Homeಮುಖಪುಟರಾಜಕೀಯ ಮೇಲಾಟದ ನಡುವೆ ದೆಹಲಿಯಲ್ಲಿ ತೀವ್ರಗೊಂಡ ಜಲ ಬಿಕ್ಕಟ್ಟು; ಹಿಂಸಾಚಾರಕ್ಕೆ ಮುಂದಾದ ಜನರು

ರಾಜಕೀಯ ಮೇಲಾಟದ ನಡುವೆ ದೆಹಲಿಯಲ್ಲಿ ತೀವ್ರಗೊಂಡ ಜಲ ಬಿಕ್ಕಟ್ಟು; ಹಿಂಸಾಚಾರಕ್ಕೆ ಮುಂದಾದ ಜನರು

- Advertisement -
- Advertisement -

ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ತೀವ್ರತರವಾದ ಶಾಖದ ಅಲೆಯ ನಡುವೆಯೂ ಜಲ ಬಿಕ್ಕಟ್ಟು ಸಹ ಉಲ್ಬಣಗೊಂಡಿದ್ದು, ದೆಹಲಿಯಲ್ಲಿನ ನೀರಿನ ಸಮಸ್ಯೆ ಕಗ್ಗಂಟಾಗಿ ಉಳಿದಿದೆ. ನೀರಿನ ಕೊರತೆಯಿಂದ ಕಂಗೆಟ್ಟ ಜನರು ಹಿಂಸಾಚಾರಕ್ಕೆ ಮುಂದಾಗಿದ್ದು, ದ್ವಾರಕಾದಲ್ಲಿ ಸಾರ್ವಜನಿಕ ನಲ್ಲಿಯಿಂದ ನೀರು ತುಂಬಿಸುವ ವಿವಾದದಲ್ಲಿ ಮೂವರು ಗಾಯಗೊಂಡಿದ್ದಾರೆ. ದ್ವಾರಕಾ ಸೆಕ್ಟರ್ 23 ರಲ್ಲಿ ನಡೆದ ಜಗಳದ ಕುರಿತು ಎರಡು ಪಿಸಿಆರ್ ಕರೆಗಳು ಬಂದಿವೆ ಮತ್ತು ತನಿಖೆಗಾಗಿ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

“ಆರಂಭದಲ್ಲಿ, ವಿವಾದದಿಂದಾಗಿ ಮೂವರು ಗಾಯಗೊಂಡಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ ಮತ್ತು ಅವರನ್ನು ಚಿಕಿತ್ಸೆಗಾಗಿ ಇಂದಿರಾ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ಕಡೆಯವರ ಹೇಳಿಕೆಗಳ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಮಧ್ಯಪ್ರವೇಶಿಸುವಂತೆ ಆಪ್ ಶಾಸಕರು ಒತ್ತಾಯಿಸಿದ್ದಾರೆ. ಭಾನುವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಸಲ್ಲಿಸಿದ್ದು, ಹರಿಯಾಣ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ದೆಹಲಿ ನಿವಾಸಿಗಳಿಗೆ ತಕ್ಷಣದ ಪರಿಹಾರವನ್ನು ಒದಗಿಸುವಂತೆ ಒತ್ತಾಯಿಸಿದೆ.

ದೆಹಲಿಯಲ್ಲಿ ನೀರಿನ ಸಮಸ್ಯೆ ಪ್ರತಿ ಕ್ಷಣವೂ ಗಂಭೀರವಾಗುತ್ತಿದೆ ಎಂದು ಎಎಪಿ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ. “ತೀವ್ರ ಶಾಖವಿದ್ದು, ಈ ಬಿಸಿಲಿನ ತಾಪದಲ್ಲಿ ನೀರೇ ಜೀವನ, ನೀರಿನ ಬಿಕ್ಕಟ್ಟು ಎಂದರೆ ಜೀವನ ಬಿಕ್ಕಟ್ಟು” ಎಂದು ಪಾಂಡೆ ಹೇಳಿದರು.

ಪಕ್ಷದ ಎಲ್ಲ ಶಾಸಕರು ಶನಿವಾರ ಕೇಂದ್ರ ಜಲ ಶಕ್ತಿ ಸಚಿವರಿಗೆ ಪತ್ರ ಬರೆದಿದ್ದಾರೆ, ಅವರ ಎಲ್ಲ ಸಾರ್ವಜನಿಕ ಮತ್ತು ವೈಯಕ್ತಿಕ ಫೋನ್ ಸಂಖ್ಯೆಗಳಿಗೆ ಇಮೇಲ್ ಮತ್ತು ಸಂದೇಶ ಕಳುಹಿಸಿದ್ದಾರೆ. ದೆಹಲಿಯಲ್ಲಿ ಗಂಭೀರ ನೀರಿನ ಸಮಸ್ಯೆ ಇದೆ ಎಂದು ಹೇಳಿದ್ದಾರೆ ಎಂದು ಎಎಪಿ ನಾಯಕ ಹೇಳಿದರು. ಆದರೆ, ನಮ್ಮ ಭೇಟಿ ವೇಳೆ ಪಾಟೀಲ್ ಅವರ ನಿವಾಸದಲ್ಲಿ ಇರಲಿಲ್ಲ ಎಂದು ಎಎಪಿ ನಾಯಕರು ಹೇಳಿದ್ದಾರೆ.

ನಗರದ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ಬಿಜೆಪಿ ಭಾನುವಾರ ‘ಮಟ್ಕಾ ಫೋಡ್’ ಪ್ರತಿಭಟನೆ ನಡೆಸಿತು. ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ನೇತೃತ್ವದಲ್ಲಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನೀರಿನ ಕೊರತೆಯ ಕುರಿತು ನಗರದ 14 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರದ ದುರಾಡಳಿತವನ್ನು ಆರೋಪಿಸಿದ ಸಚ್‌ದೇವ, “ದೆಹಲಿಯಲ್ಲಿ ನೀರಿನ ಕೊರತೆಯು ನೈಸರ್ಗಿಕ ಕಾರಣಗಳಿಂದಲ್ಲ. ಆದರೆ, ಆಮ್ ಆದ್ಮಿ ಪಕ್ಷದ ಅಸಮರ್ಪಕ ನಿರ್ವಹಣೆ ಮತ್ತು ನಿರ್ಲಕ್ಷ್ಯದ ಪರಿಣಾಮವಾಗಿದೆ ಎಂದು ನಾವು ಯಾವಾಗಲೂ ಸಮರ್ಥಿಸಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ; ದೆಹಲಿ: ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...