Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...