Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ...

ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

- Advertisement -
- Advertisement -

ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು.

ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ. ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...