Homeಮುಖಪುಟ'ಪೇಪರ್ ಲೀಕ್ ಸರ್ಕಾರ..': ಯುಜಿಸಿ-ನೆಟ್ ಪರೀಕ್ಷೆಗಳ ರದ್ದು ನಿರ್ಧಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

‘ಪೇಪರ್ ಲೀಕ್ ಸರ್ಕಾರ..’: ಯುಜಿಸಿ-ನೆಟ್ ಪರೀಕ್ಷೆಗಳ ರದ್ದು ನಿರ್ಧಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬುಧವಾರ ವ್ಯಂಗ್ಯವಾಡಿದ್ದು, ಕೇಂದ್ರ ಸರ್ಕಾರವನ್ನು ‘ಪೇಪರ್ ಸೋರಿಕೆ ಸರ್ಕಾರ’ ಎಂದು ಕರೆದಿದೆ. ಶಿಕ್ಷಣ ಸಚಿವರು ಈಗ ಜವಾಬ್ದಾರಿ ತೆಗೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ನಿನ್ನೆ ದೇಶದ ವಿವಿಧ ನಗರಗಳಲ್ಲಿ ಯುಜಿಸಿ-ನೆಟ್ ಪರೀಕ್ಷೆ ನಡೆಸಲಾಗಿತ್ತು. ಇಂದು ಪೇಪರ್ ಸೋರಿಕೆ ಶಂಕೆಯಿಂದ ಪರೀಕ್ಷೆ ರದ್ದುಗೊಳಿಸಲಾಗಿದೆ. ಮೊದಲು ನೀಟ್ ಪೇಪರ್ ಸೋರಿಕೆಯಾಗಿದೆ ಮತ್ತು ಇದೀಗ ಯುಜಿಸಿ-ನೆಟ್ ಪೇಪರ್ ಸೋರಿಕೆಯಾಗಿದೆ. ಮೋದಿ ಸರ್ಕಾರ ‘ಪೇಪರ್ ಲೀಕ್ ಸರ್ಕಾರ” ಎಂದು ಲೇವಡಿ ಮಾಡಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು “ನೀಟ್ ಪರೀಕ್ಷಾ ಪೇ ಚರ್ಚಾ” ಯಾವಾಗ ನಡೆಸುತ್ತಾರೆ ಎಂದು ಅವರು ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಪ್ರರ್ಶನಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಖರ್ಗೆ, “ನರೇಂದ್ರ ಮೋದಿಯವರೆ, ನೀವು ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚಿಸುತ್ತೀರಿ. ಆದರೆ, ನೀವು ಯಾವಾಗ ‘ನೀಟ್ ಪರೀಕ್ಷಾ ಪೇ ಚರ್ಚಾ’ ನಡೆಸುತ್ತೀರಿ. ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವುದು ಲಕ್ಷಾಂತರ ವಿದ್ಯಾರ್ಥಿಗಳ ಉತ್ಸಾಹದ ವಿಜಯವಾಗಿದೆ” ಎಂದು ಅವರು ಹೇಳಿದರು.

“ಇದು ಮೋದಿ ಸರ್ಕಾರದ ದುರಹಂಕಾರದ ಸೋಲು, ಇದರಿಂದಾಗಿ ಅವರು ನಮ್ಮ ಯುವಕರ ಭವಿಷ್ಯವನ್ನು ತುಳಿಯುವ ಹೇಯ ಪ್ರಯತ್ನವನ್ನು ಮಾಡಿದ್ದಾರೆ” ಎಂದು ಅವರು ಹೇಳಿದರು.

ನೀಟ್‌ನಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವರು ಮೊದಲು ಹೇಳುತ್ತಾರೆ. ಆದರೆ, ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ಶಿಕ್ಷಣ ಮಾಫಿಯಾವನ್ನು ಬಂಧಿಸಿದಾಗ, ಸಚಿವರು “ಏನೋ ಹಗರಣ” ನಡೆದಿದೆ ಎಂದು ಒಪ್ಪಿಕೊಳ್ಳುತ್ತಾರೆ. ನೀಟ್ ಪರೀಕ್ಷೆಯನ್ನು ಯಾವಾಗ ರದ್ದುಗೊಳಿಸಲಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲೂ ನಿಮ್ಮ ಸರ್ಕಾರದ ರಿಗ್ಗಿಂಗ್ ಮತ್ತು ಪೇಪರ್ ಸೋರಿಕೆಯನ್ನು ತಡೆಯುವ ಜವಾಬ್ದಾರಿಯನ್ನು ಮೋದಿಜಿ ವಹಿಸಿಕೊಳ್ಳಿ ಎಂದು ಖರ್ಗೆ ಹೇಳಿದರು.

ಶಿಕ್ಷಣ ಸಚಿವಾಲಯವು ಯುಜಿಸಿ-ನೆಟ್ ರದ್ದುಗೊಳಿಸಿ ಆದೇಶಿಸಿದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸರ್ಕಾರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ “ಭ್ರಷ್ಟಾಚಾರ ಮತ್ತು ಸೋರಿಕೆ” ಯುವಕರಿಗೆ ಹಾನಿಕಾರಕವಾಗಿದೆ ಎಂದು ಪ್ರಿಯಾಂಕಾ ಆರೋಪಿಸಿದರು.

“ನೀಟ್ ಪರೀಕ್ಷೆಯಲ್ಲಿ ಹಗರಣದ ಸುದ್ದಿಯ ನಂತರ, ಇದೀಗ ಜೂನ್ 18 ರಂದು ನಡೆದ ನೆಟ್ ಪರೀಕ್ಷೆಯನ್ನು ಅಕ್ರಮಗಳ ಭೀತಿಯಿಂದ ರದ್ದುಗೊಳಿಸಲಾಗಿದೆ, ಈಗ ಹೊಣೆಗಾರಿಕೆಯನ್ನು ಸರಿಪಡಿಸಲಾಗುತ್ತದೆಯೇ? ಶಿಕ್ಷಣ ಸಚಿವರು ಈ ಲೋಪಕ್ಕೆ ಹೊಣೆಗಾರರಾಗುತ್ತಾರೆಯೇ?” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ; ಅಣ್ಣಾಮಲೈ, ತಮಿಳಿಸೈ ಅವರನ್ನು ಟೀಕಿಸಿದ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದ ತಮಿಳುನಾಡು ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...