Homeಮುಖಪುಟಪ್ರವಾಹದಿಂದ ಹದಗೆಟ್ಟ ಅಸ್ಸಾಂ ಪರಿಸ್ಥಿತಿ; 30ಕ್ಕೂ ಹೆಚ್ಚು ಸಾವು, 1.6 ಲಕ್ಷಕ್ಕೂ ಜನರಿಗೆ ತೊಂದರೆ

ಪ್ರವಾಹದಿಂದ ಹದಗೆಟ್ಟ ಅಸ್ಸಾಂ ಪರಿಸ್ಥಿತಿ; 30ಕ್ಕೂ ಹೆಚ್ಚು ಸಾವು, 1.6 ಲಕ್ಷಕ್ಕೂ ಜನರಿಗೆ ತೊಂದರೆ

- Advertisement -
- Advertisement -

ಅಸ್ಸಾಂನಲ್ಲಿ ತೀವ್ರ ಪ್ರವಾಹದಿಂದಾಗಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 15 ಜಿಲ್ಲೆಗಳಲ್ಲಿ 1.61 ಲಕ್ಷ ಜನರು ಬಾಧಿತರಾಗಿದ್ದಾರೆ. ಕರೀಮ್‌ಗಂಜ್ ಜಿಲ್ಲೆಯ ಬದರ್‌ಪುರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಮತ್ತು ಆಕೆಯ ಮೂವರು ಪುತ್ರಿಯರು ಹಾಗೂ ಮೂರು ವರ್ಷದ ಬಾಲಕ ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ.

ಗಣಿಚೋರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಭೂಕುಸಿತ ಸಂಭವಿಸಿದೆ. ಭೂಕುಸಿತದ ಸಾವುಗಳು ಅಸ್ಸಾಂನಲ್ಲಿ ಮೇ ತಿಂಗಳಲ್ಲಿ ರೆಮಲ್ ಚಂಡಮಾರುತವು ಭೂಕುಸಿತವನ್ನು ಉಂಟುಮಾಡಿದ ನಂತರ ಒಟ್ಟು ಸಾವಿನ ಸಂಖ್ಯೆ 30 ಕ್ಕೆ ಏರಿಕೆಯಾಗಿದೆ.

“ಕಳೆದ ರಾತ್ರಿ 12.45ಕ್ಕೆ ಬದರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೈನಾಚೋರ (ಬೆಂದರ್‌ಗೂಲ್) ಗ್ರಾಮ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಮಾಹಿತಿ ಪಡೆದ ಬಾದರ್‌ಪುರ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ, ಸಿಬ್ಬಂದಿ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ, ಘಟನಾ ಸ್ಥಳಕ್ಕೆ ಧಾವಿಸಿ ಮೂರು ಗಂಟೆಗಳ ನಂತರ ರಕ್ಷಣಾ ತಂಡವು ಐದು ಮೃತದೇಹಗಳನ್ನು ಹೊರತೆಗೆದಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪಾರ್ಥ ಪ್ರೋತಿಮ್ ದಾಸ್ ತಿಳಿಸಿದ್ದಾರೆ.

ಮೃತರನ್ನು ರೋಯ್ಮುನ್ ನೆಸ್ಸಾ (55) ಮತ್ತು ಆಕೆಯ ಪುತ್ರಿಯರಾದ ಸಹಿದಾ ಖಾನಂ (18), ಜಾಹಿದಾ ಖಾನಂ (16), ಮತ್ತು ಹಮೀದಾ ಖಾನಂ (11) ಎಂದು ಗುರುತಿಸಲಾಗಿದೆ. ಮೂರು ವರ್ಷದ ಬಾಲಕನನ್ನು ಮಹಿಮುದ್ದೀನ್ ಅವರ ಪುತ್ರ ಮೆಹದಿ ಹಸನ್ ಎಂದು ಗುರುತಿಸಲಾಗಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಪ್ರಕಾರ, ಕರೀಮ್‌ಗಂಜ್ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 1,52,133 ಜನರು ಪ್ರವಾಹದ ಅಡಿಯಲ್ಲಿ ತತ್ತರಿಸಿದ್ದಾರೆ. ವಿಪತ್ತು ಒಟ್ಟು 1,378.64 ಹೆಕ್ಟೇರ್ ಬೆಳೆ ಪ್ರದೇಶ ಮತ್ತು 54,877 ಪ್ರಾಣಿಗಳ ಮೇಲೆ ಪರಿಣಾಮ ಬೀರಿದೆ. ಪ್ರಸ್ತುತ 24 ಕಂದಾಯ ವೃತ್ತಗಳಲ್ಲಿ 470 ಗ್ರಾಮಗಳು ಮುಳುಗಡೆಯಾಗಿವೆ.

ಪರಿಹಾರ ಕಾರ್ಯಗಳು ನಡೆಯುತ್ತಿದ್ದು, 43 ಪರಿಹಾರ ಶಿಬಿರಗಳಲ್ಲಿ 5,114 ಜನರು ಆಶ್ರಯ ಪಡೆದಿದ್ದಾರೆ. ಜೊತೆಗೆ, ಒಡ್ಡುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯ ಪ್ರಮಾಣದಿಂದ ಜನರಿಗೆ ಸಹಾಯ ಮತ್ತು ನೆರವು ನೀಡುವಲ್ಲಿ ತೊಂದರೆಗಳನ್ನು ಹೆಚ್ಚಿಸಿದೆ. ಕಂಪುರದ ಕೊಪಿಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮತ್ತಷ್ಟು ಪ್ರವಾಹದ ಆತಂಕ ಎದುರಾಗಿದೆ.

ಬಿಸ್ವನಾಥ್, ಲಖಿಂಪುರ, ಹೊಜೈ, ಬೊಂಗೈಗಾಂವ್, ನಲ್ಬರಿ, ತಮುಲ್‌ಪುರ್, ಉದಲ್‌ಗುರಿ, ದರ್ರಾಂಗ್, ಧೇಮಾಜಿ, ಹೈಲಕಂಡಿ, ಕರೀಮ್‌ಗಂಜ್, ಗೋಲ್‌ಪಾರಾ, ನಾಗಾಂವ್, ಚಿರಾಂಗ್ ಮತ್ತು ಕೊಕ್ರಜಾರ್ ಜಿಲ್ಲೆಗಳು ಪ್ರವಾಹ ಪೀಡಿತ ಜಿಲ್ಲೆಗಳಾಗಿವೆ.

ಇದನ್ನೂ ಓದಿ; ನಕಲಿ ದಾಖಲೆ ಸಲ್ಲಿಸಿದ ನೀಟ್‌ ಆಕಾಂಕ್ಷಿಗಳ ವಿರುದ್ಧ ಕಾನೂನು ಕ್ರಮಕ್ಕೆ ಎನ್‌ಟಿಎ ಮುಕ್ತವಾಗಿದೆ: ಅಲಹಾಬಾದ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...