Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...