Homeಮುಖಪುಟ'ಮಹಾರಾಜ್’ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆ ನೀಡಿದ ಗುಜರಾತ್ ಹೈಕೋರ್ಟ್

‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆ ನೀಡಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ನಟ ಅಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಅಭಿನಯದ ‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಗುಜರಾತ್ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚಲನಚಿತ್ರವು ಜೂನ್ 14 ರಂದು ಟಾಪ್ (OTT) ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿತ್ತು. ನ್ಯಾಯಮೂರ್ತಿ ಸಂಗೀತಾ ಕೆ ವಿಶನ್ ಅವರು ಚಲನಚಿತ್ರದ ಬಿಡುಗಡೆಯನ್ನು ತಡೆಹಿಡಿದು ಮಧ್ಯಂತರ ಆದೇಶವನ್ನು ಹೊರಡಿಸಿದ್ದು, ಈ ಕುರಿತು ಹೆಚ್ಚಿನ ವಿಚಾರಣೆಯನ್ನು ಜೂನ್ 18ಕ್ಕೆ ನಿಗದಿಪಡಿಸಲಾಗಿದೆ.

ಅರ್ಜಿಗಳನ್ನು  ಪರಿಗಣಿಸಲಾಗಿದೆ, ಪ್ರತಿವಾದಿಗಳಿಗೆ ನೋಟಿಸ್ ನೀಲಾಗಿದೆ, ಮುಂದಿನ ವಿಚಾರಣೆಯವರೆಗೆ ಪ್ಯಾರಾಗ್ರಾಫ್ 11(ಸಿ) ಪ್ರಕಾರ ಸಿನಿಮಾ ಬಿಡುಗಡೆ ಮಾಡದಂತೆ ನ್ಯಾಯಾಲಯ ಮಧ್ಯಂತರ ನಿರ್ದೇಶನ ನೀಡಿದೆ.

ಶ್ರೀಕೃಷ್ಣನ ಭಕ್ತರು ಮತ್ತು ಪುಷ್ಟಿಮಾರ್ಗ್ ಪಂಥದ ಅನುಯಾಯಿಗಳ ಪರವಾಗಿ ಸಲ್ಲಿಸಲಾದ ಮನವಿಯ ಮೇರೆಗೆ ಈ ಆದೇಶವನ್ನು ನೀಡಲಾಗಿದೆ.

1862ರ ಮಾನಹಾನಿ ಪ್ರಕರಣವನ್ನು ಆಧರಿಸಿದ “ಮಹಾರಾಜ್” ಚಲನಚಿತ್ರವು ಸಾರ್ವಜನಿಕ ಸುವ್ಯವಸ್ಥೆಯನ್ನು ಅಡ್ಡಿಪಡಿಸುತ್ತದೆ ಮತ್ತು ಪಂಥ ಮತ್ತು ಹಿಂದೂ ಧರ್ಮದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುತ್ತದೆ ಎಂದು ವಾದಿಸಲಾಗಿದೆ. ಸುಪ್ರೀಂಕೋರ್ಟ್‌ನ ಅಂದಿನ ನ್ಯಾಯಾಧೀಶರು ನಿರ್ಧರಿಸಿದ 1862ರ ಪ್ರಕರಣವು ಹಿಂದೂ ಧರ್ಮ, ಭಗವಾನ್ ಕೃಷ್ಣ ಮತ್ತು ಭಕ್ತಿಗೀತೆಗಳು ಮತ್ತು ಸ್ತೋತ್ರಗಳ ಬಗ್ಗೆ ತೀವ್ರವಾಗಿ ನಿಂದಿಸುವ ಟೀಕೆಗಳನ್ನು ಒಳಗೊಂಡಿದೆ ಎಂದು ಅರ್ಜಿದಾರರು ಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಚಿತ್ರದ ಕಥಾಹಂದರವನ್ನು ಮರೆಮಾಚಲು ಯಾವುದೇ ಟ್ರೇಲರ್ ಅಥವಾ ಪ್ರಚಾರ ಕಾರ್ಯಕ್ರಮಗಳಿಲ್ಲದೆ ಚಿತ್ರದ ಬಿಡುಗಡೆಯನ್ನು ರಹಸ್ಯವಾಗಿ ಮಾಡಲಾಗುತ್ತಿದೆ. ಚಲನಚಿತ್ರವನ್ನು ಬಿಡುಗಡೆ ಮಾಡುವುದರಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಅಡ್ಡಿಯಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಚಿತ್ರದ ಬಿಡುಗಡೆಯನ್ನು ತಡೆಯಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ತುರ್ತಾಗಿ ಮನವಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿದಾರರು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

OTT ಪ್ಲಾಟ್‌ಫಾರ್ಮ್‌ಗಳ ವ್ಯಾಪ್ತಿ ವಿಶಾಲವಾಗಿದ್ದು, ಪ್ರಪಂಚದಾದ್ಯಂತ ತಕ್ಷಣ  ವಿತರಣೆಯಾಗಲಿದೆ. ಆದ್ದರಿಂದ ಚಲನಚಿತ್ರದ ಬಿಡುಗಡೆಯಿಂದ ಉಂಟಾದ ಹಾನಿಯನ್ನು ಸರಿಪಡಿಸುವುದು ಅಸಾಧ್ಯವೆಂದು ವಾದಿಸಲಾಗಿದೆ.

ವರದಿಯ ಪ್ರಕಾರ, ‘ಬಾಯಿಕಾಟ್ ನೆಟ್‌ಫ್ಲಿಕ್ಸ್’ ಮತ್ತು ‘ಬ್ಯಾನ್‌  ಮಹಾರಾಜ್ ಫಿಲ್ಮ್’ ನಂತಹ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಕಂಡು ಬಂದಿದ್ದು, ಕೆಲವು ಬಳಕೆದಾರರು “ಮಹಾರಾಜ್”ನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಚಲನ ಚಿತ್ರಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಹೇಳಿಕೊಂಡಿದ್ದಾರೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮಿಹಿರ್ ಜೋಶಿ ಮತ್ತು ವಕೀಲರಾದ ಕೆಯೂರ್ ಗಾಂಧಿ ಮತ್ತು ಕುನಾಲ್ ವ್ಯಾಸ್ ವಾದಿಸಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...