Homeಮುಖಪುಟಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ

ಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಹ್ಮಾರ್-ಕುಕಿ-ಝೋಮಿ ಬುಡಕಟ್ಟು ಜನಾಂಗದವರು ನಡೆಸುತ್ತಿದ್ದ ನಾಲ್ಕು ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ನಂತರ ಜಿರಿಬಾಮ್‌ನಲ್ಲಿ ಉದ್ವಿಗ್ನತೆ ಉಂಟಾಗಿದೆ.

ಬುಡಕಟ್ಟುಗಳ ನಾಗರಿಕ ಸಮಾಜದ ಗುಂಪು ಈ ಬಗ್ಗೆ ಹೇಳಿಕೆಯೊಂದನ್ನು ನೀಡಿದೆ. ಸ್ಥಳೀಯ ಬುಡಕಟ್ಟು ಅಡ್ವೊಕಸಿ ಕಮಿಟಿ (ಐಟಿಎಸಿ) ಹೇಳಿಕೆಯಲ್ಲಿ “ಅಧಿಕಾರಿಗಳು ತಕ್ಷಣವೇ ಅಪರಾಧಿಗಳನ್ನು ಬಂಧಿಸಿ ಮತ್ತು ಕಾನೂನಿನ ಪ್ರಕಾರ ಅವರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದೆ.

ಮೈತೇಯಿ ಸಶಸ್ತ್ರ ಗುಂಪು ಅರಂಬೈ ತೆಂಗೋಲ್ ಅಂಗಡಿಗಳಿಗೆ ಬೆಂಕಿ ಹಚ್ಚಿದೆ ಎಂದು ಐಟಿಎಸಿ ಆರೋಪಿಸಿದೆ. “ಮನೆಗಳು ಮತ್ತು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹ್ಮಾರ್ ವೆಂಗ್, ಕಾಲಿನಗರ, ಜಿರಿಬಾಮ್, ಮೈತಿ ಲೈಕೈ ಪ್ರದೇಶದಲ್ಲಿ ಅಂಗಡಿ ಮನೆಗಳು ಸುಟ್ಟು ಕರಕಲಾಗಿವೆ” ಎಂದು ಐಟಿಎಸಿ ಹೇಳಿಕೆಯಲ್ಲಿ ತಿಳಿಸಿದೆ.

ಕಾಳಿನಗರ, ಹ್ಮಾರ್ ವೆಂಗ್, ಐಬಿ ಲೈಕೈ, ಕರೋಂಗ್, ರಾನಿನ್ ವೆಂಗ್, ಮಿಷನ್ ಕಾಂಪೌಂಡ್, ವೆಂಗ್ನುಮ್, ಬಾಬುಪಾರ ವಾರ್ಡ್ ನಂ. 4 (ಬಜಾರ್) ಮತ್ತು ಉಚಾಥೋಲ್‌ನಲ್ಲಿ 24 ಗಂಟೆಗಳ ರಕ್ಷಣೆ ಅಗತ್ಯವಿದೆ ಎಂದು ಹೇಳಿದೆ.

“ಜಿರಿಬಾಮ್‌ನ ಸ್ಥಳೀಯ ಬುಡಕಟ್ಟು ಜನಾಂಗದ ಹ್ಮಾರ್, ಕುಕಿ ಮತ್ತು ಝೋಮಿ ವಾಸಿಸುವ ಪ್ರದೇಶಗಳಲ್ಲಿ ಮೈತೇಯಿ ದುಷ್ಕರ್ಮಿಗಳು ಆಸ್ತಿಗಳು ಮತ್ತು ವಸ್ತುಗಳನ್ನು ನಾಶಪಡಿಸುವುದನ್ನು, ಕದಿಯುವುದನ್ನು ತಡೆಯಲು ಕೇಂದ್ರ ಪಡೆಗಳಿಂದ 24 ಗಂಟೆಗಳ ರಕ್ಷಣೆ, ಗಸ್ತು ತಿರುಗುವಿಕೆ ತಕ್ಷಣವೇ ಆರಂಭಿಸಬೇಕು ಎಂದು ನಾವು ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ” ಎಂದು ಐಟಿಎಸಿ ತಿಳಿಸಿದೆ.

ಜಿರಿಬಾಮ್‌ನಲ್ಲಿ ಹ್ಮಾರ್-ಕುಕಿ-ಝೋಮಿ ಬುಡಕಟ್ಟು ಜನಾಂಗದವರ 45 ಮನೆಗಳನ್ನು ಸುಟ್ಟು ಹಾಕಲಾಗಿದೆ. ಕಳೆದ ಶನಿವಾರದಂದು ಮೈತೇಯಿ ಗುಂಪೊಂದು ಬೆಂಕಿ ಹಚ್ಚಿತ್ತು. ಆದರೆ, ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸುವ ಮುನ್ನ ಬೆಂಕಿ ನಂದಿಸಲಾಗಿದೆ ಎಂದು ಐಟಿಎಸಿ ಹೇಳಿದೆ.

40 ವರ್ಷದ ಎಲ್ ಲಾಲಿಯನ್‌ಮುವಾಂಗ್ ಎಂಬವರನ್ನು ಅವರ ಮನೆಯಿಂದ ಅರಂಬೈ ತೆಂಗೋಲ್ ಸದಸ್ಯರು ಅಪಹರಿಸಿದ್ದಾರೆ. ಈಗ ಲಾಲಿಯನ್‌ಮುವಾಂಗ್ ಕಾಣೆಯಾಗಿದ್ದಾರೆ ಎಂದು ಕೂಡ ಆರೋಪಿಸಿದೆ.

ಇದನ್ನೂ ಓದಿ : ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...