Homeಮುಖಪುಟಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

- Advertisement -
- Advertisement -

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು “ಭಾರತದ ಮಾತೆ” ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಬಣ್ಣಿಸಿದ್ದು,  ಕಾಂಗ್ರೆಸ್ ಸರಕಾರದಲ್ಲಿ ದಿವಂಗತ ಮುಖ್ಯಮಂತ್ರಿಯಾಗಿದ್ದ ಕೆ ಕರುಣಾಕರನ್ ಅವರು ಧೈರ್ಯಶಾಲಿ ಆಡಳಿತಗಾರ ಎಂದು ಎಂದು ಹೇಳಿದ್ದಾರೆ.

ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸುರೇಶ್‌ ಗೋಪಿ,  ಕರುಣಾಕರನ್ ಮತ್ತು ಮಾರ್ಕ್ಸ್‌ವಾದಿ ಹಿರಿಯ ಇ ಕೆ ನಾಯನಾರ್ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸುರೇಶ್ ಗೋಪಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿ ಸುನೀಲ್ ಕುಮಾರ್ ಗೆಲುವನ್ನು ಸಾಧಿಸಿದ್ದರು.  ಸುರೇಶ್ ಗೋಪಿ ಸತತ ಎರಡನೇ ಬಾರಿಗೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 2019 ರಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಟಿಎನ್ ಪ್ರತಾಪನ್ ಅವರಿಂದ 1,21,267 ಮತಗಳಿಂದ ಸೋತಿದ್ದರು. ಮೂರನೇ ಸ್ಥಾನಕ್ಕೆ ತೃಪ್ತರಾಗಿದ್ದರು. ಈ ಬಾರಿ ಗೆಲ್ಲುವ ಮೂಲಕ ಕೇರಳದಲ್ಲಿ ಗೆದ್ದ ಮೊದಲ ಬಿಜೆಪಿ ಸಂಸದರಾಗಿದ್ದಾರೆ. ಎಲ್‌ಡಿಎಫ್‌ನಿಂದ ವಿಎಸ್ ಸುನೀಲ್ ಕುಮಾರ್ ಎರಡನೇ ಸ್ಥಾನದಲ್ಲಿದ್ದರೆ, ಯುಡಿಎಫ್‌ನಿಂದ ಕೆ ಮುರಳೀಧರನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದರು.

ಕರುಣಾಕರನ್ ಸ್ಮಾರಕಕ್ಕೆ  ಭೇಟಿಗೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ ಸುರೇಶ್‌ ಗೋಪಿ, ತಮ್ಮ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಇ ಕೆ ನಾಯನಾರ್ ಮತ್ತು ಪತ್ನಿ ಶಾರದಾ ಟೀಚರ್ ಅವರಂತೆ ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಅವರೊಂದಿಗೆ ನಾನು ನಿಕಟ ಸಂಬಂಧ ಹೊಂದಿದ್ದೆ ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿಯನ್ನು ಭಾರತದ ಮಾತೆ ಮತ್ತು ಕರುಣಾಕರನ್ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಪಿತಾಮಹ ಎಂದು ಕೂಡ ಸುರೇಶ್‌ ಗೋಪಿ ಹೇಳಿದ್ದಾರೆ. ಇದಲ್ಲದೆ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಶ್ರೀಲಂಕಾ ಸಂಘರ್ಷ ಕುರಿತ ‘ಬ್ರದರ್ಲೆಸ್ ನೈಟ್’ ಕಾದಂಬರಿಗೆ ಅಂತರಾಷ್ಟ್ರೀಯ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...