Homeಫ್ಯಾಕ್ಟ್‌ಚೆಕ್FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗ್ತಿದೆ ಎಂದು ಪ್ರತಿಪಾದಿಸಿ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

“ಎಂಥಾ ನಾಚಿಕೆಗೇಡು!! ನಮೋ ಮೇಲಿನ ಹೊಟ್ಟೆಕಿಚ್ಚಿಗೆ ಆಗ್ತಿದೆ ಹಲವು ರೈಲು ಅಪಘಾತಗಳು!? ಹೌದು, ಭಾರತದಲ್ಲಿ ಆಗಿರೋ ಹಲವು ರೈಲು ಅಪಘಾತಗಳಿಗೆ ಮನುಷ್ಯರೇ ಕಾರಣ ಎನ್ನಲಾಗ್ತಿದೆ. ಎಷ್ಟೋ ಕಡೆ ಬೇಕಂತಲೇ ಹಳಿಗಳ ಮೇಲೆ ಕಲ್ಲುಗಳನ್ನು ಇಡಲಾಗಿದೆ. ಕೆಲವೆಡೆ ಹಳಿಗಳ ಕೊಂಡಿಗಳನ್ನು ಮುರಿಯಲಾಗಿದೆ. ಇನ್ನೂ ಕೆಲವೆಡೆ ಸಿಗ್ನಲ್ ಕಾಣದಂತೆ ಲೈಟ್‌ಗಳಿಗೆ ಬಟ್ಟೆ ಮುಚ್ಚಲಾಗಿದೆ. ಇದು ಕಲ್ಪನೆ ಅಲ್ಲ, ನಿಜವಾಗಿಯೂ ನಡೆದಿರೋದು. ಹಾಗಿದ್ರೆ ಇದಕ್ಕೆಲ್ಲಾ ಯಾರು ಕಾರಣ?” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಪೋಸ್ಟರ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ಹಾಕಿ ಇತ್ತೀಚೆಗೆ ನಡೆದ ಕಾಂಚನ್‌ಜುಂಗಾ ರೈಲು ಅಪಘಾತವನ್ನು ರಾಜಕೀಯ ಕಾರಣಕ್ಕೆ ಮಮತಾ ಬ್ಯಾನರ್ಜಿ ಅವರೇ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಬಿಂಬಿಸಲಾಗಿದೆ.

ಇತ್ತೀಚೆಗೆ, ಕೆಲ ವ್ಯಕ್ತಿಗಳು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರ ಸ್ಕ್ರೀನ್ ಹಂಚಿಕೊಂಡಿರುವ ಕೆಲವರು, “ಮೋದಿ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಮುಂದಾಗಿರುವ ಈ ಜಿಹಾದಿ ಮನಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ರೈಲು ಸಿಗ್ನಲ್ ಕಾಣದಂತೆ ಮಾಡಿ ರೈಲುಗಳ ನಡುವೆ ಆಕ್ಸಿಂಡೆಂಟ್ ಆಗುವಂತೆ ಮಾಡುವ ಕುತಂತ್ರ ಮಾಡಿದ್ದಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಇಲ್ಲ. ರಾಜಕೀಯ ದ್ವೇಷಕ್ಕೆ ರೈಲು ಅಪಘಾತ ನಡೆಸಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಪ್ರಾಥಮಿಕ ವರದಿಗಳು, ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಮಾನವ ದೋಷದ ಸಾಧ್ಯತೆಯನ್ನು ಸೂಚಿಸುತ್ತವೆ. ಆದರೆ, ರೈಲ್ವೆ ಸುರಕ್ಷತಾ ಆಯುಕ್ತರ ತನಿಖೆ ಪೂರ್ಣಗೊಂಡ ನಂತರವೇ ಅಪಘಾತಕ್ಕೆ ನಿಖರವಾದ ಕಾರಣ ತಿಳಿಯಲಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜಿಹಾದಿ ಮನಸ್ಥಿತಿಯವರು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟಿ ಅಪಘಾತ ಆಗುವಂತೆ ಮಾಡಿದ್ದಾರೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಾದಿಸಲಾಗಿದೆ. ಈ ಮೂಲಕ ಮುಸ್ಲಿಮರು ದುಷ್ಕೃತ್ಯವೆಸಗಿದ್ದಾರೆ ಎಂದು ಬಿಂಬಿಸಲಾಗಿದೆ.

ಆದರೆ, ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಯಾರು ಕಾರಣ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಮುಸ್ಲಿಮರು ಈ ರೈಲ್ವೆ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಆದರೆ, ಈ ರೈಲು ಅಪಘಾತ ಸಂಭವಿಸಿದಾಗ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ಬಿಟ್ಟು ಮುಸ್ಲಿಮರು ಜನರ ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಮಾನವ ದೋಷಕ್ಕೆ ರೈಲು ಅಪಘಾತಗಳು ನಡೆದಿರುವ ಉದಾಹರಣೆಗಳಿವೆ. ಇನ್ನು ಜಿಹಾದಿ ಮನಸ್ಥಿತಿಯವರು ಸಿಗ್ನಲ್‌ಗೆ ಬಟ್ಟೆ ಕಟ್ಟಿ ರೈಲು ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬುವುದು ಆಧಾರ ರಹಿತವಾಗಿದೆ.

ಇದನ್ನೂ ಓದಿ : FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...