Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...