Homeಮುಖಪುಟಭಾರತದಿಂದ ಯುಎಇಗೆ ಈ ಬಾರಿ 4,300 ಮಿಲಿಯನೇರ್‌ಗಳ ವಲಸೆ ಸಾಧ್ಯತೆ: ವರದಿ

ಭಾರತದಿಂದ ಯುಎಇಗೆ ಈ ಬಾರಿ 4,300 ಮಿಲಿಯನೇರ್‌ಗಳ ವಲಸೆ ಸಾಧ್ಯತೆ: ವರದಿ

- Advertisement -
- Advertisement -

ಈ ವರ್ಷ ಸುಮಾರು 4,300 ಮಿಲಿಯನೇರ್‌ಗಳು ಭಾರತದಿಂದ ವಲಸೆ ಹೋಗುವ ನಿರೀಕ್ಷೆಯಿದ್ದು, ಅವರಲ್ಲಿ ಹೆಚ್ಚಿನವರು ದೇಶವನ್ನು ತೊರೆದ ನಂತರ ಯುಎಇಯಲ್ಲಿ ವಾಸಿಸಲು ನಿರ್ಧರಿಸಿದ್ದಾರೆ ಎಂದು ಅಂತರಾಷ್ಟ್ರೀಯ ಹೂಡಿಕೆ ವಲಸೆ ಸಲಹಾ ಸಂಸ್ಥೆ (ಹೆನ್ಲಿ ಮತ್ತು ಪಾಲುದಾರರ) ವರದಿ ತಿಳಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿದೆ. ಚೀನಾ ಮತ್ತು ಇಂಗ್ಲೆಂಡ್‌ ನಂತರದ ಸ್ಥಾನದಲ್ಲಿ ಮಿಲಿಯನೇರ್‌ಗಳ ವಲಸೆಯ ವಿಷಯದಲ್ಲಿ ಭಾರತವು ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ.

ಈಗ ಚೀನಾವನ್ನು ಮೀರಿಸಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿರುವ ಭಾರತವು, ಮಿಲಿಯನೇರ್ ವಲಸೆ ವಿಚಾರದಲ್ಲಿ ಚೀನಾಕ್ಕಿಂತ 30%ಕ್ಕಿಂತ ಕಡಿಮೆ ಇದೆ. ಕಳೆದ ವರ್ಷದ ಜಾಗತಿಕ ಸಂಸ್ಥೆಯ ವರದಿಯಲ್ಲಿ ಭಾರತದಿಂದ 5,100 ಮಿಲಿಯನೇರ್‌ಗಳು ವಿದೇಶಕ್ಕೆ ವಲಸೆ ಹೋಗಿರುವುದನ್ನು ಎತ್ತಿ ತೋರಿಸಿತ್ತು.

ಭಾರತದಿಂದ ಪ್ರತಿ ವರ್ಷ ಸಾವಿರಾರು ಮಿಲಿಯನೇರ್‌ಗಳು ದೇಶಬಿಟ್ಟು  ಹೋಗುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಯುಎಇಗೆ ವಲಸೆ ಹೋಗುತ್ತಾರೆ. ಇದರಿಂದಾಗಿ ಕಳೆದ ದಶಕದಲ್ಲಿ 85%ದಷ್ಟು ಸಂಪತ್ತಿನ ಹೊರಹರಿವುನ ಬಗ್ಗೆ ಕಳವಳ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಅನೇಕ ಭಾರತೀಯ ಖಾಸಗಿ ಬ್ಯಾಂಕ್‌ಗಳು ಯುಎಇಯಲ್ಲಿ ವಿಸ್ತರಿಸುತ್ತಿವೆ. ಭಾರತೀಯ ಕುಟುಂಬಗಳಿಗೆ ಸಂಪತ್ತು ನಿರ್ವಹಣೆ ಸೇವೆಗಳನ್ನು ಕೆಲವು ಬ್ಯಾಂಕ್‌ಗಳು ಒದಗಿಸುತ್ತಿದೆ. ಅವುಗಳಲ್ಲಿ ಹಣಕಾಸು ಸಂಸ್ಥೆಗಳಾದ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು 360 ಒನ್ ವೆಲ್ತನ್ನು ಒಳಗೊಂಡಿವೆ ಎಂದು NDTV ವರದಿ ಮಾಡಿದೆ.

ಮಿಲಿಯನೇರ್‌ಗಳ ವಲಸೆಯು ಒಂದು ದೇಶದ ವಿದೇಶಿ ವಿನಿಮಯಗಳ ಮೇಲೆ ಗಮನಾರ್ಹ ಪ್ರಭಾವವನ್ನು ಹೊಂದಿರುವ ವಿದ್ಯಮಾನವಾಗಿದೆ, ಏಕೆಂದರೆ ಈ ಹೆಚ್ಚಿನ ನಿವ್ವಳ ಮೌಲ್ಯದ ವ್ಯಕ್ತಿಗಳು ಮತ್ತೊಂದು ದೇಶಕ್ಕೆ ವಲಸೆ ಹೋಗುವಾಗ ಅವರ ಆಸ್ತಿಯ ಗಣನೀಯ ಭಾಗ ಕೂಡ ವಿದೇಶಕ್ಕೆ ಹೋಗುತ್ತದೆ.

ಭಾರತದಿಂದ ಮಿಲಿಯನೇರ್‌ಗಳ ವಲಸೆಗೆ ಮುಖ್ಯ ಕಾರಣಗಳಲ್ಲಿ ತೆರಿಗೆ ಪ್ರಯೋಜನಗಳು, ಸುರಕ್ಷತೆ ಮತ್ತು ಆರ್ಥಿಕ ಪರಿಗಣನೆಗಳು, ನಿವೃತ್ತಿ ನಿರೀಕ್ಷೆಗಳು, ವ್ಯಾಪಾರ ಅವಕಾಶಗಳು ಮತ್ತು ಉತ್ತಮ ಜೀವನಶೈಲಿ ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...