Homeಫ್ಯಾಕ್ಟ್‌ಚೆಕ್FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗ್ತಿದೆ ಎಂದು ಪ್ರತಿಪಾದಿಸಿ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

“ಎಂಥಾ ನಾಚಿಕೆಗೇಡು!! ನಮೋ ಮೇಲಿನ ಹೊಟ್ಟೆಕಿಚ್ಚಿಗೆ ಆಗ್ತಿದೆ ಹಲವು ರೈಲು ಅಪಘಾತಗಳು!? ಹೌದು, ಭಾರತದಲ್ಲಿ ಆಗಿರೋ ಹಲವು ರೈಲು ಅಪಘಾತಗಳಿಗೆ ಮನುಷ್ಯರೇ ಕಾರಣ ಎನ್ನಲಾಗ್ತಿದೆ. ಎಷ್ಟೋ ಕಡೆ ಬೇಕಂತಲೇ ಹಳಿಗಳ ಮೇಲೆ ಕಲ್ಲುಗಳನ್ನು ಇಡಲಾಗಿದೆ. ಕೆಲವೆಡೆ ಹಳಿಗಳ ಕೊಂಡಿಗಳನ್ನು ಮುರಿಯಲಾಗಿದೆ. ಇನ್ನೂ ಕೆಲವೆಡೆ ಸಿಗ್ನಲ್ ಕಾಣದಂತೆ ಲೈಟ್‌ಗಳಿಗೆ ಬಟ್ಟೆ ಮುಚ್ಚಲಾಗಿದೆ. ಇದು ಕಲ್ಪನೆ ಅಲ್ಲ, ನಿಜವಾಗಿಯೂ ನಡೆದಿರೋದು. ಹಾಗಿದ್ರೆ ಇದಕ್ಕೆಲ್ಲಾ ಯಾರು ಕಾರಣ?” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಪೋಸ್ಟರ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ಹಾಕಿ ಇತ್ತೀಚೆಗೆ ನಡೆದ ಕಾಂಚನ್‌ಜುಂಗಾ ರೈಲು ಅಪಘಾತವನ್ನು ರಾಜಕೀಯ ಕಾರಣಕ್ಕೆ ಮಮತಾ ಬ್ಯಾನರ್ಜಿ ಅವರೇ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಬಿಂಬಿಸಲಾಗಿದೆ.

ಇತ್ತೀಚೆಗೆ, ಕೆಲ ವ್ಯಕ್ತಿಗಳು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರ ಸ್ಕ್ರೀನ್ ಹಂಚಿಕೊಂಡಿರುವ ಕೆಲವರು, “ಮೋದಿ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಮುಂದಾಗಿರುವ ಈ ಜಿಹಾದಿ ಮನಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ರೈಲು ಸಿಗ್ನಲ್ ಕಾಣದಂತೆ ಮಾಡಿ ರೈಲುಗಳ ನಡುವೆ ಆಕ್ಸಿಂಡೆಂಟ್ ಆಗುವಂತೆ ಮಾಡುವ ಕುತಂತ್ರ ಮಾಡಿದ್ದಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಇಲ್ಲ. ರಾಜಕೀಯ ದ್ವೇಷಕ್ಕೆ ರೈಲು ಅಪಘಾತ ನಡೆಸಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಪ್ರಾಥಮಿಕ ವರದಿಗಳು, ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಮಾನವ ದೋಷದ ಸಾಧ್ಯತೆಯನ್ನು ಸೂಚಿಸುತ್ತವೆ. ಆದರೆ, ರೈಲ್ವೆ ಸುರಕ್ಷತಾ ಆಯುಕ್ತರ ತನಿಖೆ ಪೂರ್ಣಗೊಂಡ ನಂತರವೇ ಅಪಘಾತಕ್ಕೆ ನಿಖರವಾದ ಕಾರಣ ತಿಳಿಯಲಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜಿಹಾದಿ ಮನಸ್ಥಿತಿಯವರು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟಿ ಅಪಘಾತ ಆಗುವಂತೆ ಮಾಡಿದ್ದಾರೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಾದಿಸಲಾಗಿದೆ. ಈ ಮೂಲಕ ಮುಸ್ಲಿಮರು ದುಷ್ಕೃತ್ಯವೆಸಗಿದ್ದಾರೆ ಎಂದು ಬಿಂಬಿಸಲಾಗಿದೆ.

ಆದರೆ, ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಯಾರು ಕಾರಣ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಮುಸ್ಲಿಮರು ಈ ರೈಲ್ವೆ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಆದರೆ, ಈ ರೈಲು ಅಪಘಾತ ಸಂಭವಿಸಿದಾಗ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ಬಿಟ್ಟು ಮುಸ್ಲಿಮರು ಜನರ ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಮಾನವ ದೋಷಕ್ಕೆ ರೈಲು ಅಪಘಾತಗಳು ನಡೆದಿರುವ ಉದಾಹರಣೆಗಳಿವೆ. ಇನ್ನು ಜಿಹಾದಿ ಮನಸ್ಥಿತಿಯವರು ಸಿಗ್ನಲ್‌ಗೆ ಬಟ್ಟೆ ಕಟ್ಟಿ ರೈಲು ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬುವುದು ಆಧಾರ ರಹಿತವಾಗಿದೆ.

ಇದನ್ನೂ ಓದಿ : FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...