Homeಮುಖಪುಟಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

ಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ 11 ವ್ಯಕ್ತಿಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿದ್ದ ಮೆನಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಪೊಲೀಸ್ ತಂಡ ಅಲ್ಲಿಗೆ ಧಾವಿಸಿತು, ಆರೋಪಿಗಳ ಹಿತ್ತಲಿನಲ್ಲಿ ಕಟ್ಟಿಹಾಕಲಾಗಿದ್ದ 150 ಹಸುಗಳನ್ನು ನಾವು ವಶಪಡಿಸಕೊಂಡಿದ್ದೇವೆ. ಎಲ್ಲ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಕೊಠಡಿಯಲ್ಲಿ ಪ್ರಾಣಿಗಳ ಕೊಬ್ಬು, ಜಾನುವಾರು ಚರ್ಮ ಮತ್ತು ಮೂಳೆಗಳನ್ನು ಕೂಡ ಪತ್ತೆ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸರ್ಕಾರಿ ಪಶುವೈದ್ಯರು ವಶಪಡಿಸಿಕೊಂಡ ಮಾಂಸವು ದನದ ಮಾಂಸ ಎಂದು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಹೈದರಾಬಾದ್‌ಗೆ ಮಾದರಿಗಳನ್ನು ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿರುವುದರಿಂದ ಅವುಗಳನ್ನು ನೆಲಸಮ ಮಾಡಲಾಗಿದೆ ಎಂದು ಎಸ್‌ಪಿ ಹೇಳಿದರು.

ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು. ಉಳಿದ 10 ಮಂದಿಗಾಗಿ ಹುಡುಕಾಟ ನಡೆಸುತ್ತಿರುವಾಗ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇಬ್ಬರು ಆರೋಪಿಗಳ ಕ್ರಿಮಿನಲ್ ಇತಿಹಾಸವನ್ನು ಸಂಗ್ರಹಿಸಲಾಗಿದ್ದು, ಉಳಿದ ವ್ಯಕ್ತಿಗಳ ಪೂರ್ವಾಪರಗಳನ್ನು ಕಂಡುಹಿಡಿಯಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳೆಲ್ಲರೂ ಮುಸ್ಲಿಮರು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ವರ್ತನೆಗೆ ಪ್ರಶಾಂತ್ ಭೂಷಣ್ ವಿರೋಧ:

ಗೋಮಾಂಸ ಪತ್ತೆಯಾಯಿತು ಎಂಬ ಕಾರಣಕ್ಕೆ ಮನೆಗಳನ್ನು ಧ್ವಂಸ ಮಾಡಿರುವ ಪ್ರಕರಣಕ್ಕೆ ಆಕ್ರೋಶ ಹೊರಹಾಕಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಇದು ಫಾರೆಸ್ಟ್‌ ಫ್ಯಾಸಿಸ್ಟ್ ಆಳ್ವಿಕೆ! ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ; ‘ಇಂಡಿಯಾ ಬ್ಲಾಕ್‌’ನ ಐತಿಹಾಸಿಕ ಗೆಲುವು ಬಿಜೆಪಿಯನ್ನು 240 ಸ್ಥಾನಗಳಿಗೆ ಸೀಮಿತಗೊಳಿಸಿದೆ: ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...