Homeಫ್ಯಾಕ್ಟ್‌ಚೆಕ್FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಅಪಾರ್ಟ್‌ಮೆಂಟ್ ಒಂದರ ಮುಂಭಾಗದಲ್ಲಿ ನೂರಾರು ಜಾನುವಾರುಗಳನ್ನು ಹತ್ಯೆ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರುಗಳ ಹತ್ಯೆ ಮಾಡಲಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

“ಮಮತಾ ಬ್ಯಾನರ್ಜಿಗೆ ಯಾರಾದರೂ ಬೀಫ್ ಖಾದ್ಯವನ್ನು ಉಡುಗೊರೆಯಾಗಿ ನೀಡಿದ್ರಾ?
ಪಶ್ಚಿಮ ಬಂಗಾಳವನ್ನು ನೋಡಿ. ಇದು ಪಶ್ಚಿಮ ಬಂಗಾಳದಲ್ಲಿ ಈದ್ ಆಚರಿಸಿರುವುದು” ಎಂದು
Gayatri (@changu311) ಎಂಬ ಎಕ್ಸ್ ಬಳಕೆದಾರರು ವಿಡಿಯೋ ಸಹಿತ ಪೋಸ್ಟ್ ಹಾಕಿದ್ದಾರೆ.

JIX5A (@changu311) ಎಂಬ ಮತ್ತೊಬ್ಬರು ಬಳಕೆದಾರರು ಕೂಡ “ಇದು ಹಾಲಿವುಡ್ ಸಿನಿಮಾದ ಹಾರರ್ ದೃಶ್ಯಗಳು ಎಂದು ತಪ್ಪಾಗಿ ಗ್ರಹಿಸಬಹುದು. ವಾಸ್ತವದಲ್ಲಿ, ಇದು ಪಶ್ಚಿಮ ಬಂಗಾಳದ ಬೀದಿಗಳು ಮುಗ್ಧ ಜೀವಿಗಳ ಹತ್ಯೆಯಿಂದ ರಕ್ತಸಿಕ್ತವಾಗಿರುವುದು. ಮಮತಾ ಜಿ-ಹದನ್ ಅವರ ಮತ ಬ್ಯಾಂಕ್” ಎಂದು ಬರೆದುಕೊಂಡು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ Ashwini Shrivastava (@AshwiniSahaya) ಎಂಬ ಎಕ್ಸ್‌ ಬಳಕೆದಾರರು ಜುಲೈ 1,2023ರಲ್ಲಿ ಇದೇ ವೈರಲ್ ವಿಡಿಯೋ ಪೋಸ್ಟ್ ಮಾಡಿ “ಇದು ಭಾರತದಲ್ಲಿ ಹಿಂದೂಗಳು ಬಣ್ಣದ ಹಬ್ಬ ಹೋಳಿ ಆಚರಿಸುತ್ತಿರುವುದು? ಅಲ್ಲ, ಈ ದೃಶ್ಯ ಬಾಂಗ್ಲಾ ದೇಶದ ಢಾಕಾದಲ್ಲಿರುವ ವಸತಿ ಸಂಕೀರ್ಣದ ಈದುಲ್ ಅದ್ಹಾದ (ಬಕ್ರೀದ್ 2023) ದೃಶ್ಯವಾಗಿದೆ” ಎಂದು ಬರೆದುಕೊಂಡಿದ್ದಾರೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಅಕ್ಟೋಬರ್ 24,2022 ರಂದು ‘ಅಮರ್ ಚೋಖ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿರುವ ವಸತಿ ಸಂಕೀರ್ಣವನ್ನು ಕಾಣಬಹುದು.

ವಿಡಿಯೋದಲ್ಲಿ ಬಂಗಾಳಿ ಭಾಷೆಯಲ್ಲಿ ‘ದೃಷ್ಟಿನಂದನ್ ಮಿರ್ಪುರ್ ಸಗುಫ್ತಾ ಸ್ವಪ್ನಾನಗರ ರೆಸಿಡೆನ್ಶಿಯಲ್ ಫ್ಲಾಟ್ ಪ್ರಾಜೆಕ್ಟ್‌ನ ಡ್ರೀಮ್ ಸಿಟಿ ವಸತಿ ಯೋಜನೆ” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಒಟ್ಟು 3 ನಿಮಿಷ 43 ಸೆಕೆಂಡ್‌ನ ಯೂಟ್ಯೂಬ್‌ ವಿಡಿಯೋದಲ್ಲಿ 1 ನಿಮಿಷ 6 ಸೆಕೆಂಡ್‌ನಿಂದ 3 ನಿಮಿಷದ ನಡುವೆ ನಾವು ವೈರಲ್ ವಿಡಿಯೋದಲ್ಲಿರುವ ವಸತಿ ಸಂಕೀರ್ಣವನ್ನು ನೋಡಬಹುದು. ಅಲ್ಲದೆ, ವೈರಲ್ ವಿಡಿಯೋದಲ್ಲಿ ಕಟ್ಟಡದ ಮುಂದೆ ಕೆಂಪು ಬಣ್ಣದ ಟೈಲ್ಸ್ ಹಾಕಲಾಗಿದೆ. ಅದೇ ಬಣ್ಣದ ಟೈಲ್ಸ್ ಯೂಟ್ಯೂಬ್ ವಿಡಿಯೋದಲ್ಲೂ ಇದೆ.

ಅಷ್ಟೇ ಅಲ್ಲದೆ ಗೂಗಲ್ ಮ್ಯಾಪ್‌ನಲ್ಲೂ ಸಂಪೂರ್ಣ ವಸತಿ ಸಮುಚ್ಚಯದ ಫೋಟೋಗಳನ್ನು ನೋಡಬಹುದು.

ಗೂಗಲ್ ಅರ್ಥ್‌ನಲ್ಲೂ ಕಟ್ಟಡದ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅದು ವೈರಲ್ ವಿಡಿಯೋದಲ್ಲಿರುವ ಕಟ್ಟಡದ ಮುಂಭಾಗದ ಮೈದಾನವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸ್ವಪ್ನ ನಗರ ರೆಸಿಡೆನ್ಶಿಯಲ್ ಏರಿಯಾದ ಆಟದ ಮೈದಾನ ಎಂದು ತೋರಿಸಿದೆ.

ನಾವು ವಿವಿಧ ಆಯಾಮಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ, ಜಾನುವಾರುಗಳನ್ನು ಹತ್ಯೆ ಮಾಡಿರುವ ವೈರಲ್ ವಿಡಿಯೋದಲ್ಲಿರುವ ಕಾಣಿಸಿಕೊಂಡಿರುವ ಕಟ್ಟಡ ಬಾಂಗ್ಲಾದೇಶದ್ದು ಎಂದು ತಿಳಿದು ಬಂದಿದೆ. ಹಾಗಾಗಿ, ಜಾನುವಾರುಗಳ ಹತ್ಯೆಯ ವಿಡಿಯೋ ಕೂಡ ಪಶ್ಚಿಮ ಬಂಗಾಳದಲ್ಲ ಬಾಂಗ್ಲಾದೇಶದ್ದು ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...