Homeಮುಖಪುಟಪ್ರವಾಹದಿಂದ ಹದಗೆಟ್ಟ ಅಸ್ಸಾಂ ಪರಿಸ್ಥಿತಿ; 30ಕ್ಕೂ ಹೆಚ್ಚು ಸಾವು, 1.6 ಲಕ್ಷಕ್ಕೂ ಜನರಿಗೆ ತೊಂದರೆ

ಪ್ರವಾಹದಿಂದ ಹದಗೆಟ್ಟ ಅಸ್ಸಾಂ ಪರಿಸ್ಥಿತಿ; 30ಕ್ಕೂ ಹೆಚ್ಚು ಸಾವು, 1.6 ಲಕ್ಷಕ್ಕೂ ಜನರಿಗೆ ತೊಂದರೆ

- Advertisement -
- Advertisement -

ಅಸ್ಸಾಂನಲ್ಲಿ ತೀವ್ರ ಪ್ರವಾಹದಿಂದಾಗಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 15 ಜಿಲ್ಲೆಗಳಲ್ಲಿ 1.61 ಲಕ್ಷ ಜನರು ಬಾಧಿತರಾಗಿದ್ದಾರೆ. ಕರೀಮ್‌ಗಂಜ್ ಜಿಲ್ಲೆಯ ಬದರ್‌ಪುರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಮತ್ತು ಆಕೆಯ ಮೂವರು ಪುತ್ರಿಯರು ಹಾಗೂ ಮೂರು ವರ್ಷದ ಬಾಲಕ ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ.

ಗಣಿಚೋರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಭೂಕುಸಿತ ಸಂಭವಿಸಿದೆ. ಭೂಕುಸಿತದ ಸಾವುಗಳು ಅಸ್ಸಾಂನಲ್ಲಿ ಮೇ ತಿಂಗಳಲ್ಲಿ ರೆಮಲ್ ಚಂಡಮಾರುತವು ಭೂಕುಸಿತವನ್ನು ಉಂಟುಮಾಡಿದ ನಂತರ ಒಟ್ಟು ಸಾವಿನ ಸಂಖ್ಯೆ 30 ಕ್ಕೆ ಏರಿಕೆಯಾಗಿದೆ.

“ಕಳೆದ ರಾತ್ರಿ 12.45ಕ್ಕೆ ಬದರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೈನಾಚೋರ (ಬೆಂದರ್‌ಗೂಲ್) ಗ್ರಾಮ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಮಾಹಿತಿ ಪಡೆದ ಬಾದರ್‌ಪುರ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ, ಸಿಬ್ಬಂದಿ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ, ಘಟನಾ ಸ್ಥಳಕ್ಕೆ ಧಾವಿಸಿ ಮೂರು ಗಂಟೆಗಳ ನಂತರ ರಕ್ಷಣಾ ತಂಡವು ಐದು ಮೃತದೇಹಗಳನ್ನು ಹೊರತೆಗೆದಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪಾರ್ಥ ಪ್ರೋತಿಮ್ ದಾಸ್ ತಿಳಿಸಿದ್ದಾರೆ.

ಮೃತರನ್ನು ರೋಯ್ಮುನ್ ನೆಸ್ಸಾ (55) ಮತ್ತು ಆಕೆಯ ಪುತ್ರಿಯರಾದ ಸಹಿದಾ ಖಾನಂ (18), ಜಾಹಿದಾ ಖಾನಂ (16), ಮತ್ತು ಹಮೀದಾ ಖಾನಂ (11) ಎಂದು ಗುರುತಿಸಲಾಗಿದೆ. ಮೂರು ವರ್ಷದ ಬಾಲಕನನ್ನು ಮಹಿಮುದ್ದೀನ್ ಅವರ ಪುತ್ರ ಮೆಹದಿ ಹಸನ್ ಎಂದು ಗುರುತಿಸಲಾಗಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಪ್ರಕಾರ, ಕರೀಮ್‌ಗಂಜ್ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 1,52,133 ಜನರು ಪ್ರವಾಹದ ಅಡಿಯಲ್ಲಿ ತತ್ತರಿಸಿದ್ದಾರೆ. ವಿಪತ್ತು ಒಟ್ಟು 1,378.64 ಹೆಕ್ಟೇರ್ ಬೆಳೆ ಪ್ರದೇಶ ಮತ್ತು 54,877 ಪ್ರಾಣಿಗಳ ಮೇಲೆ ಪರಿಣಾಮ ಬೀರಿದೆ. ಪ್ರಸ್ತುತ 24 ಕಂದಾಯ ವೃತ್ತಗಳಲ್ಲಿ 470 ಗ್ರಾಮಗಳು ಮುಳುಗಡೆಯಾಗಿವೆ.

ಪರಿಹಾರ ಕಾರ್ಯಗಳು ನಡೆಯುತ್ತಿದ್ದು, 43 ಪರಿಹಾರ ಶಿಬಿರಗಳಲ್ಲಿ 5,114 ಜನರು ಆಶ್ರಯ ಪಡೆದಿದ್ದಾರೆ. ಜೊತೆಗೆ, ಒಡ್ಡುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯ ಪ್ರಮಾಣದಿಂದ ಜನರಿಗೆ ಸಹಾಯ ಮತ್ತು ನೆರವು ನೀಡುವಲ್ಲಿ ತೊಂದರೆಗಳನ್ನು ಹೆಚ್ಚಿಸಿದೆ. ಕಂಪುರದ ಕೊಪಿಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮತ್ತಷ್ಟು ಪ್ರವಾಹದ ಆತಂಕ ಎದುರಾಗಿದೆ.

ಬಿಸ್ವನಾಥ್, ಲಖಿಂಪುರ, ಹೊಜೈ, ಬೊಂಗೈಗಾಂವ್, ನಲ್ಬರಿ, ತಮುಲ್‌ಪುರ್, ಉದಲ್‌ಗುರಿ, ದರ್ರಾಂಗ್, ಧೇಮಾಜಿ, ಹೈಲಕಂಡಿ, ಕರೀಮ್‌ಗಂಜ್, ಗೋಲ್‌ಪಾರಾ, ನಾಗಾಂವ್, ಚಿರಾಂಗ್ ಮತ್ತು ಕೊಕ್ರಜಾರ್ ಜಿಲ್ಲೆಗಳು ಪ್ರವಾಹ ಪೀಡಿತ ಜಿಲ್ಲೆಗಳಾಗಿವೆ.

ಇದನ್ನೂ ಓದಿ; ನಕಲಿ ದಾಖಲೆ ಸಲ್ಲಿಸಿದ ನೀಟ್‌ ಆಕಾಂಕ್ಷಿಗಳ ವಿರುದ್ಧ ಕಾನೂನು ಕ್ರಮಕ್ಕೆ ಎನ್‌ಟಿಎ ಮುಕ್ತವಾಗಿದೆ: ಅಲಹಾಬಾದ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...