Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...