Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...