Homeಮುಖಪುಟಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಶಿವಸೇನೆ ಸಂಸದನ ಸಂಬಂಧಿ ವಿರುದ್ದ ಪ್ರಕರಣ ದಾಖಲಿಸಿ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿದ ಆರೋಪದ ಮೇಲೆ ಮುಂಬೈ ವಾಯುವ್ಯ ಕ್ಷೇತ್ರದ ಶಿವಸೇನೆ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಮಂಗೇಶ್ ಪಂಡಿಲ್ಕರ್ ಎಂಬಾತನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಅಧಿಕೃತ ಆದೇಶವನ್ನು ಪಾಲಿಸದಿರುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈತ ನಿಷೇಧವಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮತ ಎಣಿಕೆ ಕೇಂದ್ರದ ಅಧಿಕಾರಿ ಗೌರವ್ ದಿನೇಶ್ ಎಂಬವರು ವನ್ರೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಲೋಕಸಭೆ ಚುನಾವಣೆಗೆ ಶಿವಸೇನೆ (ಏಕನಾಥ್ ಶಿಂಧೆ ಬಣ) ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದ ರವೀಂದ್ರ ವೈಕರ್ 48 ಮತಗಳ ಅಂತರದಿಂದ ಶಿವಸೇನೆ (ಯುಬಿಟಿ) ಅಭ್ಯರ್ಥಿ ಅಮೋಲ್ ಗಜಾನನ್ ಕೃತಿಕಾರ್ ವಿರುದ್ದ ಗೆಲುವು ಸಾಧಿಸಿದ್ದಾರೆ.

ಇವಿಎಂ ಅನ್‌ಲಾಕ್ ಮಾಡಲು ಮೊಬೈಲ್ ಬಳಿಸಿದ ಮಂಗೇಶ್ ಪಂಡಿಲ್ಕರ್?

ಆರೋಪಿ ಮಂಗೇಶ್ ಪಂಡಿಲ್ಕರ್ ಬಳಸಿದ್ದ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿತ್ತು. ಮೊಬೈಲ್ ಬಳಸಿ ಆತನ ಇವಿಎಂ ಅನ್‌ಲಾಕ್ ಮಾಡಲು ಒಟಿಪಿ ಜನರೇಟ್ ಮಾಡಿದ್ದಾನೆ ಎಂದು ಮಿಡ್‌-ಡೇ ಪತ್ರಿಕೆ ವರದಿ ಮಾಡಿದೆ. ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದ ನೆಸ್ಕೋ ಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಹೇಳಿದೆ.

“ಮತ ಎಣಿಕೆ ಕೇಂದ್ರದಲ್ಲಿ ಬಳಸಿದ ಮೊಬೈಲ್ ಫೋನ್‌ನ ಡೇಟಾ ಮತ್ತು ಕರೆ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಮೊಬೈಲ್ ಫೋನ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಮೊಬೈಲ್ ಫೋನ್ ಅನ್ನು ಬೇರೆ ಯಾವುದಕ್ಕೆಲ್ಲ ಬಳಸಲಾಗಿದೆ ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವನ್ರೈ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾಗಿ ಉಲ್ಲೇಖಿಸಿ ಮಿಡ್-ಡೇ ವರದಿ ಮಾಡಿದೆ.

ಮಿಡ್-ಡೇ ವರದಿ ಭಾನುವಾರ (ಜೂನ್ 16) ವೈರಲ್ ಆಗಿದ್ದು, ಅನೇಕ ವಿರೋಧ ಪಕ್ಷದ ನಾಯಕರು ” ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ”ಯನ್ನು ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಇವಿಎಂಗಳು ಕಪ್ಪು ಪೆಟ್ಟಿಗೆ (Black Box)ಯಾಗಿದೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಾಳಜಿಯನ್ನು ಎತ್ತಲಾಗುತ್ತಿದೆ. ಸಂಸ್ಥೆಗಳಿಗೆ ಹೊಣೆಗಾರಿಕೆ ಇಲ್ಲದಿದ್ದಾಗ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಮತ್ತು ವಂಚನೆಗೆ ಗುರಿಯಾಗುತ್ತದೆ” ಎಂದಿದ್ದಾರೆ.

“ಎನ್‌ಡಿಎ ಅಭ್ಯರ್ಥಿ ಸಂಬಂಧಿಕರೊಬ್ಬರ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿದ್ದು ಏಕೆ? ಮತ ಎಣಿಕೆ ನಡೆಯುವ ಸ್ಥಳಕ್ಕೆ ಮೊಬೈಲ್ ಫೋನ್ ಹೇಗೆ ತಲುಪಿತು?” ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪ್ರಶ್ನಿಸಿದೆ.

“ಚುನಾವಣಾ ಆಯೋಗ ಸಂಪೂರ್ಣ ರಾಜಿಯಾಗಿದೆ. ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ನನ್ನ ಪ್ರಕಾರ, ಇಲ್ಲಿ ಮತ್ತೊಂದು ಚಂಡೀಗಢದ ಕೃತ್ಯವನ್ನು ಮರೆ ಮಾಚಲಾಗುತ್ತಿದೆ. ಒಮ್ಮೆ ದೇಶದ್ರೋಹಿಯಾದರೆ, ಯಾವಾಗಲೂ ದೇಶದ್ರೋಹಿಯೇ” ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ : ಯುಎಸ್ ಕಂಪನಿಗೆ ಕೇಂದ್ರದ ನೆರವು: ಮಾತು ಬದಲಿಸಿದ ಸಚಿವ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...