Homeಫ್ಯಾಕ್ಟ್‌ಚೆಕ್FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು...

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ 20 ಸರ್ಕಾರಿ ಅನುದಾನಿತ ವಿಶ್ವ ವಿದ್ಯಾನಿಲಯಗಳು ಕುರಾನ್ ಅಧ್ಯಯನ ಮಾಡಲು ಕೋರ್ಸ್‌ಗಳನ್ನು ನೀಡುತ್ತಿವೆ. ಆದರೆ, ಭಗವದ್ಗೀತೆ ಅಥವಾ ರಾಮಾಯಣವನ್ನು ಅಧ್ಯಯನ ಮಾಡಲು ಯಾವುದೇ ಕೋರ್ಸ್‌ಗಳಿಲ್ಲ” ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಅನೇಕ ಬಳಕೆದಾರರು ಈ ರೀತಿಯ ಪೋಸ್ಟ್‌ಗಳನ್ನು ತಮ್ಮ ಫೇಸ್‌ಬುಕ್‌ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿರುವಂತೆ ಭಾರತದ ವಿವಿಧ ವಿಶ್ವ ವಿದ್ಯಾನಿಲಯಗಳು ಇಸ್ಲಾಮಿಕ್ ಅಧ್ಯಯನದ ಭಾಗವಾಗಿ ಕುರಾನ್ ಬೋಧಿಸುತ್ತಿರುವುದು ನಿಜ. ಆದರೆ, ಯಾವುದೇ ವಿವಿಗಳು ಭಗವದ್ಗೀತೆ ಅಥವಾ ರಾಮಾಯಣ ಬೋಧಿಸುತ್ತಿಲ್ಲ ಎನ್ನುವುದು ಸುಳ್ಳು.

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಮೊಹಮ್ಮದ್ ಅಲಿ ಜೌಹರ್ ಮತ್ತು ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದಂತಹ ಭಾರತದ ಅನೇಕ ವಿಶ್ವವಿದ್ಯಾನಿಲಯಗಳು ತಮ್ಮ ಇಸ್ಲಾಮಿಕ್ ಅಧ್ಯಯನ ಪಠ್ಯಕ್ರಮದ ಭಾಗವಾಗಿ ಕುರಾನ್ ಕಲಿಸುತ್ತಿವೆ.

ಅದೇ ರೀತಿ, ದೇಶದ ಅನೇಕ ವಿಶ್ವ ವಿದ್ಯಾಲಯಗಳು ಭಗವದ್ಗೀತೆಯ ಕೋರ್ಸ್‌ಗಳನ್ನೂ ನೀಡುತ್ತಿವೆ. ಉದಾಹರಣೆಗೆ : ಕುರುಕ್ಷೇತ್ರ ವಿಶ್ವವಿದ್ಯಾನಿಲಯವು 2012ರಲ್ಲಿ ಭಗವದ್ಗೀತೆಯ ಕುರಿತು ಕೋರ್ಸ್ ಪರಿಚಯಿಸಿದೆ. ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು (IGNOU)ಭಗವದ್ಗೀತೆ ಕುರಿತು ಸ್ನಾತಕೋತ್ತರ ಪ್ರಮಾಣಪತ್ರ ಕೋರ್ಸ್‌ ನೀಡುತ್ತಿದೆ. ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್ ಕೂಡ ಹಲವು ವರ್ಷಗಳಿಂದ ರಾಮಾಯಣ ಮತ್ತು ಮಹಾಭಾರತ ಕೋರ್ಸ್ ಅನ್ನು ನೀಡುತ್ತಿದೆ.

ಲಕ್ನೋ ವಿಶ್ವವಿದ್ಯಾಲಯವು 2020 ರಲ್ಲಿ ಭಗವದ್ಗೀತೆಯ ಆನ್‌ಲೈನ್ ಕೋರ್ಸ್ ಪರಿಚಯಿಸಿದೆ. ಗುಜರಾತ್, ಕರ್ನಾಟಕದಂತಹ ರಾಜ್ಯಗಳು ತಮ್ಮ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಿವೆ ಎಂದು ವರದಿಗಳಿವೆ.

ಡಿಸೆಂಬರ್ 2021 ರಲ್ಲಿ, ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವರು ಭಗವದ್ಗೀತೆಗೆ ಸಂಬಂಧಿಸಿದ ವಿಷಯವು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ನಲ್ಲಿ ವಿವಿಧ ತರಗತಿಗಳ ಭಾಗವಾಗಿದೆ ಎಂದು ತಿಳಿಸಿದ್ದರು.

ಇದಲ್ಲದೆ, ಯೋಗ ವಿಷಯಕ್ಕಾಗಿ ಯುಜಿಸಿ-ನೆಟ್ ಪರೀಕ್ಷೆಯ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗಿದೆ. ರಾಜ್ಯಗಳು ತಮ್ಮ ಪಠ್ಯಕ್ರಮದಲ್ಲಿ ಭಗವದ್ಗೀತೆ, ರಾಮಾಯಣ ಕುರಿತ ವಿಷಯಗಳನ್ನು ಸೇರಿಸಲು ಅಧಿಕಾರ ಹೊಂದಿವೆ.

ನಾವು ಮೇಲೆ ಉಲ್ಲೇಖಿಸಿದ ಮಾಹಿತಿಯ ಪ್ರಕಾರ, ಭಾರತದ ವಿವಿದ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳು ಭಗವದ್ಗೀತೆ, ರಾಮಾಯಣ ಬೋಧಿಸುತ್ತಿರುವುದು ಸ್ಪಷ್ಟವಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯನ್ನು ಟೀಕಿಸಿರುವ ಉದ್ಧವ್ ಠಾಕ್ರೆಯ ವೈರಲ್ ಭಾಷಣ 2019ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...