Homeಮುಖಪುಟಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ.

ಬಿಹಾರದ ಜೆಡಿ (ಯು) ಮತ್ತು ಆಂಧ್ರ ಪ್ರದೇಶದ ಟಿಡಿಪಿ ಪಕ್ಷಗಳ ಪ್ರಮುಖ ಬೆಂಬಲದೊಂದಿಗೆ ಸರ್ಕಾರ ರಚಿಸಿರುವ ಎನ್‌ಡಿಎ ಒಕ್ಕೂಟ, ಲೋಕಸಭೆ ಸ್ಪೀಕರ್ ಆಯ್ಕೆಯ ಲೆಕ್ಕಾಚಾರದಲ್ಲಿದೆ.

ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತನ್ನಗಾಗಿದ್ದು, ಇನ್ನೂ ಅಂತಿಮಗೊಂಡಿಲ್ಲ.

ಆಡಳಿತ ಎನ್‌ಡಿಎ ಒಕ್ಕೂಟದ್ದಾದರೂ, ಅದೇ ಒಕ್ಕೂಟದವರು ಲೋಕಸಭೆ ಸ್ಪೀಕರ್ ಆಗಬೇಕೆಂದಿಲ್ಲ. ಆದರೂ, ಸಾಮಾನ್ಯವಾಗಿ ಸ್ಪೀಕರ್ ಹುದ್ದೆ ಆಡಳಿತ ಪಕ್ಷದ ಕೂಟದವರಿಗೆ ಸಿಗುವುದು ವಾಡಿಕೆ. ಈ ಬಾರಿಯೂ ಈ ಪದ್ದತಿ ಮುಂದುವರಿಯಬಹುದು.

ಈ ನಡುವೆ ಉಪ ಸ್ಪೀಕರ್ ಹುದ್ದೆ ನಮಗೆ ನೀಡಬೇಕು ಎಂಬ ಬೇಡಿಯಕೆಯನ್ನು ಪ್ರತಿಪಕ್ಷಗಳು ಆಡಳಿತ ಕೂಟದ ಮುಂದೆ ಇಟ್ಟಿದೆ ಎಂದು ವರದಿಯಾಗಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪ್ರತಿಪಕ್ಷಗಳು ಎಚ್ಚರಿಕೆ ನೀಡಿವೆ ಎಂದು ತಿಳಿದು ಬಂದಿದೆ.

ಈ ಬಾರಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಪಡೆದುಕೊಂಡಿದೆ. ಹಾಗಾಗಿ, ಉಪ ಸ್ಪೀಕರ್ ಹುದ್ದೆ ನೀಡುವಂತೆ ಪಟ್ಟು ಹಿಡಿದಿದೆ. ಹೊಸ ಸರ್ಕಾರದ ಮೊದಲ ಸಂಸತ್‌ ಅಧಿವೇಶನಕ್ಕೂ ಮುನ್ನ ಈ ವಿಚಾರ ಮುನ್ನೆಲೆಗೆ ಬಂದಿದೆ.

ಸ್ಪೀಕರ್ ಹುದ್ದೆಯ ಜೊತೆಗೆ ಇಂಡಿಯಾ ಒಕ್ಕೂಟ ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ ಈಗಾಗಲೇ ರಾಹುಲ್ ಗಾಂಧಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡಲು ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಮೇಲೆ ನಿರ್ಣಯ ನಿಂತಿದೆ. ಬಹುತೇಕ ರಾಹುಲ್ ಗಾಂಧಿಯೇ ಪ್ರತಿಪಕ್ಷ ನಾಯಕರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...