Homeಮುಖಪುಟಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಶಿವಸೇನೆ ಸಂಸದನ ಸಂಬಂಧಿ ವಿರುದ್ದ ಪ್ರಕರಣ ದಾಖಲಿಸಿ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿದ ಆರೋಪದ ಮೇಲೆ ಮುಂಬೈ ವಾಯುವ್ಯ ಕ್ಷೇತ್ರದ ಶಿವಸೇನೆ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಮಂಗೇಶ್ ಪಂಡಿಲ್ಕರ್ ಎಂಬಾತನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಅಧಿಕೃತ ಆದೇಶವನ್ನು ಪಾಲಿಸದಿರುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈತ ನಿಷೇಧವಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮತ ಎಣಿಕೆ ಕೇಂದ್ರದ ಅಧಿಕಾರಿ ಗೌರವ್ ದಿನೇಶ್ ಎಂಬವರು ವನ್ರೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಲೋಕಸಭೆ ಚುನಾವಣೆಗೆ ಶಿವಸೇನೆ (ಏಕನಾಥ್ ಶಿಂಧೆ ಬಣ) ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದ ರವೀಂದ್ರ ವೈಕರ್ 48 ಮತಗಳ ಅಂತರದಿಂದ ಶಿವಸೇನೆ (ಯುಬಿಟಿ) ಅಭ್ಯರ್ಥಿ ಅಮೋಲ್ ಗಜಾನನ್ ಕೃತಿಕಾರ್ ವಿರುದ್ದ ಗೆಲುವು ಸಾಧಿಸಿದ್ದಾರೆ.

ಇವಿಎಂ ಅನ್‌ಲಾಕ್ ಮಾಡಲು ಮೊಬೈಲ್ ಬಳಿಸಿದ ಮಂಗೇಶ್ ಪಂಡಿಲ್ಕರ್?

ಆರೋಪಿ ಮಂಗೇಶ್ ಪಂಡಿಲ್ಕರ್ ಬಳಸಿದ್ದ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿತ್ತು. ಮೊಬೈಲ್ ಬಳಸಿ ಆತನ ಇವಿಎಂ ಅನ್‌ಲಾಕ್ ಮಾಡಲು ಒಟಿಪಿ ಜನರೇಟ್ ಮಾಡಿದ್ದಾನೆ ಎಂದು ಮಿಡ್‌-ಡೇ ಪತ್ರಿಕೆ ವರದಿ ಮಾಡಿದೆ. ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದ ನೆಸ್ಕೋ ಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಹೇಳಿದೆ.

“ಮತ ಎಣಿಕೆ ಕೇಂದ್ರದಲ್ಲಿ ಬಳಸಿದ ಮೊಬೈಲ್ ಫೋನ್‌ನ ಡೇಟಾ ಮತ್ತು ಕರೆ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಮೊಬೈಲ್ ಫೋನ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಮೊಬೈಲ್ ಫೋನ್ ಅನ್ನು ಬೇರೆ ಯಾವುದಕ್ಕೆಲ್ಲ ಬಳಸಲಾಗಿದೆ ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವನ್ರೈ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾಗಿ ಉಲ್ಲೇಖಿಸಿ ಮಿಡ್-ಡೇ ವರದಿ ಮಾಡಿದೆ.

ಮಿಡ್-ಡೇ ವರದಿ ಭಾನುವಾರ (ಜೂನ್ 16) ವೈರಲ್ ಆಗಿದ್ದು, ಅನೇಕ ವಿರೋಧ ಪಕ್ಷದ ನಾಯಕರು ” ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ”ಯನ್ನು ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಇವಿಎಂಗಳು ಕಪ್ಪು ಪೆಟ್ಟಿಗೆ (Black Box)ಯಾಗಿದೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಾಳಜಿಯನ್ನು ಎತ್ತಲಾಗುತ್ತಿದೆ. ಸಂಸ್ಥೆಗಳಿಗೆ ಹೊಣೆಗಾರಿಕೆ ಇಲ್ಲದಿದ್ದಾಗ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಮತ್ತು ವಂಚನೆಗೆ ಗುರಿಯಾಗುತ್ತದೆ” ಎಂದಿದ್ದಾರೆ.

“ಎನ್‌ಡಿಎ ಅಭ್ಯರ್ಥಿ ಸಂಬಂಧಿಕರೊಬ್ಬರ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿದ್ದು ಏಕೆ? ಮತ ಎಣಿಕೆ ನಡೆಯುವ ಸ್ಥಳಕ್ಕೆ ಮೊಬೈಲ್ ಫೋನ್ ಹೇಗೆ ತಲುಪಿತು?” ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪ್ರಶ್ನಿಸಿದೆ.

“ಚುನಾವಣಾ ಆಯೋಗ ಸಂಪೂರ್ಣ ರಾಜಿಯಾಗಿದೆ. ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ನನ್ನ ಪ್ರಕಾರ, ಇಲ್ಲಿ ಮತ್ತೊಂದು ಚಂಡೀಗಢದ ಕೃತ್ಯವನ್ನು ಮರೆ ಮಾಚಲಾಗುತ್ತಿದೆ. ಒಮ್ಮೆ ದೇಶದ್ರೋಹಿಯಾದರೆ, ಯಾವಾಗಲೂ ದೇಶದ್ರೋಹಿಯೇ” ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ : ಯುಎಸ್ ಕಂಪನಿಗೆ ಕೇಂದ್ರದ ನೆರವು: ಮಾತು ಬದಲಿಸಿದ ಸಚಿವ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...