಎಂದು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

Baba Banaras(@RealBababanaras) ಎಂಬ ಎಕ್ಸ್‌ ಬಳಕೆದಾರ ಬುರ್ಕಾಧಾರಿ ಮಹಿಳೆಯರು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ಕುಳಿತಿದ್ದ ವಿಡಿಯೋವೊಂದನ್ನು ಇತ್ತೀಚೆಗೆ ಹಂಚಿಕೊಂಡು, “ಅಕ್ಬರ್, ಬಾಬರ್ ಮತ್ತು ಔರಂಗಝೇಬ್‌ನ ಕುಟುಂಬ ಸದಸ್ಯರು ರಾಹುಲ್ ಗಾಂಧಿಯವರ “ಕಟಾಕಟ್‌ ಯೋಜನೆ” ಅಡಿಯಲ್ಲಿ ತಿಂಗಳಿಗೆ ಸಿಗುವ 8,500 ರೂಪಾಯಿ ಪಡೆಯಲು ಸರದಿ ಸಾಲಿನಲ್ಲಿ ಕಾಯುತ್ತಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ ಚೆಕ್ : ಎಕ್ಸ್‌ ಬಳಕೆದಾರ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು 2020ರಲ್ಲಿ ಕೇಂದ್ರ ಸರ್ಕಾರದ ಜನ್‌ಧನ್ ಯೋಜನೆಯ ಮಹಿಳಾ ಫಲಾನುಭವಿಗಳು ಉತ್ತರ ಪ್ರದೇಶದ ಮುಝಾಫರ್ ನಗರದ ಬ್ಯಾಂಕ್‌ ಒಂದರ ಹೊರಗೆ ಸಾಲುಗಟ್ಟಿ ನಿಂತಿದ್ದ ದೃಶ್ಯ ಎಂದು ಗೊತ್ತಾಗಿದೆ.

ಆಗಾಗ ಕೋಮು ವೈಷಮ್ಯದ ಸುದ್ದಿಗಳನ್ನು ಹಂಚಿಕೊಳ್ಳುವ ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವ್ಹಾಂಕೆ 2021ರಲ್ಲಿ ಇದೇ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡು “ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿ, ಉಚಿತ ಪಡಿತರ ಸಾಲು ನೋಡಿ ಕಣ್ಣು ತೆರೆಯಿರಿ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು. ಈ ಮೂಲಕ ಪರೋಕ್ಷವಾಗಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ದ್ವೇಷ ಹರಡುವ ಪ್ರಯತ್ನ ಮಾಡಿದ್ದರು.

ಸುರೇಶ್ ಚವ್ಹಾಂಕೆ ಹಂಚಿಕೊಂಡಿದ್ದ ವಿಡಿಯೋಗೆ ಕಮೆಂಟ್ ಮಾಡಿದ್ದ ಖ್ಯಾತ ಫ್ಯಾಕ್ಟ್‌ ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್” “ಕಳೆದ ವರ್ಷ ಮುಝಾಫರ್‌ ನಗರದ ಬ್ಯಾಂಕ್‌ನ ಹೊರಗೆ ಮಹಿಳೆಯರು ತಮ್ಮ ಜನ್ ಧನ್ ಖಾತೆಯಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಭಯದಿಂದ ಸರತಿ ಸಾಲಿನಲ್ಲಿ ನಿಂತಿದ್ದ ವಿಡಿಯೋವನ್ನು, ಮುಸ್ಲಿಂ ಮಹಿಳೆಯರು ಉಚಿತ ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ” ಎಂದು ತಿಳಿಸಿದ್ದರು.

ಏಪ್ರಿಲ್ 20, 2020ರಲ್ಲಿ ನ್ಯೂಸ್‌ 18 ಇಂಡಿಯಾ ಈ ಕುರಿತು ವಿಡಿಯೋ ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಜನ್ ಧನ್ ಯೋಜನೆಯ ಫಲಾನುಭವಿಗಳು ತಮ್ಮ ಖಾತೆಯಲ್ಲಿ ಠೇವಣಿ ಇಟ್ಟಿರುವ 500 ರೂ. ಅನ್ನು ಹಿಂತೆಗೆದುಕೊಳ್ಳದಿದ್ದರೆ ಬ್ಯಾಂಕ್‌ಗೆ ವಾಪಸ್ ಹೋಗಲಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಮಹಿಳಾ ಖಾತೆದಾರರು ತಮ್ಮ ಖಾತೆಯಿಂದ ಹಣ ವಾಪಸ್ ಪಡೆದುಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಬ್ಯಾಂಕ್ ಅಧಿಕಾರಿಗಳು ಖಾತೆಯಿಂದ ಹಣ ವಾಪಸ್ ಹೋಗುವುದಿಲ್ಲ. ಖಾತೆಯಲ್ಲೇ ಉಳಿಯಲಿದೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿತ್ತು.

ಕೋವಿಡ್ -19ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ಸಹಾಯವಾಗಲೆಂದು ಜನ್ ಧನ್ ಖಾತೆದಾರರಿಗೆ ಮೂರು ತಿಂಗಳಿಗೊಮ್ಮೆ 500 ರೂ. ಸಹಾಯಧನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಮಹಿಳೆಯರ ಖಾತೆಗೆ 500 ರೂ. ಜಮಾ ಮಾಡಲಾಗಿತ್ತು. ಹೀಗೆ ಜಮೆಯಾದ ಹಣ ಡ್ರಾ ಮಾಡದಿದ್ದರೆ ವಾಪಸ್ ಹೋಗಲಿದೆ ಎಂಬ ವದಂತಿ ಹರಡಿದ್ದರಿಂದ ಮಹಿಳಾ ಖಾತೆದಾರರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದರು. ಆದರ ವಿಡಿಯೋ ಈಗ ಹಂಚಿಕೊಳ್ಳಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ನಾವು ಮೇಲೆ ಉಲ್ಲೇಖಿಸಿದಂತೆ ಎಕ್ಸ್ ಬಳಕೆದಾರ ಹಂಚಿಕೊಂಡಿರುವ ವಿಡಿಯೋ, ರಾಹುಲ್ ಗಾಂಧಿ ಹೇಳಿರುವ ಕಾಂಗ್ರೆಸ್‌ನ ಭರವಸೆಯಾದ ಮಹಾಲಕ್ಷಿ ಯೋಜನೆಯ ಹಣ ಪಡೆಯಲು ಮಹಿಳೆಯರು ಕಾಯುತ್ತಿರುವುದಲ್ಲ. ಬದಲಿಗೆ 2020ರಲ್ಲಿ ಜನ್ ಧನ್ ಖಾತೆಯ ಹಣ ಡ್ರಾ ಮಾಡಲು ಕಾದಿರುವ ವಿಡಿಯೋ ಆಗಿದೆ.

ಇದನ್ನೂ ಓದಿ : FACT CHECK : ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...