Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...