Homeಫ್ಯಾಕ್ಟ್‌ಚೆಕ್FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

- Advertisement -
- Advertisement -

“ನಿಮ್ಮ ಪಾರ್ಸೆಲ್ ಗೋದಾಮಿನಲ್ಲಿ ಡೆಲಿವರಿಗಾಗಿ ಕಾಯ್ತಿದೆ. ಹಲವಾರು ಬಾರಿ ಡೆಲಿವರಿ ಮಾಡಲು ಪ್ರಯತ್ನಿಸಿದರೂ, ತಪ್ಪಾದ ವಿಳಾಸದ ಕಾರಣ ಸಾಧ್ಯವಾಗಿಲ್ಲ. ದಯವಿಟ್ಟು ಕೆಳಗಿನ ಲಿಂಕ್ ಒತ್ತಿ, ನಿಮ್ಮ ಮಾಹಿತಿಯನ್ನು ಅಪ್ಡೇಡ್ ಮಾಡಿ. 24 ಗಂಟೆಯೊಳಗೆ ಡೆಲಿವರಿ ಮಾಡಲಾಗುವುದು” ಎಂಬ ಸಂದೇಶವೊಂದು ಭಾರತೀಯ ಅಂಚೆಯ ಹೆಸರಿನಲ್ಲಿ ಅನೇಕ ಜನರ ಮೊಬೈಲ್‌ಗೆ ಬರುತ್ತಿವೆ.

ಭಾರತೀಯ ಅಂಚೆಯ ಹೆಸರಿನಲ್ಲಿ ಸಂದೇಶ ಬರುತ್ತಿರುವುದರಿಂದ ಅನೇಕ ಜನರು ಅದರಲ್ಲಿರುವ ಲಿಂಕ್ ಒತ್ತಿ ತಮ್ಮ ಮಾಹಿತಿಯನ್ನು ಅಪ್ಲೋಡ್ ಮಾಡುವ ಸಾಧ್ಯಗಳಿವೆ.

ಹಾಗಾದರೆ, ಅಂಚೆ ಇಲಾಖೆ ನಿಜವಾಗಿಯೂ ಆ ರೀತಿಯ ಸಂದೇಶ ಕಳುಹಿಸಿದೆಯಾ? ಲಿಂಕ್ ಒತ್ತಿದರೆ ಏನಾಗುತ್ತದೆ ಎಂದು ನೋಡೋಣ.

ಫ್ಯಾಕ್ಟ್‌ ಚೆಕ್ : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ (ಫೇಕ್) ಎಂದು ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್‌ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಖಚಿತಪಡಿಸಿದೆ.

“ಅಂಚೆ ಇಲಾಖೆ ಸಂದೇಶದ ಮೂಲಕ ವಿಳಾಸ ಅಪ್ಡೇಟ್ ಮಾಡಲು ಕೋರುವುದಿಲ್ಲ. ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ. ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಅಂಚೆಗೆ ಸಂಬಂಧಿಸಿದ ಏನೇ ಗೊಂದಲಗಳಿದ್ದರೂ, ನೇರವಾಗಿ ಅಂಚೆ ಕಚೇರಿಗೆ ಹೋಗಿ ಬಗೆಹರಿಸಿಕೊಳ್ಳಿ” ಎಂದು ಪಿಐಬಿ ತಿಳಿಸಿದೆ.

ಅಂಚೆ ಇಲಾಖೆಯೂ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿ, ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ ಎಂದು ಖಚಿತಪಡಿಸಿದೆ

ಅಂಚೆ ಇಲಾಖೆಯ ಹೆಸರಿನಲ್ಲಿ ಬಂದಿರುವ ಸಂದೇಶದಲ್ಲಿರುವ ಲಿಂಕ್ ಒತ್ತಿ ವೈಯುಕ್ತಿಕ ಮಾಹಿತಿ ನೀಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಕದಿಯುವ ಸಾಧ್ಯತೆಗಳಿವೆ.

ಎಸ್‌ಎಂಎಸ್‌ ಮೂಲಕ ನಡೆಯುವ ಸೈಬರ್ ವಂಚಕರ ದಾಳಿಯಿಂದ ತಪ್ಪಿಸಿಕೊಳ್ಳಲು ಪಿಐಬಿ ಕೆಲವೊಂದು ಸಲಹೆಗಳನ್ನು ನೀಡಿವೆ. ಅವುಗಳು ಹೀಗಿವೆ.

  • ಅಪರಿಚಿತ ಮೂಲಗಳಿಂದ, ವಿಶೇಷವಾಗಿ ತುರ್ತಾಗಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುವ ಸಂದೇಶಗಳನ್ನು ನಂಬುವುದರಿಂದ ದೂರವಿರಿ
  • ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಬರುವ ಸಂದೇಶಗಳ ಸತ್ಯಾಸತ್ಯತೆಯನ್ನು ತಿಳಿದು ಮುಂದುವರಿಯಿರಿ
  • ಮೊಬೈಲ್‌ಗೆ ಬಂದಿರುವ ಅನುಮಾನಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅಗತ್ಯವಿದ್ದರೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಟೈಪ್‌ ಮಾಡಿ ಪರಿಶೀಲಿಸಿ
  • ಅಪರಿಚಿತ ಸಂದೇಶಗಳಿಗೆ ನಿಮ್ಮ ವೈಯುಕ್ತಿಕ, ಹಣಕಾಸಿನ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೇಡಿ
  • ಯಾವುದೇ ಅನುಮಾನಾಸ್ಪದ ಸಂದೇಶ ಬಂದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳು ಅಥವಾ ಸೈಬರ್ ಸುರಕ್ಷತಾ ತಂಡಕ್ಕೆ ವರದಿ ಮಾಡಿ

ಸರ್ಕಾರದ ಅಧಿಕೃತ ಸಂಸ್ಥೆ ಪಿಐಬಿ ಖಚಿತಪಡಿಸಿದ ಪ್ರಕಾರ, ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ.

ಇದನ್ನೂ ಓದಿ : FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...