Homeಮುಖಪುಟಈ ವರ್ಷ 4,300 ಭಾರತೀಯ ಮಿಲಿಯನೇರ್‌ಗಳು ದೇಶ ತೊರೆಯುವ ಸಾಧ್ಯತೆ, ಹೆಚ್ಚಿನವರು ಯುಎಇಗೆ ತೆರಳಲಿದ್ದಾರೆ: ವರದಿ

ಈ ವರ್ಷ 4,300 ಭಾರತೀಯ ಮಿಲಿಯನೇರ್‌ಗಳು ದೇಶ ತೊರೆಯುವ ಸಾಧ್ಯತೆ, ಹೆಚ್ಚಿನವರು ಯುಎಇಗೆ ತೆರಳಲಿದ್ದಾರೆ: ವರದಿ

- Advertisement -
- Advertisement -

ಈ ವರ್ಷ ಸುಮಾರು 4,300 ಲಕ್ಷಾಧಿಪತಿಗಳು ಭಾರತದಿಂದ ವಲಸೆ ಹೋಗುವ ನಿರೀಕ್ಷೆಯಿದೆ. ಅವರಲ್ಲಿ ಹೆಚ್ಚಿನವರು ಯುಎಇಯಲ್ಲಿ ವಾಸಿಸಲು ನಿರ್ಧರಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಹೂಡಿಕೆ ವಲಸೆ ಸಲಹಾ ಸಂಸ್ಥೆಯಾದ ಹೆನ್ಲಿ ಮತ್ತು ಪಾರ್ಟ್‌ನರ್ಸ್‌ನ ಇತ್ತೀಚಿನ ವರದಿ ಹೇಳಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿದ್ದರೂ, ಚೀನಾ ಮತ್ತು ಯುಕೆ ನಂತರ ಲಕ್ಷಾಧಿಪತಿಗಳ ವಲಸೆಯ ವಿಷಯದಲ್ಲಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಚೀನಾ ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿರುವ ಭಾರತ ಲಕ್ಷಾದಿಪತಿಗಳ ವಲಸೆಯ ವಿಷಯದಲ್ಲಿ ಚೀನಾಕ್ಕಿಂತ ಶೇಕಡಾ 30 ಶೇ. ಹಿಂದೆಯಿದೆ.

ಹೆನ್ಲಿ ಮತ್ತು ಪಾರ್ಟ್‌ನರ್ಸ್‌ನ ವರದಿಯು ಕಳೆದ ವರ್ಷ ಭಾರತದಿಂದ 5,100 ಲಕ್ಷಾದಿಪತಿಗಳು ವಿದೇಶಕ್ಕೆ ವಲಸೆ ಹೋಗಿರುವುದನ್ನು ಎತ್ತಿ ತೋರಿಸಿತ್ತು.

ಭಾರತವು ಪ್ರತಿ ವರ್ಷ ಸಾವಿರಾರು ಲಕ್ಷಾದಿಪತಿಗಳನ್ನು ಕಳೆದುಕೊಳ್ಳುತ್ತಿದೆ. ಅನೇಕರು ಯುಎಇಗೆ ವಲಸೆ ಹೋಗುತ್ತಿದ್ದಾರೆ. ಸಂಪತ್ತಿನ ಬೆಳವಣಿಗೆಯೊಂದಿಗೆ ಇದನ್ನು ತಗ್ಗಿಸಬಹುದು. ಹೊಸ ಲಕ್ಷಾದಿಪತಿಗಳನ್ನು ಸೃಷ್ಟಿಸುವುದಕ್ಕಿಂತ ಇರುವವರನ್ನು ಉಳಿಸಿಕೊಳ್ಳಬಹುದು ಎಂದು ವರದಿ ಹೇಳಿರುವುದಾಗಿ ಎನ್‌ಡಿವಿ ವರದಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ, ಭಾರತದ ಅಧಿಕ ನಿವ್ವಳ ಮೌಲ್ಯದ ವ್ಯಕ್ತಿಗಳ ನಿರಂತರ ವಲಸೆಯ ಹಿನ್ನೆಲೆ ಅನೇಕ ಭಾರತೀಯ ಖಾಸಗಿ ಬ್ಯಾಂಕ್‌ಗಳು ಯುಎಇಗೆ ವಿಸ್ತರಿಸುತ್ತಿವೆ. ಭಾರತೀಯ ಕುಟುಂಬಗಳಿಗೆ ಸಂಪತ್ತು ನಿರ್ವಹಣೆ ಸೇವೆಗಳನ್ನು ಒದಗಿಸುತ್ತಿರುವ ಕೆಲವು ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು 360 ಒನ್ ವೆಲ್ತ್ ಒಳಗೊಂಡಿವೆ ಎಂದು ವರದಿ ವಿವರಿಸಿದೆ.

ಲಕ್ಷಾದಿಪತಿಗಳ ವಲಸೆಯು ಒಂದು ದೇಶದ ವಿದೇಶಿ ವಿನಿಮಯದ ಮೇಲೆ ಗಮನಾರ್ಹ ಪರಿಣಾಮ ಬೀರುವ ವಿದ್ಯಮಾನವಾಗಿದೆ. ಹೆಚ್ಚಿನ ನಿವ್ವಳ ಮೌಲ್ಯದ ವ್ಯಕ್ತಿಗಳು ಮತ್ತೊಂದು ದೇಶಕ್ಕೆ ವಲಸೆ ಹೋಗುವಾಗ ಅವರ ಆಸ್ತಿಯ ಗಣನೀಯ ಭಾಗವು ಅವರ ಜೊತೆ ಹೋಗುತ್ತದೆ.

ಲಕ್ಷಾದಿಪತಿಗಳು ತಾಯ್ನಾಡು ತೊರೆದು ವಲಸೆ ಹೋಗಲು ಮುಖ್ಯ ಕಾರಣಗಳಲ್ಲಿ ತೆರಿಗೆ ಪ್ರಯೋಜನಗಳು, ಸುರಕ್ಷತೆ, ಆರ್ಥಿಕ ಪರಿಗಣನೆ, ನಿವೃತ್ತಿ ನಿರೀಕ್ಷೆ, ವ್ಯಾಪಾರ ಅವಕಾಶಗಳು ಮತ್ತು ಉತ್ತಮ ಜೀವನಶೈಲಿ ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಇದನ್ನೂ ಓದಿ : ಜಾತಿ ಸಮೀಕ್ಷೆಗೆ ಅನುಮೋದನೆ ನೀಡಿದ ಚಂಪೈ ಸೊರೇನ್ ನೇತೃತ್ವದ ಜಾರ್ಖಂಡ್ ಕ್ಯಾಬಿನೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...