Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...