Homeಎಕಾನಮಿಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

ಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

- Advertisement -
- Advertisement -

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಕೇಂದ್ರ ಸರ್ಕಾರ ಸುಖಾಸುಮ್ಮನೆ ವಿರೋಧ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಂಕೇಡೆ ಕ್ರೀಡಾಂಗಣಲ್ಲಿ  ಉದ್ಯಮಿಗಳು, ವೃತ್ತಿಪರರು ಮತ್ತು ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯಲ್ಲಿ ಆಟೋ ಮೊಬೈಲ್ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿದೆ. ಉತ್ಪಾದನೆ ಕುಸಿತವಾಗಿದೆ. ಕೆಲಸ ಇಲ್ಲವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಆರ್ಧಿಕ ಪರಿಸ್ಥಿತಿ ಕೆಟ್ಟುಹೋಗಿದೆ. ಆದರೂ ಭಾರತ ಸರ್ಕಾರ ವಿರೋಧ ಪಕ್ಷಗಳನ್ನು ದೂರುತ್ತಿದೆ. ಆರ್ಥಿಕ ಸ್ಥಿತಿ ಪುನಶ್ಚೇನಕ್ಕೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಇದೇ ರಾಜ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಎಂದು ಸಿಂಗ್ ಟೀಕಿಸಿದ್ದಾರೆ.

ದೇಶದ ಪ್ರತಿ ಮೂವರು ಯುವಕರ ಪೈಕಿ ಒಬ್ಬರಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆಯಿಂದಾಗಿ ಹಳ್ಳಿಗಳ ಹೆಚ್ಚು ಜನರು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಹಳ್ಳಿಗಳು ಸಂಕಷ್ಟ ಎದುರಿಸುತ್ತಿವೆ. ಎಂದರು.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದು ಬಿಕ್ಕಟ್ಟು ಎದುರಿಸುತ್ತಿದೆ. ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ 16 ಲಕ್ಷ ಮಂದಿಗೆ ಸಂಕಷ್ಟ ಎದುರಿಸಬೇಕಾಗಿದೆ. ಅವರ ಕುಂದುಕೊರತೆ ಕೇಳಬೇಕಾದ ಸರ್ಕಾರಗಳು ಮೌನ ವಹಿಸಿದೆ. ಹೀಗಾಗಿ ತಕ್ಷಣವೇ ಪಿಎಂಸಿ ಬಿಕ್ಕಟ್ಟನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಹೇಳಿಕೆಗಳನ್ನು ಮತ್ತೆ ಹೇಳೋಕೆ ಇಷ್ಟಪಡುವುದಿಲ್ಲ. ಆರ್ಥಿಕತೆ ವಿಷಯದಲ್ಲಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಅದನ್ನು ಸರಿಪಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕತೆ ಕುಸಿತಕ್ಕೆ ಕಾರಣಗಳು, ಆರ್ಥಿಕತೆ ಸುಧಾರಣೆಗೆ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ ಎಂದರು.

‘ಯುಪಿಎ ಆಡಳಿತವಿದ್ದಾಗಲೂ ಹಲವು ಸವಾಲುಗಳಿದ್ದವು. ಅವುಗಳಿಗೆ ನಾವು ಪರಿಹಾರ ಕಂಡುಕೊಂಡಿದ್ದೆವು. ಈಗ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹಿಂದಿನ ಐದು ವರ್ಷ ಸಹ ನಿಮ್ಮದೇ ಆಡಳಿತವಿತ್ತು. ಹೀಗಿರುವಾಗ ಸರಿಯಾದ ಮಾರ್ಗಸೂಚಿ ಕಂಡುಕೊಳ್ಳುವುದನ್ನು ಬಿಟ್ಟು ಸುಮ್ಮನೇ ನಮ್ಮತ್ತ ಬೊಟ್ಟು ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದೀರಿ’. ‘ಆರ್ಥಿಕ ಅಭಿವೃದ್ಧಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತ ಹೋದರೆ, ಭಾರತದ ಆರ್ಥಿಕತೆ 2024ರೊಳಗೆ 5 ಟ್ರಿಲಿಯನ್ ಡಾಲರ್ಸ್ ಗುರಿ ಮುಟ್ಟಲು ಸಾಧ್ಯವಿಲ್ಲ. ಆರ್ಥಿಕತೆಯ ಸುಧಾರಣೆಗೆ ಸೂಕ್ತ ತಂತ್ರಗಳನ್ನು ಹೆಣೆಯಬೇಕಿದೆ’ ಎಂದು ಕುಟುಕಿದರು.

ಇದಕ್ಕೂ ಮೊದಲು ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಕೆಟ್ಟ ಸ್ಥಿತಿಗೆ ಮನಮೋಹನ್ ಸಿಂಗ್ ಮತ್ತು ಮಾಜಿ ಆರ್‌ಬಿಐ ಗರ್ವನರ್‌ ರಘುರಾಮ್ ರಾಜನ್ ಕಾರಣ ಎಂದು ಆಪಾದಿಸಿದ್ದರು. ಇದಕ್ಕೆ ಇಂದು ಮನಮೋಹನ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...