Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...