Homeಮುಖಪುಟಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

ಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

- Advertisement -
- Advertisement -

ದಕ್ಷಿಣ ಕುವೈತ್‌ನ ಮಂಗಾಫ್‌ನಲ್ಲಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ 49 ಮಂದಿಯಲ್ಲಿ 21 ಮಲಯಾಳಿಗಳು ಸೇರಿದ್ದಾರೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯ್‌ ವಿಜಯನ್‌ ದೃಢಪಡಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕುರಿತು ಸಹಕರಿಸಲು ಮತ್ತು ಶವಗಳನ್ನು ಮನೆಗೆ ತರಲು ಸಹಾಯ ಮಾಡಲು ಕುವೈತ್‌ಗೆ ತೆರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇರಳ ಸರ್ಕಾರದ ಅಧೀನದ ಅನಿವಾಸಿ ಕೇರಳೀಯರ(ಎನ್‌ಆರ್‌ಕೆ) ವೆಲ್‌ಫೇರ್ ಏಜೆನ್ಸಿಯ ಮೂಲಗಳು ಹಲವು ಮೃತದೇಹಗಳನ್ನು ಇನ್ನೂ ಗುರುತಿಸಬೇಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಲಯಾಳಿಗಳು ಕೂಡ ಸೇರಿದ್ದಾರೆ.

ಈ ಕುರಿತು ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ಸಂಪುಟ ಸಭೆಯನ್ನು ಕರೆದಿದ್ದಾರೆ. ಇದಲ್ಲದೆ ಜಗತ್ತಿನಾದ್ಯಂತ ಇದ್ದ ಅನಿವಾಸಿ ಕೇರಳಿಯರ ವೆಲ್‌ಫೇರ್ ಏಜೆನ್ಸಿಯ ಪ್ರತಿನಿಧಿಗಳ ಸಮಾವೇಶ ‘ಲೋಕ ಕೇರಳ ಸಭೆ’ ಯನ್ನು ಗುರುವಾರದಿಂದ ಶನಿವಾರದವರೆಗೆ ತಿರುವನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಅವಘಡದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಸ್ಥಳೀಯ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪಿ(27), ಮಲಪ್ಪುರಂನ ಪೆರಿಂತಲ್ಮನ್ನ ಬಾಹುಲೇಯನ್(36), ಕೊಲ್ಲಂನ ಶಮೀರ್ ಉಮರುದ್ದೀನ್(30) ಚೆಂಗಳದ ಕೆ ರೆಂಜಿತ್(34), ಕಾಸರಗೋಡಿನ ಪಿಲಿಕೋಡುವಿನ ಕೇಲು (58) ಕೊಟ್ಟಾಯಂನ ಸ್ಟೆಫಿನ್ ಅಬ್ರಹಾಂ ಸಾಬು(29), ಪತ್ತನಂತಿಟ್ಟದ ಪಂದಳಂನ ಆಕಾಶ್ ಶಶಿಧರನ್(31), ಕೊಲ್ಲಂನ ಪುನಲೂರಿನ ಸಾಜನ್ ಜಾರ್ಜ್(29), ಪತ್ತನಂತಿಟ್ಟಾದಲ್ಲಿ ಸಾಜು ವರ್ಗೀಸ್ (56),  ಪತ್ತನಂತಿಟ್ಟದ ಪಿ ವಿ ಮುರಳೀಧರನ್(68), ಕೊಲ್ಲಂನ ಲುಕೋಸ್(48), ತಿರುವಲ್ಲಾದ ಥಾಮಸ್ ಉಮ್ಮನ್(37)  ಮತ್ತು ಮಲಪ್ಪುರಂನ ನೂಹು ಮೃತರು ಎಂದು ಹೇಳಲಾಗಿದೆ.

ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಮಂಗಾಫ್ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತೆರಳಿದ್ದಾರೆ.

ಸಂತ್ರಸ್ತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನೇಕ ದೇಹಗಳು ತೀವ್ರವಾಗಿ ಸುಟ್ಟುಹೋಗಿವೆ ಮತ್ತು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಮೃತದೇಹಗಳ ಗುರುತಿಸುವಿಕೆಗಾಗಿ ಡಿಎನ್‌ಎ ಪರೀಕ್ಷೆಗಳ ಅಗತ್ಯವಿದೆ. ವಾಯುಪಡೆಯ ವಿಮಾನವು ಸಿದ್ಧವಾಗಿದೆ. ಮೃತದೇಹ ಗುರುತು ಪತ್ತೆಯಾದ ತಕ್ಷಣ ಭಾರತಕ್ಕೆ ಮೃತದೇಹವನ್ನು ತಂದು ಕುಟುಂಬಕ್ಕೆ ಹಸ್ತಾಂತರ ಮಾಡುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ದುರಂತಕ್ಕೆ ಕಾರಣವಾದ ಸಂದರ್ಭಗಳನ್ನು ಬಹಿರಂಗಪಡಿಸಲು ತನಿಖೆಯನ್ನು ನಡೆಸಲಾಗುತ್ತಿದೆ. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಕುವೈತ್‌ನ ರಕ್ಷಣಾ ಮತ್ತು ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸೆಫ್ ಅಲ್-ಸಾಬಾ ಕಟ್ಟಡದ  ಮಾಲಕರನ್ನು ಮತ್ತು ಕಟ್ಟಡದ ಸಿಬ್ಬಂದಿಯನ್ನು ಬಂಧಿಸುವಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಇಲ್ಲಿಯವರೆಗೆ ಅಗ್ನಿ ದುರಂತಕ್ಕೆ ಕಾರಣವೇನು ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ. ಅಗ್ನಿ ದುರಂತ ಹೆಚ್ಚಿನ ಹೊಗೆ ಹೊರ ಸೂಸಲು ಕಾರಣವಾಗಿದೆ. ಹೊಗೆ ತುಂಬಿದ್ದರಿಂದ ಮೆಟ್ಟಿಲುಗಳ ಕೆಳಗೆ ಓಡಲು ಪ್ರಯತ್ನಿಸುತ್ತಿರುವಾಗ ಅನೇಕ ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ಪತ್ತೆ ಹಚ್ಚಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...