Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...