Homeಫ್ಯಾಕ್ಟ್‌ಚೆಕ್FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಅಪಾರ್ಟ್‌ಮೆಂಟ್ ಒಂದರ ಮುಂಭಾಗದಲ್ಲಿ ನೂರಾರು ಜಾನುವಾರುಗಳನ್ನು ಹತ್ಯೆ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರುಗಳ ಹತ್ಯೆ ಮಾಡಲಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

“ಮಮತಾ ಬ್ಯಾನರ್ಜಿಗೆ ಯಾರಾದರೂ ಬೀಫ್ ಖಾದ್ಯವನ್ನು ಉಡುಗೊರೆಯಾಗಿ ನೀಡಿದ್ರಾ?
ಪಶ್ಚಿಮ ಬಂಗಾಳವನ್ನು ನೋಡಿ. ಇದು ಪಶ್ಚಿಮ ಬಂಗಾಳದಲ್ಲಿ ಈದ್ ಆಚರಿಸಿರುವುದು” ಎಂದು
Gayatri (@changu311) ಎಂಬ ಎಕ್ಸ್ ಬಳಕೆದಾರರು ವಿಡಿಯೋ ಸಹಿತ ಪೋಸ್ಟ್ ಹಾಕಿದ್ದಾರೆ.

JIX5A (@changu311) ಎಂಬ ಮತ್ತೊಬ್ಬರು ಬಳಕೆದಾರರು ಕೂಡ “ಇದು ಹಾಲಿವುಡ್ ಸಿನಿಮಾದ ಹಾರರ್ ದೃಶ್ಯಗಳು ಎಂದು ತಪ್ಪಾಗಿ ಗ್ರಹಿಸಬಹುದು. ವಾಸ್ತವದಲ್ಲಿ, ಇದು ಪಶ್ಚಿಮ ಬಂಗಾಳದ ಬೀದಿಗಳು ಮುಗ್ಧ ಜೀವಿಗಳ ಹತ್ಯೆಯಿಂದ ರಕ್ತಸಿಕ್ತವಾಗಿರುವುದು. ಮಮತಾ ಜಿ-ಹದನ್ ಅವರ ಮತ ಬ್ಯಾಂಕ್” ಎಂದು ಬರೆದುಕೊಂಡು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ Ashwini Shrivastava (@AshwiniSahaya) ಎಂಬ ಎಕ್ಸ್‌ ಬಳಕೆದಾರರು ಜುಲೈ 1,2023ರಲ್ಲಿ ಇದೇ ವೈರಲ್ ವಿಡಿಯೋ ಪೋಸ್ಟ್ ಮಾಡಿ “ಇದು ಭಾರತದಲ್ಲಿ ಹಿಂದೂಗಳು ಬಣ್ಣದ ಹಬ್ಬ ಹೋಳಿ ಆಚರಿಸುತ್ತಿರುವುದು? ಅಲ್ಲ, ಈ ದೃಶ್ಯ ಬಾಂಗ್ಲಾ ದೇಶದ ಢಾಕಾದಲ್ಲಿರುವ ವಸತಿ ಸಂಕೀರ್ಣದ ಈದುಲ್ ಅದ್ಹಾದ (ಬಕ್ರೀದ್ 2023) ದೃಶ್ಯವಾಗಿದೆ” ಎಂದು ಬರೆದುಕೊಂಡಿದ್ದಾರೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಅಕ್ಟೋಬರ್ 24,2022 ರಂದು ‘ಅಮರ್ ಚೋಖ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿರುವ ವಸತಿ ಸಂಕೀರ್ಣವನ್ನು ಕಾಣಬಹುದು.

ವಿಡಿಯೋದಲ್ಲಿ ಬಂಗಾಳಿ ಭಾಷೆಯಲ್ಲಿ ‘ದೃಷ್ಟಿನಂದನ್ ಮಿರ್ಪುರ್ ಸಗುಫ್ತಾ ಸ್ವಪ್ನಾನಗರ ರೆಸಿಡೆನ್ಶಿಯಲ್ ಫ್ಲಾಟ್ ಪ್ರಾಜೆಕ್ಟ್‌ನ ಡ್ರೀಮ್ ಸಿಟಿ ವಸತಿ ಯೋಜನೆ” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಒಟ್ಟು 3 ನಿಮಿಷ 43 ಸೆಕೆಂಡ್‌ನ ಯೂಟ್ಯೂಬ್‌ ವಿಡಿಯೋದಲ್ಲಿ 1 ನಿಮಿಷ 6 ಸೆಕೆಂಡ್‌ನಿಂದ 3 ನಿಮಿಷದ ನಡುವೆ ನಾವು ವೈರಲ್ ವಿಡಿಯೋದಲ್ಲಿರುವ ವಸತಿ ಸಂಕೀರ್ಣವನ್ನು ನೋಡಬಹುದು. ಅಲ್ಲದೆ, ವೈರಲ್ ವಿಡಿಯೋದಲ್ಲಿ ಕಟ್ಟಡದ ಮುಂದೆ ಕೆಂಪು ಬಣ್ಣದ ಟೈಲ್ಸ್ ಹಾಕಲಾಗಿದೆ. ಅದೇ ಬಣ್ಣದ ಟೈಲ್ಸ್ ಯೂಟ್ಯೂಬ್ ವಿಡಿಯೋದಲ್ಲೂ ಇದೆ.

ಅಷ್ಟೇ ಅಲ್ಲದೆ ಗೂಗಲ್ ಮ್ಯಾಪ್‌ನಲ್ಲೂ ಸಂಪೂರ್ಣ ವಸತಿ ಸಮುಚ್ಚಯದ ಫೋಟೋಗಳನ್ನು ನೋಡಬಹುದು.

ಗೂಗಲ್ ಅರ್ಥ್‌ನಲ್ಲೂ ಕಟ್ಟಡದ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅದು ವೈರಲ್ ವಿಡಿಯೋದಲ್ಲಿರುವ ಕಟ್ಟಡದ ಮುಂಭಾಗದ ಮೈದಾನವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸ್ವಪ್ನ ನಗರ ರೆಸಿಡೆನ್ಶಿಯಲ್ ಏರಿಯಾದ ಆಟದ ಮೈದಾನ ಎಂದು ತೋರಿಸಿದೆ.

ನಾವು ವಿವಿಧ ಆಯಾಮಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ, ಜಾನುವಾರುಗಳನ್ನು ಹತ್ಯೆ ಮಾಡಿರುವ ವೈರಲ್ ವಿಡಿಯೋದಲ್ಲಿರುವ ಕಾಣಿಸಿಕೊಂಡಿರುವ ಕಟ್ಟಡ ಬಾಂಗ್ಲಾದೇಶದ್ದು ಎಂದು ತಿಳಿದು ಬಂದಿದೆ. ಹಾಗಾಗಿ, ಜಾನುವಾರುಗಳ ಹತ್ಯೆಯ ವಿಡಿಯೋ ಕೂಡ ಪಶ್ಚಿಮ ಬಂಗಾಳದಲ್ಲ ಬಾಂಗ್ಲಾದೇಶದ್ದು ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...