Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ...

ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

- Advertisement -
- Advertisement -

ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು.

ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ. ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...