Homeಮುಖಪುಟಬಿಹಾರ: ಉದ್ಯೋಗ ನೀಡುವ ನೆಪದಲ್ಲಿ ತಿಂಗಳುಗಟ್ಟಲೆ ಮಹಿಳೆಯರ ಬಂಧನ; ಚಿತ್ರಹಿಂಸೆ ನೀಡಿ ಅತ್ಯಾಚಾರ

ಬಿಹಾರ: ಉದ್ಯೋಗ ನೀಡುವ ನೆಪದಲ್ಲಿ ತಿಂಗಳುಗಟ್ಟಲೆ ಮಹಿಳೆಯರ ಬಂಧನ; ಚಿತ್ರಹಿಂಸೆ ನೀಡಿ ಅತ್ಯಾಚಾರ

- Advertisement -
- Advertisement -

ಬಿಹಾರದ ಮುಜಾಫರ್‌ಪುರದಲ್ಲಿ ಹಲವಾರು ಮಹಿಳೆಯರನ್ನು ಟೆಲಿಮಾರ್ಕೆಟಿಂಗ್ ಮತ್ತು ನೆಟ್‌ವರ್ಕಿಂಗ್ ಕಂಪನಿಯೊಂದರಿಂದ ನೇಮಕ ಮಾಡಿದ ನಂತರ ತಿಂಗಳುಗಳ ಕಾಲ ಸೆರೆಯಲ್ಲಿಟ್ಟು, ಚಿತ್ರಹಿಂಸೆ ಮತ್ತು ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಲಾಗಿದೆ, ಈ ಪ್ರಕರಣವು 2018 ರಲ್ಲಿ ವರದಿಯಾದ ಮುಜಫರ್‌ಪುರ್ ಬಾಲಿಕಾ ಗೃಹ ಶೆಲ್ಟರ್ ಹೋಮ್ ದೌರ್ಜನ್ಯವನ್ನು ಹೋಲುತ್ತದೆ.

ಇತ್ತೀಚಿನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಲ್ಲಿ ಒಬ್ಬನನ್ನು ಮಂಗಳವಾರ ಬಂಧಿಸಲಾಗಿದೆ. ಅಪರಾಧವು ರಹಸ್ಯವಾಗಿ ಮುಂದುವರಿದಿದ್ದು, ಈ ವರ್ಷದ ಆರಂಭದಲ್ಲಿ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಲು ಧೈರ್ಯಮಾಡಿದ ಸಂತ್ರಸ್ತೆಯೊಬ್ಬಳು ಜೂನ್ 2 ರಂದು ಅಹಿಯಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತೆಯು ಈ ಪ್ರಕರಣದಲ್ಲಿ ಕ್ರಮಕ್ಕಾಗಿ ಕಾಯುತ್ತಿರುವಾಗ, ಬಾಲಕಿಯರ ಚಿತ್ರಹಿಂಸೆ ಮತ್ತು ದೌರ್ಜನ್ಯವನ್ನು ತೋರಿಸುವ ವೀಡಿಯೊ ಕ್ಲಿಪ್ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆಗೆ ಕಾರಣವಾಯಿತು. ನಂತರ ಪೊಲೀಸರು ತಿಲಕ್ ಕುಮಾರ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಗೋರಖ್‌ಪುರದಿಂದ ಬಂಧಿಸಿದ್ದರು.

“ನಾವು ಗೋರಖ್‌ಪುರದಿಂದ ತಿಲಕ್ ಕುಮಾರ್ ಸಿಂಗ್ ಎಂಬಾತನನ್ನು ಬಂಧಿಸಿದ್ದೇವೆ. ಪ್ರಕರಣದ ಒಂಬತ್ತು ಆರೋಪಿಗಳಲ್ಲಿ ಒಬ್ಬನಾಗಿದ್ದು, ಮುಜಾಫರ್‌ಪುರಕ್ಕೆ ಕರೆತರಲಾಗುತ್ತಿದೆ. ಇತರ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಮುಜಫರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ತಿಳಿಸಿದ್ದಾರೆ.

ಇತರ ಆರೋಪಿಗಳಲ್ಲಿ ಮನೀಶ್ ಪ್ರತಾಪ್ ಸಿಂಗ್, ಇನಾಮುಲ್ ಅನ್ಸಾರಿ, ಅಹ್ಮದ್ ರಜಾ, ವಿಜಯ್ ಗಿರಿ, ಕನ್ಹಯ್ಯಾ ಕುಶ್ವಾಹ, ಹೃದಯಾನಂದ್ ಸಿಂಗ್, ಹರೇರಾಮ್ ಕುಮಾರ್ ಮತ್ತು ಇರ್ಫಾನ್ ಸೇರಿದ್ದಾರೆ. ಮನೀಶ್ ನೋಯ್ಡಾ ಮೂಲದವರಾಗಿದ್ದರೆ, ಇತರರು ಬಿಹಾರದ ವಿವಿಧ ಭಾಗಗಳಿಂದ ಬಂದವರು.

ಬದುಕುಳಿದವರು ಟೆಲಿಮಾರ್ಕೆಟಿಂಗ್ ಮತ್ತು ನೆಟ್‌ವರ್ಕಿಂಗ್ ಕಂಪನಿ ಡಿಬಿಆರ್‌ ಯುನಿಕ್ ಅನ್ನು ಜೂನ್ 2022 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಜಾಹೀರಾತನ್ನು ವೀಕ್ಷಿಸಿದ ನಂತರ ಮಹಿಳೆಯರು ಸೇರಿಕೊಂಡರು ಎಂದು ಆರೋಪಿಸಿದ್ದಾರೆ. ಹರೇರಾಮ್ ಕುಮಾರ್ ಆಕೆಯನ್ನು ಸಂಪರ್ಕಿಸಿ ತಿಂಗಳಿಗೆ ₹15,000 ವೇತನ ನೀಡುವುದಾಗಿ ಭರವಸೆ ನೀಡಿದ್ದರು. ಆಕೆಯು ಪ್ರಸ್ತಾಪವನ್ನು ಒಪ್ಪಿಕೊಂಡ ನಂತರ, ತರಬೇತಿಗಾಗಿ ₹20,500 ಠೇವಣಿ ಮಾಡಲು ಕೇಳಿದ್ದಾರೆ; ನಂತರ, ಆಕೆ ತನ್ನ ಚಿಕ್ಕಮ್ಮನಿಂದ ಸಾಲವನ್ನು ಪಡೆದು ಹಣ ನೀಡಿದ್ದಾರೆ.

“ನಾನು ಮುಜಾಫರ್‌ಪುರದ ಕಂಪನಿಗೆ ಸೇರಿಕೊಂಡೆ; ಇನ್ನೂ ಹಲವಾರು ಹುಡುಗಿಯರಿದ್ದರು. ನಮ್ಮನ್ನು ಒಂದು ಕೋಣೆಯಲ್ಲಿ ಇರಿಸಲಾಯಿತು. ಫೋನ್ ಮೂಲಕ ಗ್ರಾಹಕರನ್ನು ಹೇಗೆ ಮನವರಿಕೆ ಮಾಡುವುದು, ಹೆಚ್ಚಿನ ಜನರೊಂದಿಗೆ ಸಂಪರ್ಕ ಸಾಧಿಸುವುದು ಮತ್ತು ಉದ್ಯೋಗಗಳಿಗಾಗಿ ಕಂಪನಿಯತ್ತ ಅವರನ್ನು ಆಕರ್ಷಿಸುವುದು ಹೇಗೆ ಎಂಬುದರ ಕುರಿತು ತರಗತಿಗಳನ್ನು ನಡೆಸಲಾಯಿತು. 15 ದಿನಗಳ ತರಬೇತಿಯ ನಂತರ ನಮ್ಮ ಕೆಲಸ ಪ್ರಾರಂಭವಾಯಿತು” ಎಂದು ಸಂತ್ರಸ್ತೆಯೊಬ್ಬರು ತಿಳಿಸಿದರು.

“ನಮ್ಮನ್ನು ಮುಜಾಫರ್‌ಪುರ, ಹಾಜಿಪುರ (ವೈಶಾಲಿ ಜಿಲ್ಲೆ) ಮತ್ತು ಇತರ ಸ್ಥಳಗಳಲ್ಲಿ ಕೊಠಡಿಗಳಲ್ಲಿ ಇರಿಸಲಾಯಿತು ಮತ್ತು ಹೆಚ್ಚಿನ ಹುಡುಗಿಯರನ್ನು ಕೆಲಸಕ್ಕೆ ನೇಂಇಸುವಂತೆ ಒತ್ತಾಯಿಸಲಾಯಿತು. ಕೆಲಸ ಮಾಡಲು ನಿರಾಕರಿಸಿದ ಮತ್ತು ಬಿಡಲು ಬಯಸಿದವರಿಗೆ ಚಿತ್ರಹಿಂಸೆ ನೀಡಿ ಅತ್ಯಾಚಾರ ಎಸಗಲಾಯಿತು. ನಮ್ಮನ್ನೆಲ್ಲ ಬಂಧಿಯಾಗಿಟ್ಟರು; ಹುಡುಗಿಯರಿಗೆ ಒಮ್ಮೆ ಮನೆಗೆ ಕರೆ ಮಾಡಲು ಅವಕಾಶ ನೀಡಲಾಯಿತು. ಆದರೆ, ಕಂಪನಿಯ ಜನರ ಸಮ್ಮುಖದಲ್ಲಿ ಮಾತ್ರ” ಎಂದು ಅವರು ಹೇಳಿದರು.

21 ಹುಡುಗಿಯರನ್ನು ಕಂಪನಿಗೆ ಸಂಪರ್ಕಿಸಿದ ನಂತರ ಆಕೆ ಇನ್ನು ಮುಂದೆ ಕೆಲಸ ಮಾಡಲು ನಿರಾಕರಿಸಿದಳು ಎಂದು ಸಂತ್ರಸತೆಯಿಬ್ಬರು ಹೇಳಿದದ್ದಾರೆ. ಆಕೆಗೆ ಚಿತ್ರಹಿಂಸೆ ನೀಡಲಾಯಿತು, ಅತ್ಯಾಚಾರ ಮಾಡಲಾಯಿತು ಮತ್ತು ಗರ್ಭಪಾತಕ್ಕೆ ಒಳಗಾಗಬೇಕಾಯಿತು ಎಂದು ಅವರು ಹೇಳಿದರು. ಬದುಕುಳಿದವರ ಪ್ರಕಾರ, ಹಲವಾರು ಇತರ ಹುಡುಗಿಯರು ಅದೇ ಸ್ಥಿತಿ ಅನುಭವಿಸಿದರು. ಕಂಪನಿಯಲ್ಲಿ ಸುಮಾರು 200 ಹುಡುಗಿಯರು ಕೆಲಸ ಮಾಡುತ್ತಿದ್ದರು. ಆರೋಪಿಗಳು ತನ್ನನ್ನು ಮತ್ತು ಇತರ ಹುಡುಗಿಯರನ್ನು ವಶಪಡಿಸಿಕೊಳ್ಳಲು ಮದುವೆಯಾಗುವುದಾಗಿ ಭರವಸೆ ನೀಡಿದರು ಎಂದು ಅವರು ಹೇಳಿದರು.

ಎಸ್‌ಎಸ್‌ಪಿ ರಾಕೇಶ್ ಕುಮಾರ್, ಈ ವಿಷಯವು ಬಿಂಬಿಸಲಾಗುತ್ತಿರುವ ರೀತಿಯದ್ದಲ್ಲ ಎಂದು ಈ ಪತ್ರಿಕೆಗೆ ತಿಳಿಸಿದ್ದಾರೆ. ಏಕೆಂದರೆ, ಇದುವರೆಗೆ ಯಾವುದೇ ಹುಡುಗಿಯರು ಇದೇ ರೀತಿಯ ಆರೋಪಕ್ಕೆ ಮುಂದಾಗಿಲ್ಲ ಎಂದು ಹೇಳಿದ್ದಾರೆ.

“ಈ ಹಂತದಲ್ಲಿ ನಾವು ಏನನ್ನೂ ನಿರಾಕರಿಸುವುದಿಲ್ಲ ಮತ್ತು ಪ್ರಸಾರವಾದ ವೀಡಿಯೊವನ್ನು ನಾವು ಸತ್ಯವೆಂದು ಒಪ್ಪಿಕೊಳ್ಳುತ್ತೇವೆ. ಆದರೆ, ಈ ಪ್ರಕರಣವು ವಂಚನೆ, ದೈಹಿಕ ಸಂಬಂಧ ಮತ್ತು ಗರ್ಭಪಾತಕ್ಕೆ ಪ್ರವೇಶಿಸಲು ಮದುವೆಯ ಭರವಸೆಯನ್ನು ತೋರುತ್ತದೆ. ಸಂತ್ರಸ್ತ ಮಹಿಳೆಗೆ ಗರ್ಭಪಾತದ ವಿವರಗಳನ್ನು ಮತ್ತು ಆಕೆ ಚಿಕಿತ್ಸೆ ಪಡೆದುಕೊಂಡ ಕ್ಲಿನಿಕ್ ವಿವರ ಒದಗಿಸುವಂತೆ ನಾವು ಕೇಳಿದ್ದೇವೆ. ಆದರೆ, ಸ್ಥಳೀಯ ಔಷಧಿಗಳ ಸಹಾಯದಿಂದ ಇದನ್ನು ಮಾಡಲಾಗಿದೆ ಎಂದು ಅವರು ಹೇಳಿದರು” ಎಸ್ಎಸ್‌ಪಿ ಹೇಳಿದರು.

50 ಕ್ಕೂ ಹೆಚ್ಚು ಪುರುಷರು ಮತ್ತು ಯಾವುದೇ ಮಹಿಳೆಯರು ಕೆಲಸ ಮಾಡದ ಮುಜಾಫರ್‌ಪುರದ ಕಂಪನಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದರು. “ಅವರು ಕೆಲವೊಮ್ಮೆ ಥಳಿಸಿದರು. ಆದರೆ, ಹುಡುಗಿಯರ ಅತ್ಯಾಚಾರವನ್ನು ನಿರಾಕರಿಸಿದರು” ಎಂದು ಅವರು ಹೇಳಿದರು.

ಕಂಪನಿಯ ದಾಖಲೆಗಳು ಕಳಪೆಯಾಗಿವೆ ಮತ್ತು ಅದರ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮುಜಾಫರ್‌ಪುರ ಪೊಲೀಸರು ಸೇರಿಸಿದ್ದಾರೆ. “ಒಂದು ಪ್ರಕರಣ – ಎಫ್‌ಐಆರ್ ಸಂಖ್ಯೆ 607/23 – ಕಳೆದ ವರ್ಷ ಅದೇ ಅಹಿಯಾಪುರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ವಂಚನೆ ಮತ್ತು ಸುಲಿಗೆ ಆರೋಪವನ್ನು ದಾಖಲಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ” ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ; ಕುವೈತ್‌ಗೆ ತೆರಳಲು ಕೇರಳ ಸಚಿವರಿಗೆ ಅನುಮತಿ ನಿರಾಕರಣೆ; ಪ್ರಧಾನಿಗೆ ಪತ್ರ ಬರೆದ ಪಿಣರಾಯಿ ವಿಜಯನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...