Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ...

ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

- Advertisement -
- Advertisement -

ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು.

ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ. ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...