Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ...

ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

- Advertisement -
- Advertisement -

ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು.

ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ. ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...