Homeಮುಖಪುಟಯುಎಸ್ ಕಂಪನಿಗೆ ಕೇಂದ್ರದ ನೆರವು: ಮಾತು ಬದಲಿಸಿದ ಸಚಿವ ಕುಮಾರಸ್ವಾಮಿ

ಯುಎಸ್ ಕಂಪನಿಗೆ ಕೇಂದ್ರದ ನೆರವು: ಮಾತು ಬದಲಿಸಿದ ಸಚಿವ ಕುಮಾರಸ್ವಾಮಿ

- Advertisement -
- Advertisement -

ಗುಜರಾತ್‌ನಲ್ಲಿ ಸೆಮಿಕಂಡಕ್ಟರ್‌ ಉದ್ಯಮದಲ್ಲಿ ಹೂಡಿಕೆ ಮಾಡುತ್ತಿರುವ ಕಂಪನಿಗೆ ನೀಡುತ್ತಿರುವ ಸಹಾಯಧನದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮಾತು ಬದಲಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ (ಜೂನ್ 14) ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, “ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿ ಗುಜರಾತ್‌ನಲ್ಲಿ 22,976 ಕೋಟಿ ರೂಪಾಯಿ (2.75 ಬಿಲಿಯನ್ ಡಾಲರ್) ಹೂಡಿಕೆ ಮಾಡುತ್ತಿದೆ. ಅದಕ್ಕೆ ಕೇಂದ್ರ ಹಾಗೂ ಗುಜರಾತ್ ರಾಜ್ಯ ಸರ್ಕಾರ ನೀಡುತ್ತಿರುವ ಸಹಾಯಧನ ಶೇ. 70ರಷ್ಟಿದೆ. ಕಂಪನಿ 5 ಸಾವಿರ ಉದ್ಯೋಗ ನೀಡುವ ಭರವಸೆ ನೀಡಿದೆ. ಇದಕ್ಕೆ ನೀಡುವ ಸಹಾಯಧನ ಲೆಕ್ಕ ಹಾಕಿದರೆ ಪ್ರತಿ ಉದ್ಯೋಗಕ್ಕೆ 3.2 ಕೋಟಿ ರೂ. ವೆಚ್ಚವಾಗುತ್ತದೆ. ಒಂದು ಉದ್ಯೋಗಕ್ಕೆ ಅಷ್ಟು ಹಣ ನೀಡುವುದು ಎಷ್ಟು ಸರಿ ಎಂದು ಸಚಿವನಾದ ಬಳಿಕ ಮೊದಲ ಸಭೆಯಲ್ಲೇ ನಾನು ಅಧಿಕಾರಿಗಳನ್ನು ಪ್ರಶ್ನಿಸಿದ್ದೆ” ಎಂದು ಹೇಳಿದ್ದರು.

“ಬೆಂಗಳೂರಿನ ಪೀಣ್ಯದಲ್ಲಿಯೂ ಹಲವು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಿವೆ. ಆ ಕಂಪನಿಗಳಿಗೆ ಎಷ್ಟು ಸಹಾಯಧನ ನೀಡಲಾಗಿದೆ?” ಎನ್ನುವ ಮೂಲಕ ಕೇಂದ್ರದ ಸಹಾಯಧನ ನೀತಿಯನ್ನು ಪ್ರಶ್ನಿಸಿದ್ದರು.

ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸಿದ್ದ ರಾಜ್ಯದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್, “ಕುಮಾರಸ್ವಾಮಿ ಹೇಳಿಕೆಯನ್ನು ಒಪ್ಪಿಕೊಳ್ಳುತ್ತೇನೆ. ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿಸಬೇಕು. ಆದರೆ, ಉದ್ಯೋಗ ಸೃಷ್ಟಿಸಲು ಸರ್ಕಾರವೇ 70% ಹಣ ನೀಡುವುದಾದರೆ, ಆ ಘಟಕಗಳನ್ನು ಸಾರ್ವಜನಿಕ ವಲಯದ ಉದ್ಯಮ ಎಂದು ಪರಿಗಣಿಸಬಹುದು. ಕೇಂದ್ರ ಸರ್ಕಾರ ಇದೇ ನೀತಿ ಮುಂದುವರೆಸುವುದಾದರೆ, ದೇಶದ ಎಲ್ಲಾ ರಾಜ್ಯಗಳಿಗೂ ಸಮಾನ ಸೂತ್ರ ಮತ್ತು ಅವಕಾಶ ದೊರೆಯಬೇಕು” ಎಂದಿದ್ದರು.

ತನ್ನ ಹೇಳಿಕೆಯ ಕುರಿತು ಶನಿವಾರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಸೆಮಿಕಂಡಕ್ಟರ್ ಒಂದು ಕಾರ್ಯತಂತ್ರದ ಉದ್ಯಮವಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಆಟೋ ಮೊಬೈಲ್ ಉತ್ಪಾದನೆಗೆ ಇದು ಮೂಲಭೂತ ಅವಶ್ಯಕತೆಯಾಗಿದೆ. ಈ ಎರಡೂ ಕ್ಷೇತ್ರಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಕ್ಷೇತ್ರದ ಬೆಳವಣಿಗೆಗೆ ಪ್ರಧಾನಿ ಮೋದಿಯವರು ತೆಗೆದುಕೊಂಡ ಉಪಕ್ರಮಗಳನ್ನು ಶ್ಲಾಘಿಸುತ್ತೇನೆ. ನನ್ನ ಸಚಿವಾಲಯದ ಮೂಲಕ ಅವುಗಳ ಅಗತ್ಯ ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಇಂಡಿಯಾ ಬ್ಲಾಕ್‌’ನ ಐತಿಹಾಸಿಕ ಗೆಲುವು ಬಿಜೆಪಿಯನ್ನು 240 ಸ್ಥಾನಗಳಿಗೆ ಸೀಮಿತಗೊಳಿಸಿದೆ: ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...