Homeಮುಖಪುಟಅಕ್ಬರ್ ನಗರದಲ್ಲಿ ತೆರವು ಕಾರ್ಯಾಚರಣೆ: 614 ಕಟ್ಟಡಗಳನ್ನು ಕೆಡವಿದ ಎಲ್‌ಡಿಎ

ಅಕ್ಬರ್ ನಗರದಲ್ಲಿ ತೆರವು ಕಾರ್ಯಾಚರಣೆ: 614 ಕಟ್ಟಡಗಳನ್ನು ಕೆಡವಿದ ಎಲ್‌ಡಿಎ

- Advertisement -
- Advertisement -

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಮೀಪದ ಮುಸ್ಲಿಂ ಬಾಹುಳ್ಯ ಪ್ರದೇಶ ಅಕ್ಬರ್ ನಗರದಲ್ಲಿ ಜೂನ್ 10ರಿಂದ ಮನೆ, ಅಂಗಡಿಗಳು ಸೇರಿದಂತೆ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಲಕ್ನೋ ಅಭಿವೃದ್ದಿ ಪ್ರಾಧಿಕಾರ (ಎಲ್‌ಡಿಎ) ಅಕ್ಬರ್ ನಗರ ಹಂತ 1 ಮತ್ತು 2ರಲ್ಲಿ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಇನ್ನು ಮೂರು ದಿನಗಳಲ್ಲಿ ಕಾರ್ಯಾಚರಣೆ ಅಂತ್ಯವಾಗಲಿದೆ ಎಂದು ಜೂನ್ 14ರಂದು ಎಲ್‌ಡಿಎ ವಿಸಿ ಇಂದ್ರಮಣಿ ತ್ರಿಪಾಠಿ ತಿಳಿಸಿದ್ದಾರೆ. ಅಕ್ಬರ್ ನಗರದಲ್ಲಿ ಈ ಹಿಂದೆಯೂ ತೆರವು ಕಾರ್ಯಾಚರಣೆ ನಡೆದಿದೆ. ಈ ನಡುವೆ ನ್ಯಾಯಾಲಯದ ಮಧ್ಯಪ್ರವೇಶದಿಂದ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಕುಕ್ರೈಲ್ ನದಿಪಾತ್ರದ ಅಭಿವೃದ್ದಿ ಮತ್ತು ಅತಿಕ್ರಮಣ ತೆರವಿಗಾಗಿ ಕಟ್ಟಡಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂದು ಎಲ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ (ಜೂನ್ 14) ಒಟ್ಟು 165 ನಿರ್ಮಾಣಗಳನ್ನು ಕಡೆವಲಾಗಿದ್ದು, ಜೂನ್ 10ರಿಂದ ಇದುವರೆಗೆ ಒಟ್ಟು 614 ಕಟ್ಟಡಗಳನ್ನು ಧ್ವಂಸ ಮಾಡಲಾಗಿದೆ.

ಸುಪ್ರೀಂ ಕೋರ್ಟ್ ಅಕ್ಬರ್‌ ನಗರದಲ್ಲಿ ತೆರವು ಕಾರ್ಯಾಚರಣೆ ನಡೆಸದಂತೆ ತಡೆ ನೀಡಿತ್ತು. ತಡೆ ಅವಧಿ ಪೂರ್ಣಗೊಂಡ ಹಿನ್ನೆಲೆ ತೆರವು ಕಾರ್ಯಾಚರಣೆ ಪುನರಾರಂಭಗೊಂಡಿದೆ ಎಂದು ವರದಿಯಾಗಿದೆ.

2015ರಲ್ಲಿ ಗೋಮತಿ ರಿವರ್ ಫ್ರಂಟ್ ಪ್ರಾಜೆಕ್ಟ್ ಅನ್ನು ಲಕ್ನೋ ಅಭಿವದ್ದಿ ಪ್ರಾಧಿಕಾರ ಕೈಗೆತ್ತಿಕೊಂಡಿದೆ. ಈ ಯೋಜನೆಯಡಿ ನಗರದ ನದಿ ಮತ್ತು ಅದರ ಪಾತ್ರದ ಅಭಿವೃದ್ದಿ. ನದಿ ಪಾತ್ರದ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಯೋಜನೆಯ ಭಾಗವಾಗಿ ಕುಕ್ರೈಲ್ ನದಿ ಪಾತ್ರದ ಅಕ್ಬರ್ ನಗರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಬೀದಿಗೆ ಬಿದ್ದ ಸಾವಿರಾರು ಜನರು

ಅಕ್ರಮವೋ ಸಕ್ರವೋ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಎಲ್‌ಡಿಎ ಮನೆ, ಅಂಗಡಿಗಳನ್ನು ಧ್ವಂಸ ಮಾಡಿರುವುದರಿಂದ ಅಕ್ಬರ್ ನಗರ ಜನರು ಬೀದಿಗೆ ಬಿದ್ದಿದ್ದಾರೆ. ಇರಲು ಮನೆಯಿಲ್ಲದೆ, ಜೀವನೋಪಾಯಕ್ಕೆ ದಾರಿಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಕ್ಬರ್ ನಗರ ಮುಸ್ಲಿಂ ಬಾಹುಳ್ಯದ ಪ್ರದೇಶವಾದ್ದರಿಂದ ಯೋಗಿ ಅದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿ ತೆರವು ಕಾರ್ಯಾಚರಣೆ ನಡೆಸಿದೆ ಎಂಬ ಆರೋಪಗಳೂ ಕೇಳಿ ಬಂದಿವೆ.

ಇದನ್ನೂ ಓದಿ : ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...