Homeಮುಖಪುಟನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

ನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

- Advertisement -
- Advertisement -

ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪ್ರಸ್ತುತ ದರ್ಶನ್, ಅವರ ಆಪ್ತೆ ಪೌವಿತ್ರಾ ಗೌಡ ಸೇರಿದಂತೆ ಪ್ರಕರಣದ 13 ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಪೌವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್ ಮತ್ತು ಇತರರ ಮೇಲಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದೆ ಎಂಬ ವಿಷಯ ಹೊರ ಬೀಳುತ್ತಿದ್ದಂತೆ ರಾಜ್ಯಾಧ್ಯಂತ ದರ್ಶನ್ ವಿರುದ್ದ ದೊಡ್ಡ ಮಟ್ಟದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರದುರ್ಗ, ಮಂಡ್ಯ ಸೇರಿದಂತೆ ಕೆಲವೆಡೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕಾನೂನು ಕ್ರಮ ಒಂದೆಡೆಯಾದರೆ, ದರ್ಶನ್ ಅವರನ್ನು ಕನ್ನಡ ಚಿತ್ರ ರಂಗದಿಂದ ಹೊರ ಹಾಕಬೇಕು ಎಂಬ ಆಗ್ರಹಗಳು ಎಲ್ಲೆಡೆ ವ್ಯಕ್ತವಾಗುತ್ತಿದೆ.

ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ” ನಮಗೂ ಕೆಲವು ದೂರುಗಳು ಬಂದಿವೆ. ಅದಕ್ಕಾಗಿ ಕಲಾವಿದರ ಸಂಘ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ ಇರುವುದು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರಿಗಾಗಿ ಮಾತ್ರ. ಅದಾಗ್ಯೂ ನಾವು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಯತ್ನಿಸಿದ್ದೇವೆ. ನಾವು ಕಲಾವಿದರ ಸಂಘದೊಂದಿಗೆ ಮಾತನಾಡಿದ್ದೇವೆ. ಚರ್ಚೆಗೆ ನಾನು ಸಭೆ ಕರೆಯುತ್ತೇನೆ. ಪೊಲೀಸ್ ತನಿಖೆ ಮುಗಿದು. ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಿಕಿತಾರನ್ನು ಮೂರು ವರ್ಷ ಬ್ಯಾನ್ ಮಾಡಲಾಗಿತ್ತು

ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ನಡುವೆ ವಿವಾದ ಸೃಷ್ಟಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರ ಮೇಲೆ 2011ರಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು ಮೂರು ವರ್ಷಗಳ ಕಾಲ ನಿಷೇಧ ಹೇರಿತ್ತು. ಬಳಿಕ ವಾಪಸ್ ಪಡೆದಿತ್ತು.

ಅಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಂಘದ ಕಾರ್ಯದರ್ಶಿ ಸೂರಪ್ಪ ಬಾಬು, ಕನ್ನಡ ಚಿತ್ರರಂಗ ಮತ್ತು ವಿಜಯಲಕ್ಷ್ಮಿ ಅವರ ಹಿತದೃಷ್ಟಿಯಿಂದ ಹಾಗೂ ಮಾನವೀಯ ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

“ವಿಜಯಲಕ್ಷ್ಮಿಗೆ ಸಮಸ್ಯೆಗಳನ್ನು ಸೃಷ್ಟಿಸುವಲ್ಲಿ ನಿಕಿತಾ ಪಾತ್ರದ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀರೋಗಳು ಮತ್ತು ಅವರ ಪತ್ನಿಯರ ನಡುವೆ ಸಮಸ್ಯೆ ಸೃಷ್ಟಿಸುವ ನಾಯಕಿಯರು ನಮಗೆ ಬೇಡ” ಎಂದು ಸೂರಪ್ಪ ಬಾಬು ಹೇಳಿದ್ದರು. ನಿಕಿತಾಗೆ ಮೂರು ವರ್ಷಗಳ ಕಾಲ ಯಾವುದೇ ಕನ್ನಡ ಚಿತ್ರದಲ್ಲಿ ನಟಿಸಲು ಅವಕಾಶ ನೀಡುವುದಿಲ್ಲ ಎಂದು ಆಗ ಹೇಳಲಾಗಿತ್ತು. ಈ ಕ್ರಮ ಕೈಗೊಳ್ಳುವ ವೇಳೆ ದರ್ಶನ್ ಅಭಿನಯದ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ನಾಯಕಿಯಾಗಿ ನಿಕಿತಾ ನಟಿಸುತ್ತಿದ್ದರು. ಈ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು.

ಯಾವ ಜಾರ್ಜ್ ಶೀಟ್ ಮೇಲೆ ನಿಕಿತಾರನ್ನು ಬ್ಯಾನ್ ಮಾಡಿದ್ರಿ?

“ದರ್ಶನ್ ಮೇಲೆ ಆರೋಪ ಕೇಳಿ ಬಂದಿದೆ. ಪೊಲೀಸ್ ತನಿಖೆ ಮುಗಿದು, ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ಹೇಳಿದ್ದಾರೆ. ಹಾಗಾದರೆ, ನಿಕಿತಾ ಅವರನ್ನು ಯಾವ ಚಾರ್ಜ್ ಶೀಟ್ ಮೇಲೆ ಬ್ಯಾನ್ ಮಾಡಿದ್ದರು? ಎಂದು ಜನರು ಪ್ರಶ್ನೆ ಮಾಡಿದ್ದಾರೆ.

ದರ್ಶನ್ ವಿರುದ್ದ ಗಂಭೀರ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಿದ್ದಾರೆ. ಆದರೆ, ನಿಕಿತಾ ವಿರುದ್ದ ಯಾವುದೇ ಕ್ರಿಮಿನ್ ಪ್ರಕರಣ ದಾಖಲಾಗಿರಲಿಲ್ಲ. ಆದರೂ, ಇದೇ ದರ್ಶನ್ ವಿಚಾರದಲ್ಲಿ ನಿಕಿತಾರನ್ನು ಬ್ಯಾನ್ ಮಾಡಿದ್ದು ಹೇಗೆ? ಎಂಬ ಪ್ರಶ್ನೆಗಳು ವ್ಯಕ್ತವಾಗಿದೆ.

ದರ್ಶನ್ ಪ್ರಭಾವಿ ಎಂದು ವಿನಾಯಿತಿ?

ನಟಿ ನಿಕಿತಾಗೆ ಹೋಲಿಸಿದ್ರೆ ದರ್ಶನ್ ಪ್ರಭಾವಿ ವ್ಯಕ್ತಿ. ಕನ್ನಡ ಚಿತ್ರ ರಂಗದ ಪ್ರಮುಖ ನಟನಾಗಿರುವ ದರ್ಶನ್ ಭಾರೀ ಅಭಿಮಾನಿಗಳನ್ನೂ ಹೊಂದಿದ್ದಾರೆ. ಅವರಿಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರ ಸಂಪರ್ಕವೂ ಇದೆ. ಈ ಎಲ್ಲಾ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲು ಮಿನಾಮೇಷ ಎನಿಸಲಾಗುತ್ತಿದ್ದೆಯಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಅಗತ್ಯ ಬಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ: ಡಾ.ಜಿ.ಪರಮೇಶ್ವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....