Homeಎಕಾನಮಿಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

ಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

- Advertisement -
- Advertisement -

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಕೇಂದ್ರ ಸರ್ಕಾರ ಸುಖಾಸುಮ್ಮನೆ ವಿರೋಧ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಂಕೇಡೆ ಕ್ರೀಡಾಂಗಣಲ್ಲಿ  ಉದ್ಯಮಿಗಳು, ವೃತ್ತಿಪರರು ಮತ್ತು ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯಲ್ಲಿ ಆಟೋ ಮೊಬೈಲ್ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿದೆ. ಉತ್ಪಾದನೆ ಕುಸಿತವಾಗಿದೆ. ಕೆಲಸ ಇಲ್ಲವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಆರ್ಧಿಕ ಪರಿಸ್ಥಿತಿ ಕೆಟ್ಟುಹೋಗಿದೆ. ಆದರೂ ಭಾರತ ಸರ್ಕಾರ ವಿರೋಧ ಪಕ್ಷಗಳನ್ನು ದೂರುತ್ತಿದೆ. ಆರ್ಥಿಕ ಸ್ಥಿತಿ ಪುನಶ್ಚೇನಕ್ಕೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಇದೇ ರಾಜ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಎಂದು ಸಿಂಗ್ ಟೀಕಿಸಿದ್ದಾರೆ.

ದೇಶದ ಪ್ರತಿ ಮೂವರು ಯುವಕರ ಪೈಕಿ ಒಬ್ಬರಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆಯಿಂದಾಗಿ ಹಳ್ಳಿಗಳ ಹೆಚ್ಚು ಜನರು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಹಳ್ಳಿಗಳು ಸಂಕಷ್ಟ ಎದುರಿಸುತ್ತಿವೆ. ಎಂದರು.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದು ಬಿಕ್ಕಟ್ಟು ಎದುರಿಸುತ್ತಿದೆ. ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ 16 ಲಕ್ಷ ಮಂದಿಗೆ ಸಂಕಷ್ಟ ಎದುರಿಸಬೇಕಾಗಿದೆ. ಅವರ ಕುಂದುಕೊರತೆ ಕೇಳಬೇಕಾದ ಸರ್ಕಾರಗಳು ಮೌನ ವಹಿಸಿದೆ. ಹೀಗಾಗಿ ತಕ್ಷಣವೇ ಪಿಎಂಸಿ ಬಿಕ್ಕಟ್ಟನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಹೇಳಿಕೆಗಳನ್ನು ಮತ್ತೆ ಹೇಳೋಕೆ ಇಷ್ಟಪಡುವುದಿಲ್ಲ. ಆರ್ಥಿಕತೆ ವಿಷಯದಲ್ಲಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಅದನ್ನು ಸರಿಪಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕತೆ ಕುಸಿತಕ್ಕೆ ಕಾರಣಗಳು, ಆರ್ಥಿಕತೆ ಸುಧಾರಣೆಗೆ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ ಎಂದರು.

‘ಯುಪಿಎ ಆಡಳಿತವಿದ್ದಾಗಲೂ ಹಲವು ಸವಾಲುಗಳಿದ್ದವು. ಅವುಗಳಿಗೆ ನಾವು ಪರಿಹಾರ ಕಂಡುಕೊಂಡಿದ್ದೆವು. ಈಗ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹಿಂದಿನ ಐದು ವರ್ಷ ಸಹ ನಿಮ್ಮದೇ ಆಡಳಿತವಿತ್ತು. ಹೀಗಿರುವಾಗ ಸರಿಯಾದ ಮಾರ್ಗಸೂಚಿ ಕಂಡುಕೊಳ್ಳುವುದನ್ನು ಬಿಟ್ಟು ಸುಮ್ಮನೇ ನಮ್ಮತ್ತ ಬೊಟ್ಟು ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದೀರಿ’. ‘ಆರ್ಥಿಕ ಅಭಿವೃದ್ಧಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತ ಹೋದರೆ, ಭಾರತದ ಆರ್ಥಿಕತೆ 2024ರೊಳಗೆ 5 ಟ್ರಿಲಿಯನ್ ಡಾಲರ್ಸ್ ಗುರಿ ಮುಟ್ಟಲು ಸಾಧ್ಯವಿಲ್ಲ. ಆರ್ಥಿಕತೆಯ ಸುಧಾರಣೆಗೆ ಸೂಕ್ತ ತಂತ್ರಗಳನ್ನು ಹೆಣೆಯಬೇಕಿದೆ’ ಎಂದು ಕುಟುಕಿದರು.

ಇದಕ್ಕೂ ಮೊದಲು ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಕೆಟ್ಟ ಸ್ಥಿತಿಗೆ ಮನಮೋಹನ್ ಸಿಂಗ್ ಮತ್ತು ಮಾಜಿ ಆರ್‌ಬಿಐ ಗರ್ವನರ್‌ ರಘುರಾಮ್ ರಾಜನ್ ಕಾರಣ ಎಂದು ಆಪಾದಿಸಿದ್ದರು. ಇದಕ್ಕೆ ಇಂದು ಮನಮೋಹನ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...