Homeಮುಖಪುಟಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದನು: ಚುನಾವಣಾ ಫಲಿತಾಂಶಗಳ ಬಗ್ಗೆ RSS ನಾಯಕ ಪ್ರತಿಕ್ರಿಯೆ

ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದನು: ಚುನಾವಣಾ ಫಲಿತಾಂಶಗಳ ಬಗ್ಗೆ RSS ನಾಯಕ ಪ್ರತಿಕ್ರಿಯೆ

- Advertisement -
- Advertisement -

ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಲೋಕಸಭೆ ಚುನಾವಣೆಯ ಫಲಿತಾಂಶಗಳ ಕುರಿತು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿಯ ಅಹಂಕಾರದ ವಿರುದ್ಧ ಟೀಕೆಯನ್ನು ಮಾಡಿದ್ದಾರೆ. ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದ್ದಾನೆ ಎಂದು ಹೇಳಿದ್ದಾರೆ.

ಕನೋಟಾದ ಜೈಪುರ ಬಳಿ ರಾಮರಥ ಅಯೋಧ್ಯೆ ಯಾತ್ರೆ ದರ್ಶನ ಪೂಜಾನ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆರೆಸ್ಸೆಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಯಾವುದೇ ಪಕ್ಷಗಳನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ ಆದರೆ ಅವರ ವರ್ತನೆಗಳು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.

ಭಗವಾನ್ ರಾಮನ ಭಕ್ತಿಯನ್ನು ಮಾಡಿದ ಪಕ್ಷವನ್ನು 241ರಲ್ಲಿ ನಿಲ್ಲಿಸಲಾಯಿತು ಆದರೆ ಅದನ್ನು ಅತಿದೊಡ್ಡ ಪಕ್ಷವನ್ನಾಗಿ ಮಾಡಲಾಯಿತು ಎಂದು ಅವರು ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೇಳಿದ್ದಾರೆ.

ರಾಮನಲ್ಲಿ ನಂಬಿಕೆಯಿಲ್ಲದವವರನ್ನು ಒಟ್ಟಿಗೆ 234ರಲ್ಲಿ ನಿಲ್ಲಿಸಲಾಯಿತು ಎಂದು ಅವರು ಹೇಳಿದ್ದು, ಸ್ಪಷ್ಟವಾಗಿ ಇದು ಅವರು ಇಂಡಿಯಾ ಮೈತ್ರಿಕೂಟವನ್ನು ಉಲ್ಲೇಖಿಸಿ ಹೇಳಿರುವುದಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಮರಾಜ್ಯದ ‘ವಿಧಾನ’ ನೋಡಿ; ರಾಮನ ಪೂಜೆ ಮಾಡಿದವರು ಕ್ರಮೇಣ ಅಹಂಕಾರಕ್ಕೆ ತಿರುಗಿದರು, ಆ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ಅವರ ದುರಹಂಕಾರದಿಂದ ನೀಡಬೇಕಾಗಿದ್ದ  ಅಧಿಕಾರವನ್ನು ದೇವರು ತಡೆದನು ಎಂದು ಹೇಳಿದ್ದಾರೆ.

ರಾಮನನ್ನು ವಿರೋಧಿಸಿದವರಿಗೆ ಯಾರಿಗೂ ಅಧಿಕಾರ ನೀಡಲಾಗಿಲ್ಲ, ಅವರಿಗೆ ಎರಡನೇ ಸ್ಥಾನ ದೊರೆಯಿತು. ದೇವರ ನ್ಯಾಯವು ನಿಜ ಮತ್ತು ಆನಂದದಾಯಕವಾಗಿದೆ ಎಂದು ಹೇಳಿದ್ದಾರೆ. ರಾಮನನ್ನು ಆರಾಧಿಸುವವರು ವಿನೀತರಾಗಿರಬೇಕು ಮತ್ತು ರಾಮನನ್ನು ವಿರೋಧಿಸಿದವರನ್ನು ರಾಮನೇ ನೋಡಿಕೊಂಡ. ರಾಮ ದೇವರು ಯಾರಿಗೂ ನೋವುಂಟು ಮಾಡುವುದಿಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ. ರಾಮ ಯಾವತ್ತೂ ನ್ಯಾಯದ ಪರವಾಗಿದ್ದಾರೆ ಎಂದು ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಅಥವಾ ಶಿಕ್ಷಿಸುವುದಿಲ್ಲ. ರಾಮನು ಯಾರಿಗೂ ದುಃಖವನ್ನುಂಟು ಮಾಡುವುದಿಲ್ಲ. ರಾಮನು ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಾನೆ. ಅವನು ಯಾವಾಗಲೂ ನ್ಯಾಯಯುತನಾಗಿರುತ್ತಾನೆ ಮತ್ತು ನ್ಯಾಯದಿಂದಲೇ ಮುಂದುವರಿಯುತ್ತಾನೆ. ಭಗವಾನ್ ರಾಮನು ಜನರನ್ನು ರಕ್ಷಿಸಿದನು ಮತ್ತು ರಾವಣನಿಗೆ ಒಳ್ಳೆಯದನ್ನು ಮಾಡಿದನು ಎಂದು ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...