Homeಮುಖಪುಟಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

ಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

- Advertisement -
- Advertisement -

ದಕ್ಷಿಣ ಕುವೈತ್‌ನ ಮಂಗಾಫ್‌ನಲ್ಲಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ 49 ಮಂದಿಯಲ್ಲಿ 21 ಮಲಯಾಳಿಗಳು ಸೇರಿದ್ದಾರೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯ್‌ ವಿಜಯನ್‌ ದೃಢಪಡಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕುರಿತು ಸಹಕರಿಸಲು ಮತ್ತು ಶವಗಳನ್ನು ಮನೆಗೆ ತರಲು ಸಹಾಯ ಮಾಡಲು ಕುವೈತ್‌ಗೆ ತೆರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇರಳ ಸರ್ಕಾರದ ಅಧೀನದ ಅನಿವಾಸಿ ಕೇರಳೀಯರ(ಎನ್‌ಆರ್‌ಕೆ) ವೆಲ್‌ಫೇರ್ ಏಜೆನ್ಸಿಯ ಮೂಲಗಳು ಹಲವು ಮೃತದೇಹಗಳನ್ನು ಇನ್ನೂ ಗುರುತಿಸಬೇಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಲಯಾಳಿಗಳು ಕೂಡ ಸೇರಿದ್ದಾರೆ.

ಈ ಕುರಿತು ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ಸಂಪುಟ ಸಭೆಯನ್ನು ಕರೆದಿದ್ದಾರೆ. ಇದಲ್ಲದೆ ಜಗತ್ತಿನಾದ್ಯಂತ ಇದ್ದ ಅನಿವಾಸಿ ಕೇರಳಿಯರ ವೆಲ್‌ಫೇರ್ ಏಜೆನ್ಸಿಯ ಪ್ರತಿನಿಧಿಗಳ ಸಮಾವೇಶ ‘ಲೋಕ ಕೇರಳ ಸಭೆ’ ಯನ್ನು ಗುರುವಾರದಿಂದ ಶನಿವಾರದವರೆಗೆ ತಿರುವನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಅವಘಡದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಸ್ಥಳೀಯ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪಿ(27), ಮಲಪ್ಪುರಂನ ಪೆರಿಂತಲ್ಮನ್ನ ಬಾಹುಲೇಯನ್(36), ಕೊಲ್ಲಂನ ಶಮೀರ್ ಉಮರುದ್ದೀನ್(30) ಚೆಂಗಳದ ಕೆ ರೆಂಜಿತ್(34), ಕಾಸರಗೋಡಿನ ಪಿಲಿಕೋಡುವಿನ ಕೇಲು (58) ಕೊಟ್ಟಾಯಂನ ಸ್ಟೆಫಿನ್ ಅಬ್ರಹಾಂ ಸಾಬು(29), ಪತ್ತನಂತಿಟ್ಟದ ಪಂದಳಂನ ಆಕಾಶ್ ಶಶಿಧರನ್(31), ಕೊಲ್ಲಂನ ಪುನಲೂರಿನ ಸಾಜನ್ ಜಾರ್ಜ್(29), ಪತ್ತನಂತಿಟ್ಟಾದಲ್ಲಿ ಸಾಜು ವರ್ಗೀಸ್ (56),  ಪತ್ತನಂತಿಟ್ಟದ ಪಿ ವಿ ಮುರಳೀಧರನ್(68), ಕೊಲ್ಲಂನ ಲುಕೋಸ್(48), ತಿರುವಲ್ಲಾದ ಥಾಮಸ್ ಉಮ್ಮನ್(37)  ಮತ್ತು ಮಲಪ್ಪುರಂನ ನೂಹು ಮೃತರು ಎಂದು ಹೇಳಲಾಗಿದೆ.

ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಮಂಗಾಫ್ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತೆರಳಿದ್ದಾರೆ.

ಸಂತ್ರಸ್ತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನೇಕ ದೇಹಗಳು ತೀವ್ರವಾಗಿ ಸುಟ್ಟುಹೋಗಿವೆ ಮತ್ತು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಮೃತದೇಹಗಳ ಗುರುತಿಸುವಿಕೆಗಾಗಿ ಡಿಎನ್‌ಎ ಪರೀಕ್ಷೆಗಳ ಅಗತ್ಯವಿದೆ. ವಾಯುಪಡೆಯ ವಿಮಾನವು ಸಿದ್ಧವಾಗಿದೆ. ಮೃತದೇಹ ಗುರುತು ಪತ್ತೆಯಾದ ತಕ್ಷಣ ಭಾರತಕ್ಕೆ ಮೃತದೇಹವನ್ನು ತಂದು ಕುಟುಂಬಕ್ಕೆ ಹಸ್ತಾಂತರ ಮಾಡುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ದುರಂತಕ್ಕೆ ಕಾರಣವಾದ ಸಂದರ್ಭಗಳನ್ನು ಬಹಿರಂಗಪಡಿಸಲು ತನಿಖೆಯನ್ನು ನಡೆಸಲಾಗುತ್ತಿದೆ. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಕುವೈತ್‌ನ ರಕ್ಷಣಾ ಮತ್ತು ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸೆಫ್ ಅಲ್-ಸಾಬಾ ಕಟ್ಟಡದ  ಮಾಲಕರನ್ನು ಮತ್ತು ಕಟ್ಟಡದ ಸಿಬ್ಬಂದಿಯನ್ನು ಬಂಧಿಸುವಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಇಲ್ಲಿಯವರೆಗೆ ಅಗ್ನಿ ದುರಂತಕ್ಕೆ ಕಾರಣವೇನು ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ. ಅಗ್ನಿ ದುರಂತ ಹೆಚ್ಚಿನ ಹೊಗೆ ಹೊರ ಸೂಸಲು ಕಾರಣವಾಗಿದೆ. ಹೊಗೆ ತುಂಬಿದ್ದರಿಂದ ಮೆಟ್ಟಿಲುಗಳ ಕೆಳಗೆ ಓಡಲು ಪ್ರಯತ್ನಿಸುತ್ತಿರುವಾಗ ಅನೇಕ ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ಪತ್ತೆ ಹಚ್ಚಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...